ಪಾಕಿಸ್ತಾನದ ವಿದೇಶಾಂಗ ಸಚಿವ ಷಾ ಮಹಮೂದ್ ಖುರೇಷಿ 
ವಿದೇಶ

ಎಸ್ ಸಿಒ ಶೃಂಗಸಭೆಯಲ್ಲಿ ಭಾಗವಹಿಸಲು ಭಾರತದ ಆಹ್ವಾನಕ್ಕೆ ಕಾಯುತ್ತಿದ್ದೇವೆ:  ಪಾಕಿಸ್ತಾನ ವಿದೇಶಾಂಗ ಸಚಿವ 

ಶಾಂಘೈ ಸಹಕಾರ ಸಂಘದ(ಎಸ್ ಸಿಒ) ಶೃಂಗಸಭೆಯಲ್ಲಿ ಭಾಗವಹಿಸಲು ಭಾರತದ ಆಹ್ವಾನಕ್ಕೆ ಕಾಯುತ್ತಿರುವುದಾಗಿ ಪಾಕಿಸ್ತಾನದ ವಿದೇಶಾಂಗ ಸಚಿವ ಷಾ ಮಹಮೂದ್ ಖುರೇಷಿ ತಿಳಿಸಿದ್ದಾರೆ.

ಇಸ್ಲಾಮಾಬಾದ್: ಶಾಂಘೈ ಸಹಕಾರ ಸಂಘದ(ಎಸ್ ಸಿಒ) ಶೃಂಗಸಭೆಯಲ್ಲಿ ಭಾಗವಹಿಸಲು ಭಾರತದ ಆಹ್ವಾನಕ್ಕೆ ಕಾಯುತ್ತಿರುವುದಾಗಿ ಪಾಕಿಸ್ತಾನದ ವಿದೇಶಾಂಗ ಸಚಿವ ಷಾ ಮಹಮೂದ್ ಖುರೇಷಿ ತಿಳಿಸಿದ್ದಾರೆ.ಭಾರತದ ಆಹ್ವಾನ ಬಂದ ನಂತರ ಪಾಕಿಸ್ತಾನ ಶೃಂಗಸಭೆಯಲ್ಲಿ ಭಾಗಿಯಾಗಲಿದೆಯೇ, ಇಲ್ಲವೇ ಎಂದು ನಿರ್ಧರಿಸಲಿದೆ ಎಂದರು.


ಮೊನ್ನೆ 16ರಂದು ದೆಹಲಿಯಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡುತ್ತಾ ವಿದೇಶಾಂಗ ವ್ಯವಹಾರಗಳ ಇಲಾಖೆ ವಕ್ತಾರ ರವೀಶ್ ಕುಮಾರ್, ಭಾರತ ಸರ್ಕಾರವು ಬೇರೆ ರಾಷ್ಟ್ರಗಳ ನಾಯಕರೊಂದಿಗೆ ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ಅವರಿಗೂ ಎಸ್ ಸಿಒ ಶೃಂಗಸಭೆಯಲ್ಲಿ ಭಾಗವಹಿಸಲು ಆಹ್ವಾನ ನೀಡಲಿದೆ ಎಂದಿದ್ದರು.


ಇದೇ ಮೊದಲ ಬಾರಿಗೆ ಭಾರತ ಶಾಂಘೈ ಸಹಕಾರ ಸಂಘದ ಮಂಡಳಿ ಮುಖ್ಯಸ್ಥರ ವಾರ್ಷಿಕ ಸಭೆಯನ್ನು ಈ ಬಾರಿ ಆಯೋಜಿಸುತ್ತಿದೆ. 


ಜಮ್ಮು-ಕಾಶ್ಮೀರದ ವಿಶೇಷ ಸ್ಥಾನಮಾನವನ್ನು ರದ್ದುಪಡಿಸಿದ ನಂತರ ಪಾಕಿಸ್ತಾನದ ಜೊತೆಗಿನ ಸಂಬಂಧ ತೀವ್ರ ಹದಗೆಟ್ಟ ನಂತರ ಭಾರತ ಮತ್ತು ಪಾಕಿಸ್ತಾನದ ನಾಯಕರು ಈ ಶೃಂಗಸಭೆಯಲ್ಲಿ ಒಂದಾಗಬೇಕಿದೆ. ಚೀನಾ ನೇತೃತ್ವದ ಎಸ್ ಸಿಒಗೆ ಭಾರತ ಮತ್ತು ಪಾಕಿಸ್ತಾನಗಳು 2017ರಲ್ಲಿ ಪೂರ್ಣ ಪ್ರಮಾಣದ ಸದಸ್ಯರಾಗಿದ್ದರು. 


ಸಾಮಾನ್ಯವಾಗಿ ಈ ಶೃಂಗಸಭೆಗೆ ವಿದೇಶಿ ಸಚಿವರುಗಳು ಆಗಮಿಸಿದರೆ ಕೆಲ ದೇಶಗಳಿಂದ ಪ್ರಧಾನ ಮಂತ್ರಿಗಳು ಪ್ರತಿನಿಧಿಸುತ್ತಾರೆ.


ಎಸ್ ಸಿಒವನ್ನು 2001ರಲ್ಲಿ ಶಾಂಘೈಯಲ್ಲಿ ಸ್ಥಾಪಿಸಲಾಯಿತು, ರಷ್ಯಾ, ಚೀನಾ, ಕಜಕಿಸ್ತಾನ, ತಜಕಿಸ್ತಾನ, ಉಜ್ಬೇಕಿಸ್ತಾನ ಮತ್ತು ಝೆಕ್ ಗಣರಾಜ್ಯಗಳ ಅಧ್ಯಕ್ಷರುಗಳು ಇದನ್ನು ಸ್ಥಾಪಿಸಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ

‘Iran ನನ್ನ ಪುತ್ರನನ್ನು ಹತ್ಯೆ ಮಾಡಲು ಯತ್ನಿಸಿತ್ತು’: ಟೆಹ್ರಾನ್‌ ವಿರುದ್ಧ ನೆತನ್ಯಾಹು ಗಂಭೀರ ಆರೋಪ

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ