ಯುದ್ಧ ಆರಂಭಿಸಿದ ಇರಾನ್: ಇರಾಕ್ ನಲ್ಲಿ ಅಮೆರಿಕಾ ವಾಯುನೆಲೆಗಳ ಮೇಲೆ ಕ್ಷಿಪಣಿ ದಾಳಿ 
ವಿದೇಶ

ಯುದ್ಧ ಆರಂಭಿಸಿದ ಇರಾನ್?: ಅಮೆರಿಕಾ ವಾಯುನೆಲೆಗಳ ಮೇಲೆ ಕ್ಷಿಪಣಿ ದಾಳಿ

ಸೇನಾಧಿಕಾರಿ ಖಾಸಿಂ ಸೊಲೈಮಾನಿ ಹತ್ಯೆ ಬಳಿ ಇರಾನ್ ಹಾಗೂ ಅಮೆರಿಕಾ ನಡುವಿನ ಸಂಬಂಧ ತೀವ್ರವಾಗಿ ಹದಗಟ್ಟಿದ್ದು, ಎರಡು ರಾಷ್ಟ್ರಗಳ ಪರಿಸ್ಥಿತಿಯಿಂದಾಗಿ ವಿಶ್ವದಲ್ಲಿ 3ನೇ ಮಹಾಯುದ್ಧ ಸಂಭವಿಸುತ್ತದೆ ಎಂಬ ಮಾತುಗಳು ಕೇಳಿ ಬರುತ್ತಿರುವಾಗಲೇ ಇರಾಕ್ ನಲ್ಲಿನ ಅಮೆರಿಕಾ ವಾಯುನೆಲೆಘಳ ಮೇಲೆ ಇರಾನ್ ಕ್ಷಿಪಣಿ ದಾಳಿ ನಡೆಸಿದೆ...

ಬಾಗ್ದಾದ್: ಸೇನಾಧಿಕಾರಿ ಖಾಸಿಂ ಸೊಲೈಮಾನಿ ಹತ್ಯೆ ಬಳಿ ಇರಾನ್ ಹಾಗೂ ಅಮೆರಿಕಾ ನಡುವಿನ ಸಂಬಂಧ ತೀವ್ರವಾಗಿ ಹದಗಟ್ಟಿದ್ದು, ಎರಡು ರಾಷ್ಟ್ರಗಳ ಪರಿಸ್ಥಿತಿಯಿಂದಾಗಿ ವಿಶ್ವದಲ್ಲಿ 3ನೇ ಮಹಾಯುದ್ಧ ಸಂಭವಿಸುತ್ತದೆ ಎಂಬ ಮಾತುಗಳು ಕೇಳಿ ಬರುತ್ತಿರುವಾಗಲೇ ಇರಾಕ್ ನಲ್ಲಿನ ಅಮೆರಿಕಾ ವಾಯುನೆಲೆಘಳ ಮೇಲೆ ಇರಾನ್ ಕ್ಷಿಪಣಿ ದಾಳಿ ನಡೆಸಿದೆ. ಇರಾನ್ ರಾಷ್ಟ್ರ ಈ ವರ್ತನೆ ಅಮೆರಿಕಾದ ಸಿಟ್ಟನ್ನು ನೆತ್ತಿಗೇರುವಂತೆ ಮಾಡಿದೆ. 

ಜನವರಿ 7ರ ಸಂಜೆ 5.30ರ ಸುಮಾರಿಗೆ ಇರಾನ್ 12ಕ್ಕೂ ಹೆಚ್ಚು ಮಿಸೈಲ್ ಗಳನ್ನು ಹಾರಿಸಿದೆ. ಇರಾಕ್ ನಲ್ಲಿರುವ ಅಮೆರಿಕಾ ಸೇನಾ ನೆಲೆಗಳನ್ನು ಗುರಿಯಾಗಿರಿಸಿಕೊಂಡು ಈ ದಾಳಿ ನಡೆಸಲಾಗಿದೆ ಎಂದು ವರದಿಗಳು ತಿಳಿಸಿವೆ. 

ಕ್ಷಿಪಣಿಗಳು ಇರಾಕ್ ನೆಲೆಯಿಂದ ಹಾರಿ ಬಂದಿರುವುದು ಬಹುತೇಕ ಖಚಿತವಾಗಿದ್ದು, ಇರಾಕ್ ಹಾಗೂ ಅಮೆರಿಕಾ ಜಂಟಿಯಾಗಿ ಬಳಕೆ ಮಾಡುವ ವಾಯುನೆಲೆಯನ್ನು ಇರಾನ್ ಗುರಿಯಾಗಿಸಿಕೊಂಡಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ದಾಳಿಯಲ್ಲಿ ಎಷ್ಟು ಮಂದಿ ಸಾವನ್ನಪ್ಪಿದ್ದಾರೆ, ಗಾಯಗೊಂಡಿದ್ದಾರೆ ಹಾಗೂ ನಷ್ಟವಾಗಿರುವ ಕುರಿತು ಇನ್ನೂ ಮಾಹಿತಿ ಲಭ್ಯವಾಗಿಲ್ಲ. 

ಇರಾನ್ ಮೇಲೆ ಅಮೆರಿಕಾ ದಾಳಿ ನಡೆಸಿದ್ದಾದರೂ ಏಕೆ?
ಇರಾಕ್ ರಾಜಧಾನಿ ಬಾದ್ದಾದ್ ನಲ್ಲಿನ ಅಮೆರಿಕಾದ ರಾಯಭಾರ ಕಚೇರಿ ಮೇಲೆ ನಡೆದ ದಾಳಿ ಪ್ರತೀಕಾರವಾಗಿ ಹಾಗೂ ಮತ್ತಷ್ಟು ಅಮೆರಿಕನ್ನರನ್ನು ಕೊಲ್ಲುವ ಸಂಚಿನ ಹಿನ್ನೆಲೆಯಲ್ಲಿ ಈ ಕಾರ್ಯಾಚರಣೆ ನಡೆಸಿರುವುದಾಗಿ ಅಮೆರಿಕಾದ ಅಧ್ಯಕ್ಷ ಟ್ರಂಪ್ ಸರ್ಕಾರ ಸಮರ್ಥನೆ ಮಾಡಿಕೊಂಡಿದೆ. ಕೆಲವೇ ದಿನಘಳ ಹಿಂದೆ ಬಾಗ್ದಾದ್ ನಲ್ಲಿರುವ ಅಮೆರಿಕಾದ ರಾಯಭಾರ ಕಚೇರಿಯೊಳಕ್ಕೆ ಪ್ರತಿಭಟನಾಕಾರರು ನುಗ್ಗಲು ಯತ್ನಿಸಿದ್ದರು. 

ಅಮೆರಿಕಾದ ದಾಳಿಗೆ ಇರಾನ್ ಬೆಂಬಲಿತ ಶಿಯಾ ಬಂಡುಕೋರ ಸಂಘಟನೆ ಕತೈಬ್ ಹಿಜ್ಲುಬ್ಲ್ಲಾದ 25ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ ಹಿನ್ನೆಲೆಯಲ್ಲಿ ರೊಚ್ಚಿಗೆದ್ದಿದ್ದ ಪ್ರತಿಭಟನಾಕಾರರು ರಾಯಭಾರ ಕಚೇರಿಯ ಕಾಂಪೌಂಡ್ ಗೆ ಬೆಂಕಿ ಇಟ್ಟಿದ್ದರು. ಅಲ್ಲದೆ, ಇರಾಕ್ ನಲ್ಲಿರುವ ಅಮೆರಿಕಾ ಪಡೆಗಳ ಮೇಲೆ ಕಳೆದ ಹಲವು ತಿಂಗಳಿಂದ ದಾಳಿ ನಡೆಸಿದ್ದವು. ಹಾಗಾಗಿ ಅಮೆರಿಕಾ ಪ್ರತೀಕಾರ ತೆಗೆದುಕೊಂಡಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೈಕಮಾಂಡ್ ನಿರ್ಣಯಕ್ಕೆ ಒಪ್ಪಬೇಕು, ವರಿಷ್ಠರು ಹೇಳಿದಾಗ ದೆಹಲಿಗೆ ಹೋಗುವೆ: ಖರ್ಗೆ ಭೇಟಿ ಬಳಿಕ ಸಿದ್ದರಾಮಯ್ಯ ಪ್ರತಿಕ್ರಿಯೆ; ಡಿಕೆಶಿ ಆಪ್ತರ ನಡೆಗೆ CM ತೀವ್ರ ಅಸಮಾಧಾನ

ರಾಜ್ಯದಲ್ಲಿ ಯಾರೂ ನಿರೀಕ್ಷಿಸದಂತಹ "ಸ್ಫೋಟಕ" ರಾಜಕೀಯ ಬೆಳವಣಿಗೆ: ಕುಮಾರಸ್ವಾಮಿ ಭವಿಷ್ಯ

'ಸಿಎಂ ಕುರ್ಚಿ' ಕದನದ ನಡುವೆ ವರದಿಗಾರರ ಪ್ರಶ್ನೆಗೆ ಕೆರಳಿದ ಡಿಕೆಶಿ! ಹೇಳಿದ್ದೇನು?

ದಕ್ಷಿಣ ಆಫ್ರಿಕಾ ವಿರುದ್ಧ ಏಕದಿನ ಸರಣಿ: ನಾಯಕ ಯಾರು? ರಿಷಭ್ ಪಂತ್ ಅಥವಾ ಕೆಎಲ್ ರಾಹುಲ್! ನಾಳೆ ನಿರ್ಧಾರ

"ನಾವೂ ಕಲಿಯಬೇಕು": ಮಾಮ್ದಾನಿ-ಟ್ರಂಪ್ ಭೇಟಿಯ ಬಗ್ಗೆ ತರೂರ್ ಪೋಸ್ಟ್; ನೀವು ಹೇಳಿದ್ದು ಸರಿ ಆದರೆ ರಾಹುಲ್ ಗೆ ಇದೆಲ್ಲಾ ಅರ್ಥ ಆಗತ್ತಾ?: BJP

SCROLL FOR NEXT