ವಿದೇಶ

ಉಕ್ರೇನ್ ನ ವಿಮಾನ ಟೆಹ್ರಾನ್ ಬಳಿ ಪತನ: ಎಲ್ಲಾ 180 ಪ್ರಯಾಣಿಕರು ಸಾವು 

180 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಉಕ್ರೇನ್ ನ ವಿಮಾನ ಬುಧವಾರ ಬೆಳಗ್ಗೆ ಟೆಹ್ರಾನ್ ವಿಮಾನ ನಿಲ್ದಾಣ ಹತ್ತಿರ ಅಪಘಾತಕ್ಕೀಡಾಗಿದೆ ಎಂದು ಇರಾನ್ ನ ಮಾಧ್ಯಮ ವರದಿ ಮಾಡಿದೆ. 

ಟೆಹ್ರಾನ್: ಸುಮಾರು 180 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಉಕ್ರೇನ್ ನ ವಿಮಾನ ಬುಧವಾರ ಬೆಳಗ್ಗೆ ಟೆಹ್ರಾನ್ ವಿಮಾನ ನಿಲ್ದಾಣ ಸಮೀಪ ಟೇಕ್ ಆಫ್ ಆದ ಕೆಲವೇ ಹೊತ್ತಿನಲ್ಲಿ ಅಪಘಾತಕ್ಕೀಡಾಗಿ ವಿಮಾನದಲ್ಲಿದ್ದವರೆಲ್ಲರೂ ಮೃತಪಟ್ಟಿದ್ದಾರೆ ಎಂದು ಇರಾನ್ ಮಾಧ್ಯಮ ವರದಿ ಮಾಡಿದೆ.

ಟೆಹ್ರಾನ್ ನ ಇಮಾಮ್ ಖೊಮೈನಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಹೊರಟ ವಿಮಾನ ತಾಂತ್ರಿಕ ತೊಂದರೆಯಿಂದ ಅಪಘಾತಕ್ಕೀಡಾಗಿರಬಹುದು ಎಂದು ಪ್ರಾಥಮಿಕ ವರದಿ ಹೇಳಿದೆ. ಟೆಹ್ರಾನ್ ನ ನೈರುತ್ಯ ಭಾಗದಲ್ಲಿ ಈ ಅಪಘಾತ ಸಂಭವಿಸಿದ್ದು ತನಿಖಾ ತಂಡ ಸದ್ಯ ಅಲ್ಲಿ ತನಿಖೆ ನಡೆಸುತ್ತಿದೆ ಎಂದು ನಾಗರಿಕ ವಿಮಾನಯಾನ ವಕ್ತಾರ ರೆಜಾ ಜಾಫರ್ಜಾಡೆ ತಿಳಿಸಿದ್ದಾರೆ.

ಉಕ್ರೇನ್ ನ 737-800 ವಿಮಾನ ಇಂದು ಬೆಳಗ್ಗೆ ಉಕ್ರೇನ್ ನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಟೇಕ್ ಆಫ್ ಆದ ಸ್ವಲ್ಪ ಹೊತ್ತಿನಲ್ಲಿ ಸಂದೇಶ ರವಾನಿಸುವುದನ್ನು ನಿಲ್ಲಿಸಿತು ಎಂದು ಫೈಟ್ ರಾಡಾರ್ 24 ವೆಬ್ ಸೈಟ್ ವರದಿ ಮಾಡಿದೆ. ಈ ಬಗ್ಗೆ ವಿಮಾನಯಾನ ಸಂಸ್ಥೆ ತಕ್ಷಣಕ್ಕೆ ಪ್ರತಿಕ್ರಿಯೆ ನೀಡಿಲ್ಲ.

ಇರಾನ್ ನ ಕ್ರಾಂತಿಕಾರಿ ನಾಯಕ ಜನರಲ್ ಖಾಸಿಮ್ ಸೊಲೈಮಾನಿಯ ಹತ್ಯೆಗೆ ಪ್ರತೀಕಾರವಾಗಿ ಇರಾಕ್ ನ ಅಮೆರಿಕಾ ಸೇನಾಪಡೆ ಮೇಲೆ ಇರಾನ್ ಕ್ಷಿಪಣಿ ದಾಳಿ ನಡೆಸಿದ ಸ್ವಲ್ಪ ಹೊತ್ತಿನಲ್ಲಿಯೇ ವಿಮಾನ ಅಪಘಾತಕ್ಕೀಡಾಗಿದೆ. ಇರಾನ್ ನ ತುರ್ತು ಸೇವಾ ಅಧಿಕಾರಿ ಪಿರ್ ಹುಸೈನ್ ಕುಲಿವಂದ್ ನಂತರ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿ, ವಿಮಾನದಲ್ಲಿ ಪ್ರಯಾಣಿಸುತ್ತಿದ್ದವರೆಲ್ಲರೂ ಮೃತಪಟ್ಟಿದ್ದಾರೆ.

ರಕ್ಷಣಾ ತಂಡ ಮೃತ ಶರೀರಗಳನ್ನು ಹೊರತೆಗೆಯಲು ನೋಡುತ್ತಿದೆ. 1990 ದಶಕದಲ್ಲಿ ಪ್ರಯಾಣಿಕರ ವಿಮಾನಕ್ಕೆ ಪರಿಚಯವಾದ 737-800 ವಿಮಾನ ಬೋಯಿಂಗ್ 737 ಮ್ಯಾಕ್ಸ್ ನ ಹಳೆ ಮಾದರಿಯಾಗಿದ್ದು ಇತ್ತೀಚಿನ ಸಮಯಗಳಲ್ಲಿ ಅನೇಕ ಭೀಕರ ಅಪಘಾತಕ್ಕೀಡಾಗುತ್ತಿದೆ.

ಮಾರ್ಚ್ 2016ರಲ್ಲಿ ಫ್ಲೈದುಬೈ 737-800 ದುಬೈಯಿಂದ ಹೊರಟಿದ್ದ ವಿಮಾನ ರಷ್ಯಾದ ರೊಸ್ಟೊವ್-ಆನ್-ಡೊನ್ ವಿಮಾನ ನಿಲ್ದಾಣದಲ್ಲಿ ಲ್ಯಾಂಡಿಂಗ್ ಆಗುತ್ತಿರುವಾಗ ಭೀಕರ ಅಪಘಾತಕ್ಕೀಡಾಗಿ 62 ಪ್ರಯಾಣಿಕರು ಮೃತಪಟ್ಟಿದ್ದರು. ಮತ್ತೊಂದು 737-800 ವಿಮಾನ ದುಬೈಯಿಂದ ಹೊರಟಿದ್ದ ವಿಮಾನ ಮೇ 2010ರಲ್ಲಿ ಮಂಗಳೂರು ಸಮೀಪ ಲ್ಯಾಂಡಿಂಗ್ ಆಗುವಾಗ 150ಕ್ಕೂ ಅಧಿಕ ಪ್ರಯಾಣಿಕರು ಮೃತಪಟ್ಟಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಲಾಲ್ ಬಾಗ್ ಅಭಿವೃದ್ಧಿಗೆ 10 ಕೋಟಿ ರೂ; ಸುರಂಗ ರಸ್ತೆ ಯೋಜನೆಯಿಂದ ಸಸ್ಯೋದ್ಯಾನದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ: ಡಿ.ಕೆ ಶಿವಕುಮಾರ್; Video

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ: ಒಂದಾದ ಜಾರಕಿಹೊಳಿ ಬ್ರದರ್ಸ್‌ಗೆ ಜಾಕ್‌ಪಾಟ್; ರಮೇಶ್ ಕತ್ತಿ ಬಣಕ್ಕೆ ಶಾಕ್!

ನೊಬೆಲ್ ಶಾಂತಿ ಪ್ರಶಸ್ತಿ ಘೋಷಣೆಯಾಗುತ್ತಿದ್ದಂತೆಯೇ Maria Corina Machado ವಿವಾದಕ್ಕೆ ಗುರಿ; ಭುಗಿಲೆದ್ದ ಅಶಾಂತಿ!

Shocking: ಹೆಣ್ಣಿನ ಶವ ಎಳೆದೊಯ್ದು ಶವಾಗಾರದಲ್ಲೇ ಅತ್ಯಾಚಾರ, 25ರ ಯುವಕನಿಂದ ಪೈಶಾಚಿಕ ಕೃತ್ಯ, CCTV Video

Belagavi: ಲವರ್ ಜೊತೆ ಮಗಳು ಪರಾರಿ; ಇಡೀ ಊರಿಗೆ 'ತಿಥಿ' ಊಟ ಹಾಕಿಸಿದ ತಂದೆ!

SCROLL FOR NEXT