ಡೊನಾಲ್ಡ್ ಟ್ರಂಪ್ 
ವಿದೇಶ

ವಿದೇಶಿ ವಿದ್ಯಾರ್ಥಿಗಳಿಗೆ ನೂತನ ನೀತಿ: ಟ್ರಂಪ್ ಆಡಳಿತ ವಿರುದ್ಧ ಗೂಗಲ್ ಸೇರಿದಂತೆ ಅಮೆರಿಕದ 17 ಕಂಪನಿಗಳ ಮೊಕದ್ದಮೆ

ವಿದೇಶಿ ವಿದ್ಯಾರ್ಥಿಗಳು ಅಮೆರಿಕದಲ್ಲಿ ಉಳಿಯುವುದನ್ನು ತಡೆಯುವ ಟ್ರಂಪ್ ಆಡಳಿತದ ಇತ್ತೀಚಿನ ಹೊಸ ನೀತಿಯ ವಿರುದ್ಧ ಹಾರ್ವಡ್ ವಿಶ್ವವಿದ್ಯಾಲಯ ಮತ್ತು ಎಂಐಟಿ ಸಲ್ಲಿಸಿರುವ ಮೊಕದ್ದಮೆಗೆ ಇದೀಗ ಗೂಗಲ್, ಫೇಸ್ ಬುಕ್ ಮತ್ತು ಮೈಕ್ರೋಸಾಫ್ಟ್ ಸೇರಿದಂತೆ ಅಮೆರಿಕಾದ ಒಂದು ಡಜನ್ ಗೂ ಹೆಚ್ಚು ತಂತ್ರಜ್ಞಾನ ಕಂಪನಿಗಳು ಕೂಡಾ ಸೇರಿಕೊಂಡಿವೆ.

ವಾಷಿಂಗ್ಟನ್: ಕನಿಷ್ಠ ಒಂದು ವೈಯಕ್ತಿಕ ಕೋರ್ಸ್ ನಲ್ಲಿ  ( ಒನ್-ಇನ್- ಪರ್ಸನ್  ಕೋರ್ಸ್ ) ಪಾಲ್ಗೊಳ್ಳದ ಹೊರತು ವಿದೇಶಿ ವಿದ್ಯಾರ್ಥಿಗಳು ಅಮೆರಿಕದಲ್ಲಿ ಉಳಿಯುವುದನ್ನು ತಡೆಯುವ ಟ್ರಂಪ್ ಆಡಳಿತದ ಇತ್ತೀಚಿನ ಹೊಸ ನೀತಿಯ ವಿರುದ್ಧ ಹಾರ್ವಡ್ ವಿಶ್ವವಿದ್ಯಾಲಯ ಮತ್ತು ಎಂಐಟಿ ಸಲ್ಲಿಸಿರುವ ಮೊಕದ್ದಮೆಗೆ ಇದೀಗ ಗೂಗಲ್, ಫೇಸ್ ಬುಕ್ ಮತ್ತು ಮೈಕ್ರೋಸಾಫ್ಟ್ ಸೇರಿದಂತೆ ಅಮೆರಿಕಾದ ಒಂದು ಡಜನ್ ಗೂ ಹೆಚ್ಚು ತಂತ್ರಜ್ಞಾನ ಕಂಪನಿಗಳು ಕೂಡಾ ಸೇರಿಕೊಂಡಿವೆ.

ಕೊರೋನಾವೈರಸ್ ಸಾಂಕ್ರಾಮಿಕ ರೋಗವನ್ನು ತಡೆಯುವ ನಿಟ್ಟಿನಲ್ಲಿ ವಿದೇಶಿ ಪ್ರಯಾಣವನ್ನು ತಡೆಯುವ ಪ್ರಯತ್ನದ ಭಾಗವಾಗಿ 
ಟ್ರಂಪ್ ಆಡಳಿತ ಘೋಷಿಸಿರುವ ವಿದೇಶಿ ವಿದ್ಯಾರ್ಥಿಗಳಿಗೆ ಹೊಸ ತಾತ್ಕಾಲಿಕ ವೀಸಾ ನೀತಿಯ ವಿರುದ್ಧ ನ್ಯೂಜೆರ್ಸಿ, ಕೊಲೊರಾಡೊ
ಮತ್ತಿತರ ಕೊಲಂಬಿಯಾ ಜಿಲ್ಲೆಗಳು ಸೇರಿದಂತೆ  ಅಮೆರಿಕಾದ 17 ರಾಜ್ಯಗಳು ಮತ್ತೊಂದು ಮೊಕದ್ದಮೆಯನ್ನು ಹೂಡುತ್ತಿವೆ.

ಅಮೆರಿಕಾದ ವ್ಯವಹಾರದಲ್ಲಿ  ಅರ್ಧಕ್ಕೂ ಹೆಚ್ಚಿನ ವಿದೇಶಿ ವಿದ್ಯಾರ್ಥಿಗಳ ನೇಮಕವನ್ನು ತಡೆಯುವುದರಿಂದ ಇಡೀ ಆರ್ಥಿಕತೆ ಹಾಗೂ ಕಂಪನಿಗಳಿಗೆ ನಷ್ಟವಾಗಲಿದೆ.ವಿದೇಶಿ ವಿದ್ಯಾರ್ಥಿಗಳು ದೇಶದಲ್ಲಿ ಉಳಿಯುವ ಮೊದಲಿನ ನೀತಿಗಳಿಗೆ ಆದ್ಯತೆ ನೀಡಬೇಕೆಂದು ಕಂಪನಿಗಳು ಆಗ್ರಹಿಸಿವೆ.

ಅಮೆರಿಕಾದ ವ್ಯವಹಾರಕ್ಕಾಗಿ ವಿದೇಶಿ ವಿದ್ಯಾರ್ಥಿಗಳು ಪ್ರಮುಖ ಉದ್ಯೋಗದ ಮೂಲವಾಗಿದ್ದಾರೆ. ವಿದೇಶಿ ವಿದ್ಯಾರ್ಥಿಗಳು ಅಮೆರಿಕಾದಲ್ಲಿ ಉಳಿದರೂ ಅಥವಾ ಅವರ ಸ್ವ ದೇಶಗಳಿಗೆ ಮರಳಿದರೂ ಪ್ರಮುಖ ನೌಕರರು ಅಥವಾ ಗ್ರಾಹಕರಾಗಿ ವ್ಯವಹಾರದಲ್ಲಿ  ಪ್ರಮುಖ ಪಾತ್ರ ನಿರ್ವಹಿಸಲಿದ್ದಾರೆ ಎಂದು ಕಂಪನಿಗಳು ಹೇಳಿವೆ.

ಅಮೆರಿಕಾದಲ್ಲಿರುವ ವಿದೇಶಿ ವಿದ್ಯಾರ್ಥಿಗಳು ದೇಶದ ಜಿಡಿಪಿ ಬೆಳವಣಿಗೆಯಲ್ಲಿ ಪ್ರಮುಖ ಕೊಡುಗೆ ನೀಡುತ್ತಿದ್ದು, ನಗರದಲ್ಲಿರುವ ಕಾಲೇಜ್ ಮತ್ತು ವಿಶ್ವವಿದ್ಯಾಲಯಗಳಲ್ಲಿ ಮಹತ್ವಪೂರ್ಣವಾದ ಪಾತ್ರವನ್ನು ನಿರ್ವಹಿಸುತ್ತಿದ್ದಾರೆ ಎಂದು ಐಟಿ ಕಂಪನಿಗಳು ಹೇಳಿವೆ. 

ಹೋಮ್ ಲ್ಯಾಂಡ್ ಸೆಕ್ಯೂರಿಟಿ ಇಲಾಖೆ, ಅಮೆರಿಕಾದ ಐಸಿಇ  ವಿರುದ್ಧ ಮ್ಯಾಸಚೂಸೆಟ್ಸ್ ಜಿಲ್ಲಾ ನ್ಯಾಯಾಲಯದಲ್ಲಿ ದೂರನ್ನು ಕಂಪನಿಗಳು ದಾಖಲಿಸಿವೆ. ವಿದೇಶಿ ವಿದ್ಯಾರ್ಥಿಗಳನ್ನು ಹೊರಹಾಕಲು ಅಕ್ರಮ, ಕ್ರೂರ ನೀತಿಯನ್ನು ಫೆಡರಲ್ ಸರ್ಕಾರ ಜಾರಿಗೆ ತಂದಿವೆ ಎಂದು 18 ಅಟಾರ್ನಿ ಜನರಲ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ದೆಹಲಿಯಲ್ಲಿ ಭೀಕರ ಅಪಘಾತ: ನಿಯಂತ್ರಣ ತಪ್ಪಿ ಡಿವೈಡರ್‌ ದಾಟಿ SUVಗೆ ಕಾರು ಡಿಕ್ಕಿ, ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸೇರಿ 6 ಮಂದಿಗೆ ಗಾಯ..!

ರಾಹುಲ್ ಗಾಂಧಿ ನಿಲುವಿಗೆ ಉಲ್ಟಾ ಹೊಡೆದರೇ ಡಿಕೆಶಿ? CM ನಿವಾಸಕ್ಕೆ ಅದಾನಿ ಭೇಟಿ; ಕೈ ಪಾಳಯದಲ್ಲಿ ಭುಗಿಲೆದ್ದ ಅಸಮಾಧಾನ..!

KPSC ಹಗರಣ: IAS ಅಧಿಕಾರಿ ಗಂಗ್ವಾರ್ ಮನೆ ಮೇಲೆ ED ದಾಳಿ; ಗೇಟ್ ಲಾಕ್ ಮಾಡಿ ಸೆಕ್ಯೂರಿಟಿ ಹೈಡ್ರಾಮಾ, ಕೀ ಮೇಕರ್ ಕರೆಯಿಸಿ ಬಾಗಿಲು ಮುರಿದ ಅಧಿಕಾರಿಗಳು..!

Operation Sindoorನಲ್ಲಿ ಧ್ವಂಸವಾಗಿದ್ದ ಜೈಶ್ ನೆಲೆ ಮರುನಿರ್ಮಾಣ! ಪಾಕ್‌ ಸರ್ಕಾರದಿಂದ 25 ಕೋಟಿ ನೆರವು!

Onion Price: ದಿಢೀರ್ ಈರುಳ್ಳಿ ಬೆಲೆ ಏರಿಕೆ; ಸೆಪ್ಟೆಂಬರ್-ಅಕ್ಟೋಬರ್‌ನಲ್ಲಿ ಮತ್ತಷ್ಟು ದುಬಾರಿ ಸಾಧ್ಯತೆ, ದರ ಏರಿಕೆಗೆ ಕಾರಣವೇನು?