ಇರಾನ್ ವಿದೇಶಾಂಗ ಸಚಿವ 
ವಿದೇಶ

ನಾವು ಯುದ್ಧ ಬಯಸುವುದಿಲ್ಲ, ಆದರೆ ನಮ್ಮನ್ನು ರಕ್ಷಿಸಿಕೊಳ್ಳಲು ನೋಡುತ್ತೇವೆ: ಕ್ಷಿಪಣಿ ದಾಳಿ ಬಗ್ಗೆ ಇರಾನ್

ನಾವು ಯುದ್ಧವನ್ನು ಬಯಸುವುದಿಲ್ಲ, ಆದರೆ ಆಕ್ರಮಣಶೀಲತೆಯಿಂದ ರಕ್ಷಿಸಿಕೊಳ್ಳಲು ಬಯಸುತ್ತೇವೆ, ಹೀಗಾಗಿ ಅಮೆರಿಕಾದ ವಾಯುನೆಲೆಗಳ ಮೇಲೆ ಕ್ಷಿಪಣಿ ದಾಳಿ ಆರಂಭಿಸಿದ್ದೇವೆ ಎಂದು ಇರಾನ್ ನ ವಿದೇಶಾಂಗ ಸಚಿವ ಜಾವದ್ ಜಾಫಿರ್ ಪ್ರತಿಕ್ರಿಯೆ ನೀಡಿದ್ದಾರೆ.

ಟೆಹ್ರಾನ್: ನಾವು ಯುದ್ಧವನ್ನು ಬಯಸುವುದಿಲ್ಲ, ಆದರೆ ಆಕ್ರಮಣಶೀಲತೆಯಿಂದ ನಮ್ಮನ್ನು ರಕ್ಷಿಸಿಕೊಳ್ಳಲು ಬಯಸುತ್ತೇವೆ, ಹೀಗಾಗಿ ಅಮೆರಿಕಾದ ವಾಯುನೆಲೆಗಳ ಮೇಲೆ ಕ್ಷಿಪಣಿ ದಾಳಿ ಆರಂಭಿಸಿದ್ದೇವೆ ಎಂದು ಇರಾನ್ ನ ವಿದೇಶಾಂಗ ಸಚಿವ ಜಾವದ್ ಜಾಫಿರ್ ಪ್ರತಿಕ್ರಿಯೆ ನೀಡಿದ್ದಾರೆ.


ಸೇನಾಧಿಕಾರಿ ಖಾಸಿಂ ಸೊಲೈಮಾನಿ ಹತ್ಯೆ ಬಳಿ ಇರಾನ್ ಹಾಗೂ ಅಮೆರಿಕಾ ನಡುವಿನ ಸಂಬಂಧ ತೀವ್ರವಾಗಿ ಹದಗಟ್ಟಿದ್ದು, ಎರಡು ರಾಷ್ಟ್ರಗಳ ಪರಿಸ್ಥಿತಿಯಿಂದಾಗಿ ವಿಶ್ವದಲ್ಲಿ 3ನೇ ಮಹಾಯುದ್ಧ ಸಂಭವಿಸುತ್ತದೆ ಎಂಬ ಮಾತುಗಳು ಕೇಳಿ ಬರುತ್ತಿರುವಾಗಲೇ ಇರಾಕ್ ನಲ್ಲಿನ ಅಮೆರಿಕಾ ವಾಯುಪಡೆಗಳ ಮೇಲೆ ಇರಾನ್ ಕ್ಷಿಪಣಿ ದಾಳಿ ಆರಂಭಿಸಿದೆ. ಇದರಿಂದ ವಿಶ್ವದಲ್ಲಿ ಮೂರನೇ ಮಹಾಯುದ್ಧ ಆರಂಭವಾಗುತ್ತದೆ ಎಂಬ ಮಾತುಗಳು ಕೇಳಿಬರುತ್ತಿವೆ.


ಈ ದಾಳಿ ಬಗ್ಗೆ ಪ್ರತಿಕ್ರಿಯಿಸಿರುವ ಇರಾನ್ ನ ವಿದೇಶಾಂಗ ಸಚಿವ, ವಿಶ್ವಸಂಸ್ಥೆ ಪರಿಚ್ಛೇದ 51ರ ಪ್ರಕಾರ, ನಮ್ಮ ದೇಶದ ನಾಗರಿಕರು ಮತ್ತು ಹಿರಿಯ ಸೇನಾಧಿಕಾರಿಗಳ ಮೇಲೆ ಅಮೆರಿಕಾ ಸಶಸ್ತ್ರ ದಾಳಿ ನಡೆಸಿದಾಗ ಆತ್ಮ ರಕ್ಷಣೆಗಾಗಿ ತೆಗೆದುಕೊಂಡ ಕ್ರಮವೇ ಅಮೆರಿಕಾ ವಾಯುಪಡೆ ಮೇಲೆ ನಡೆಸಿದ ಇಂದಿನ ಕ್ಷಿಪಣಿ ದಾಳಿಯಾಗಿದೆ ಎಂದಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT