ಸಂಗ್ರಹ ಚಿತ್ರ 
ವಿದೇಶ

ಇರಾನ್​ ವಾಯುಮಾರ್ಗದಲ್ಲಿ ಸದ್ಯಕ್ಕೆ ಸಂಚಾರ ಬೇಡ; ಇಎಎಸ್​ಎ ಎಚ್ಚರಿಕೆ ಸಂದೇಶ

ಸಂಘರ್ಷ ಪೀಡಿತ ಇರಾನ್ ನಲ್ಲಿ ಸದ್ಯಕ್ಕೆ ವಾಯು ಸಂಚಾರ ಬೇಡ ಎಂದು ಯುರೋಪಿಯನ್​ ಒಕ್ಕೂಟದ ವಾಯುಯಾನ ಸುರಕ್ಷತಾ ಸಂಸ್ಥೆ ವಿಮಾನಯಾನ ಸಂಸ್ಥೆಗಳಿಗೆ ಸೂಚನೆ ನೀಡಿದೆ.

ಬ್ರುಸೆಲ್ಸ್: ಸಂಘರ್ಷ ಪೀಡಿತ ಇರಾನ್ ನಲ್ಲಿ ಸದ್ಯಕ್ಕೆ ವಾಯು ಸಂಚಾರ ಬೇಡ ಎಂದು ಯುರೋಪಿಯನ್​ ಒಕ್ಕೂಟದ ವಾಯುಯಾನ ಸುರಕ್ಷತಾ ಸಂಸ್ಥೆ ವಿಮಾನಯಾನ ಸಂಸ್ಥೆಗಳಿಗೆ ಸೂಚನೆ ನೀಡಿದೆ.

ಉಕ್ರೇನ್​ ವಿಮಾನವನ್ನು ಹೊಡೆದುರುಳಿಸಿದ್ದು ತಾವೇ ಎಂದು ಇರಾನ್​ ಸೇನೆ ಒಪ್ಪಿಕೊಂಡಿದ ಬೆನ್ನಲ್ಲೇ ಯುರೋಪಿಯನ್​ ಒಕ್ಕೂಟದ ವಾಯುಯಾನ ಸುರಕ್ಷತಾ ಸಂಸ್ಥೆ ಎಲ್ಲ ಏರ್​ಲೈನ್ಸ್​ಗಳಿಗೂ ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಿದ್ದು, ತನ್ನ ಮುಂದಿನ ಆದೇಶದವರೆಗೂ ಇರಾನ್ ವಾಯು ಗಡಿ ಬಳಕೆ ಬೇಡ ಎಂದು ಹೇಳಿದೆ.

ಅಲ್ಲದೆ, ವಾಣಿಜ್ಯ ವಿಮಾನಗಳು ತೆಹ್ರಾನ್​ ಪ್ರವೇಶ ಮಾಡುವುದು ಸದ್ಯದ ಮಟ್ಟಿಗೆ ಎಷ್ಟು ಅಪಾಯ ಎಂಬುದನ್ನು ನಾವು ಮೌಲ್ಯಮಾಪನ ಮಾಡಿದ್ದೇವೆ ಎಂದು ತಿಳಿಸಿದೆ. ಮುನ್ಸೂಚನಾ ಕ್ರಮವಾಗಿ ಭದ್ರತಾ ದಳಗಳ ಶಿಫಾರಸಿನ ಮೇರೆಗೆ ಮುಂದಿನ ಸೂಚನೆವರೆಗೂ ಇರಾನ್​ನ ವಾಯುಮಾರ್ಗದಲ್ಲಿ ವಿಮಾನಗಳ ಸಂಚಾರ ಮಾಡದೆ ಇರುವುದು ತುಂಬ ಒಳ್ಳೆಯದು ಎಂದು ಇಎಎಸ್​ಎ​ ಹೇಳಿದೆ.

ಇರಾನ್ ಸೇನಾ ಕಮಾಂಡರ್ ಸೊಲೈಮಾನಿ ಬಳಿಕ ಇರಾನ್ ಮತ್ತು ಅಮೆರಿಕ ನಡುವೆ ಸಂಘರ್ಷ ತೀವ್ರಗೊಂಡು, ಇರಾನ್ ಸೇನೆ ಇರಾಕ್ ನಲ್ಲಿರುವ ಅಮೆರಿಕ ಸೇನಾ ಕ್ಯಾಂಪ್ ಗಳ ಮೇಲೆ ದಾಳಿ ಮಾಡಿತ್ತು. ಬಳಿಕ ಅಮೆರಿಕ ಕೂಡ ತನ್ನ ಮೇಲೆ ದಾಳಿ ಮಾಡಬಹುದು ಎಂಬ ಆಂತಕದಲ್ಲಿದ್ದ ಇರಾನ್, ತನ್ನದೇ ದೇಶದ ಪ್ರಜೆಗಳು ಸಂಚರಿಸುತ್ತಿದ್ದ ಉಕ್ರೇನ್ ವಿಮಾನವನ್ನು ತಪ್ಪಾಗಿ ಗ್ರಹಿಸಿ ಹೊಡೆದುರುಳಿಸಿತ್ತು. ಪರಿಣಾಮ 176 ಮಂದಿ ದುರ್ಮರಣಕ್ಕೀಡಾಗಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT