ಉಕ್ರೇನ್ ವಿಮಾನ ಅಪಘಾತದಲ್ಲಿ ಮೃತ ಶವಗಳನ್ನು ಹೊರತೆಗೆಯುತ್ತಿರುವ ಸಿಬ್ಬಂದಿ 
ವಿದೇಶ

ಉಕ್ರೇನ್ ವಿಮಾನವನ್ನು ಇರಾನ್ ಆಕಸ್ಮಿಕವಾಗಿ ಹೊಡೆದುರುಳಿಸಿದೆ: ಅಮೆರಿಕಾ ಅಧಿಕಾರಿಗಳು 

ಕಳೆದ ಮಂಗಳವಾರ ಉಕ್ರೇನ್ ನ ವಿಮಾನ ಭೀಕರ ಅಪಘಾತಕ್ಕೀಡಾಗಿ ಎಲ್ಲಾ 176 ಪ್ರಯಾಣಿಕರು ಮೃತಪಟ್ಟಿದ್ದು ಇರಾನ್ ನ ಕ್ಷಿಪಣಿ ದಾಳಿಯಿಂದ ಎಂದು ಅಮೆರಿಕಾದ ಅಧಿಕಾರಿಗಳು ತಿಳಿಸಿದ್ದಾರೆ. 

ವಾಷಿಂಗ್ಟನ್: ಕಳೆದ ಮಂಗಳವಾರ ಉಕ್ರೇನ್ ನ ವಿಮಾನ ಭೀಕರ ಅಪಘಾತಕ್ಕೀಡಾಗಿ ಎಲ್ಲಾ 176 ಪ್ರಯಾಣಿಕರು ಮೃತಪಟ್ಟಿದ್ದು ಇರಾನ್ ನ ಕ್ಷಿಪಣಿ ದಾಳಿಯಿಂದ ಎಂದು ಅಮೆರಿಕಾದ ಅಧಿಕಾರಿಗಳು ತಿಳಿಸಿದ್ದಾರೆ. ಅದು ಇರಾನ್ ನ ತಪ್ಪಿನಿಂದ ಆಗಿರಬಹುದೇ ಹೊರತು ಉದ್ದೇಶಪೂರ್ವಕವಾಗಿ ನಡೆಸಿದ ದಾಳಿಯಾಗಿರಲಿಕ್ಕಿಲ್ಲ ಎಂದು ಅವರು ಹೇಳಿದ್ದಾರೆ.


ಈ ವಿಮಾನ ಅಪಘಾತದಲ್ಲಿ ಕನಿಷ್ಠ 63 ಮಂದಿ ಕೆನಡಾದ ಪ್ರಜೆಗಳು ಮೃತಪಟ್ಟಿದ್ದು ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಕೆನಡಾದ ಪ್ರಧಾನಿ ಜಸ್ಟಿನ್ ಟ್ರುಡೊ ಸಹ ಟೊರಂಟೊದಲ್ಲಿ ಸುದ್ದಿಗೋಷ್ಠಿಯಲ್ಲಿ ಇದೇ ಮಾತುಗಳನ್ನು ಹೇಳಿದ್ದರು. ಮೇಲ್ಮೈ ವಾಯು ಕ್ಷಿಪಣಿ ದಾಳಿಯಿಂದ ವಿಮಾನ ಅಪಘಾತಕ್ಕೀಡಾಗಿರಬಹುದೆ ಹೊರತು ಉದ್ದೇಶಪೂರ್ವಕವಾಗಿ ನಡೆಸಿದ ದಾಳಿಯಾಗಿರಲಿಕ್ಕಿಲ್ಲ ಎಂದು ಹೇಳಿದ್ದರು.


ತನ್ನ ಕ್ರಾಂತಿಕಾರಿ ಸೇನಾಧಿಕಾರಿ ಖಾಸಿಮ್ ಸೊಲೈಮಾನಿಯನ್ನು ಹತ್ಯೆಗೈದ ಅಮೆರಿಕಾ ಸೇನಾ ನೆಲೆ ಮೇಲೆ ಪ್ರತೀಕಾರವಾಗಿ ಇರಾನ್ ಕ್ಷಿಪಣಿ ದಾಳಿ ನಡೆಸಿದ ಕೆಲವೇ ಗಂಟೆಗಳಲ್ಲಿ ಉಕ್ರೇನ್ ನ ವಿಮಾನ ಅಪಘಾತಕ್ಕೀಡಾಗಿದೆ. ಸೂಕ್ಷ್ಮ ಭದ್ರತೆ ಬಗ್ಗೆ ಮಾತನಾಡಿದ ಅಮೆರಿಕಾದ ಇಬ್ಬರು ಅಧಿಕಾರಿಗಳು ಈ ಅಪಘಾತದ ಹಿಂದೆ ಇರಾನ್ ನ ಉದ್ದೇಶ ಏನಿತ್ತು ಎಂಬುದು ಗೊತ್ತಿಲ್ಲ. ಆದರೆ ಇದು ಬೆದರಿಕೆಯೊಡ್ಡಲು ನಡೆಸಿದ ಅಪಘಾತ ಎಂದು ತಪ್ಪಾಗಿ ಭಾವಿಸಿರಬಹುದು ಎಂದು ಹೇಳಲಾಗುತ್ತಿದೆ.


ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆರಂಭದಲ್ಲಿ ಇರಾನ್ ಈ ಅಪಘಾತಕ್ಕೆ ಕಾರಣವಾಗಿರಬಹುದು ಎಂಬರ್ಥದಲ್ಲಿ ಹೇಳಿದ್ದರು. ತಾಂತ್ರಿಕ ಸಮಸ್ಯೆಯಿಂದ ವಿಮಾನ ಅಪಘಾತವಾಗಿದೆ ಎಂಬ ಇರಾನ್ ನ ಆರಂಭದ ಹೇಳಿಕೆಯನ್ನು ತಳ್ಳಿಹಾಕಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ದೆಹಲಿ ಸಭೆ ಬಳಿಕ ಬೆಂಗಳೂರಿನಲ್ಲಿ ಶಕ್ತಿ ಪ್ರದರ್ಶನಕ್ಕೆ ಸಿದ್ದರಾಮಯ್ಯ ಸಜ್ಜು: ಬೆಂಬಲಿಗರ ಜೊತೆ ಮಹತ್ವದ ಸಭೆ, ಹೆಚ್ಚಿದ ಕುತೂಹಲ

ಹೈಕಮಾಂಡ್ ಸೂಚನೆಗೆ ಮಣಿದ ಸಿದ್ದರಾಮಯ್ಯ: ಮುಖ್ಯಮಂತ್ರಿ ಸ್ಥಾನ ತ್ಯಜಿಸಲು ಸಮ್ಮತಿ; ಕಾಂಗ್ರೆಸ್ ಪವರ್ ಶಿಫ್ಟ್‌ಗೆ ಕೌಂಟ್‌ಡೌನ್ ಶುರು, ಡಿಕೆಶಿಗೆ ಸಿಎಂ ಪಟ್ಟ..?

ಬೆಂಗಳೂರಿಗೂ ಎಂಟ್ರಿ ಕೊಟ್ಟಿತೇ ಮಹಾಮಾರಿ ಎಬೋಲಾ? ಆಫ್ರಿಕಾದಿಂದ ಬಂದ ಮಹಿಳೆಯಲ್ಲಿ ಸೋಂಕಿನ ಲಕ್ಷಣ ಪತ್ತೆ, ಆರೋಗ್ಯ ಇಲಾಖೆ ಹೈ ಅಲರ್ಟ್

CMRL ಹಣ ಅಕ್ರಮ ವರ್ಗಾವಣೆ ಪ್ರಕರಣ: ಕೇರಳ ಮಾಜಿ ಸಿಎಂ ಪಿಣರಾಯಿ ವಿಜಯನ್ ನಿವಾಸದ ಮೇಲೆ ED ದಾಳಿ..!

IPL 2026: ಗುಜರಾತ್ ವಿರುದ್ಧ ಭರ್ಜರಿ ಗೆಲುವು; ಸತತ 2ನೇ ಬಾರಿ ಫೈನಲ್ಸ್ ಪ್ರವೇಶಿಸಿದ RCB

SCROLL FOR NEXT