ಯುದ್ಧ ಆರಂಭಿಸಿದ ಇರಾನ್: ಇರಾಕ್ ನಲ್ಲಿ ಅಮೆರಿಕಾ ವಾಯುನೆಲೆಗಳ ಮೇಲೆ ಕ್ಷಿಪಣಿ ದಾಳಿ 
ವಿದೇಶ

ಯುದ್ಧ ಆರಂಭಿಸಿದ ಇರಾನ್?: ಅಮೆರಿಕಾ ವಾಯುನೆಲೆಗಳ ಮೇಲೆ ಕ್ಷಿಪಣಿ ದಾಳಿ

ಸೇನಾಧಿಕಾರಿ ಖಾಸಿಂ ಸೊಲೈಮಾನಿ ಹತ್ಯೆ ಬಳಿ ಇರಾನ್ ಹಾಗೂ ಅಮೆರಿಕಾ ನಡುವಿನ ಸಂಬಂಧ ತೀವ್ರವಾಗಿ ಹದಗಟ್ಟಿದ್ದು, ಎರಡು ರಾಷ್ಟ್ರಗಳ ಪರಿಸ್ಥಿತಿಯಿಂದಾಗಿ ವಿಶ್ವದಲ್ಲಿ 3ನೇ ಮಹಾಯುದ್ಧ ಸಂಭವಿಸುತ್ತದೆ ಎಂಬ ಮಾತುಗಳು ಕೇಳಿ ಬರುತ್ತಿರುವಾಗಲೇ ಇರಾಕ್ ನಲ್ಲಿನ ಅಮೆರಿಕಾ ವಾಯುನೆಲೆಘಳ ಮೇಲೆ ಇರಾನ್ ಕ್ಷಿಪಣಿ ದಾಳಿ ನಡೆಸಿದೆ...

ಬಾಗ್ದಾದ್: ಸೇನಾಧಿಕಾರಿ ಖಾಸಿಂ ಸೊಲೈಮಾನಿ ಹತ್ಯೆ ಬಳಿ ಇರಾನ್ ಹಾಗೂ ಅಮೆರಿಕಾ ನಡುವಿನ ಸಂಬಂಧ ತೀವ್ರವಾಗಿ ಹದಗಟ್ಟಿದ್ದು, ಎರಡು ರಾಷ್ಟ್ರಗಳ ಪರಿಸ್ಥಿತಿಯಿಂದಾಗಿ ವಿಶ್ವದಲ್ಲಿ 3ನೇ ಮಹಾಯುದ್ಧ ಸಂಭವಿಸುತ್ತದೆ ಎಂಬ ಮಾತುಗಳು ಕೇಳಿ ಬರುತ್ತಿರುವಾಗಲೇ ಇರಾಕ್ ನಲ್ಲಿನ ಅಮೆರಿಕಾ ವಾಯುನೆಲೆಘಳ ಮೇಲೆ ಇರಾನ್ ಕ್ಷಿಪಣಿ ದಾಳಿ ನಡೆಸಿದೆ. ಇರಾನ್ ರಾಷ್ಟ್ರ ಈ ವರ್ತನೆ ಅಮೆರಿಕಾದ ಸಿಟ್ಟನ್ನು ನೆತ್ತಿಗೇರುವಂತೆ ಮಾಡಿದೆ. 

ಜನವರಿ 7ರ ಸಂಜೆ 5.30ರ ಸುಮಾರಿಗೆ ಇರಾನ್ 12ಕ್ಕೂ ಹೆಚ್ಚು ಮಿಸೈಲ್ ಗಳನ್ನು ಹಾರಿಸಿದೆ. ಇರಾಕ್ ನಲ್ಲಿರುವ ಅಮೆರಿಕಾ ಸೇನಾ ನೆಲೆಗಳನ್ನು ಗುರಿಯಾಗಿರಿಸಿಕೊಂಡು ಈ ದಾಳಿ ನಡೆಸಲಾಗಿದೆ ಎಂದು ವರದಿಗಳು ತಿಳಿಸಿವೆ. 

ಕ್ಷಿಪಣಿಗಳು ಇರಾಕ್ ನೆಲೆಯಿಂದ ಹಾರಿ ಬಂದಿರುವುದು ಬಹುತೇಕ ಖಚಿತವಾಗಿದ್ದು, ಇರಾಕ್ ಹಾಗೂ ಅಮೆರಿಕಾ ಜಂಟಿಯಾಗಿ ಬಳಕೆ ಮಾಡುವ ವಾಯುನೆಲೆಯನ್ನು ಇರಾನ್ ಗುರಿಯಾಗಿಸಿಕೊಂಡಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ದಾಳಿಯಲ್ಲಿ ಎಷ್ಟು ಮಂದಿ ಸಾವನ್ನಪ್ಪಿದ್ದಾರೆ, ಗಾಯಗೊಂಡಿದ್ದಾರೆ ಹಾಗೂ ನಷ್ಟವಾಗಿರುವ ಕುರಿತು ಇನ್ನೂ ಮಾಹಿತಿ ಲಭ್ಯವಾಗಿಲ್ಲ. 

ಇರಾನ್ ಮೇಲೆ ಅಮೆರಿಕಾ ದಾಳಿ ನಡೆಸಿದ್ದಾದರೂ ಏಕೆ?
ಇರಾಕ್ ರಾಜಧಾನಿ ಬಾದ್ದಾದ್ ನಲ್ಲಿನ ಅಮೆರಿಕಾದ ರಾಯಭಾರ ಕಚೇರಿ ಮೇಲೆ ನಡೆದ ದಾಳಿ ಪ್ರತೀಕಾರವಾಗಿ ಹಾಗೂ ಮತ್ತಷ್ಟು ಅಮೆರಿಕನ್ನರನ್ನು ಕೊಲ್ಲುವ ಸಂಚಿನ ಹಿನ್ನೆಲೆಯಲ್ಲಿ ಈ ಕಾರ್ಯಾಚರಣೆ ನಡೆಸಿರುವುದಾಗಿ ಅಮೆರಿಕಾದ ಅಧ್ಯಕ್ಷ ಟ್ರಂಪ್ ಸರ್ಕಾರ ಸಮರ್ಥನೆ ಮಾಡಿಕೊಂಡಿದೆ. ಕೆಲವೇ ದಿನಘಳ ಹಿಂದೆ ಬಾಗ್ದಾದ್ ನಲ್ಲಿರುವ ಅಮೆರಿಕಾದ ರಾಯಭಾರ ಕಚೇರಿಯೊಳಕ್ಕೆ ಪ್ರತಿಭಟನಾಕಾರರು ನುಗ್ಗಲು ಯತ್ನಿಸಿದ್ದರು. 

ಅಮೆರಿಕಾದ ದಾಳಿಗೆ ಇರಾನ್ ಬೆಂಬಲಿತ ಶಿಯಾ ಬಂಡುಕೋರ ಸಂಘಟನೆ ಕತೈಬ್ ಹಿಜ್ಲುಬ್ಲ್ಲಾದ 25ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ ಹಿನ್ನೆಲೆಯಲ್ಲಿ ರೊಚ್ಚಿಗೆದ್ದಿದ್ದ ಪ್ರತಿಭಟನಾಕಾರರು ರಾಯಭಾರ ಕಚೇರಿಯ ಕಾಂಪೌಂಡ್ ಗೆ ಬೆಂಕಿ ಇಟ್ಟಿದ್ದರು. ಅಲ್ಲದೆ, ಇರಾಕ್ ನಲ್ಲಿರುವ ಅಮೆರಿಕಾ ಪಡೆಗಳ ಮೇಲೆ ಕಳೆದ ಹಲವು ತಿಂಗಳಿಂದ ದಾಳಿ ನಡೆಸಿದ್ದವು. ಹಾಗಾಗಿ ಅಮೆರಿಕಾ ಪ್ರತೀಕಾರ ತೆಗೆದುಕೊಂಡಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಹಿಮಾಚಲದಲ್ಲಿ ಭಾರಿ ಭೂಕುಸಿತ: ಬಸ್‌ ಮೇಲೆಯೇ ಬಿದ್ದ ಪರ್ವತ; ಕನಿಷ್ಠ 18 ಮಂದಿ ಸಾವು

ಶಬರಿಮಲೆ ದೇವಸ್ಥಾನದ ಚಿನ್ನ ನಾಪತ್ತೆ ಪ್ರಕರಣ: ಹಿರಿಯ ಅಧಿಕಾರಿ ಅಮಾನತು

BiggBoss Kannada: ಜಾಲಿವುಡ್​ ಸ್ಟುಡಿಯೋಸ್​ಗೆ ಬೀಗ; ಮನೆಯಿಂದ ಹೊರಬಂದ ಬಿಗ್‌ಬಾಸ್‌ ಸ್ಪರ್ಧಿಗಳು ಹೋಗಿದ್ದೇಲ್ಲಿಗೆ?

ಥಿಯೇಟರ್ ಹಾಗೂ ರಸ್ತೆಗಳಲ್ಲಿ ದೈವದ ಅನುಕರಣೆ ಮಾಡಬೇಡಿ: ಪ್ರೇಕ್ಷಕರಲ್ಲಿ ಕಾಂತಾರ: ಅಧ್ಯಾಯ 1 ಚಿತ್ರತಂಡ ಮನವಿ!

ಸುಪ್ರೀಂಕೋರ್ಟ್ ನಲ್ಲಿ ತಮ್ಮತ್ತ ಶೂ ಎಸೆದಿದ್ದವನಿಗೆ ಕ್ಷಮೆ ನೀಡಿದ CJI

SCROLL FOR NEXT