'ಅಯೋಧ್ಯೆ ಭಾರತದಲ್ಲಿಲ್ಲ, ನೇಪಾಳದಲ್ಲಿದೆ' ನೇಪಾಳ ಪ್ರಧಾನಿ ಹೇಳಿಕೆಗೆ ಅಲ್ಲಿನ ವಿದೇಶಾಂಗ ಇಲಾಖೆ ಯಿಂದ ಸ್ಪಷ್ಟನೆ 
ವಿದೇಶ

'ಅಯೋಧ್ಯೆ ಭಾರತದಲ್ಲಿಲ್ಲ, ನೇಪಾಳದಲ್ಲಿದೆ' ನೇಪಾಳ ಪ್ರಧಾನಿ ಹೇಳಿಕೆಗೆ ಅಲ್ಲಿನ ವಿದೇಶಾಂಗ ಇಲಾಖೆ ಕೊಟ್ಟ ಸ್ಪಷ್ಟತೆ ಏನು ಗೊತ್ತೇ?

ಅಯೋಧ್ಯೆ ಭಾರತದಲ್ಲಿಲ್ಲ, ನಿಜವಾದ ಅಯೋಧ್ಯೆ ಇರುವುದು ನೇಪಾಳದಲ್ಲಿ ರಾಮ ನೇಪಾಳದವನು ಎಂಬ ನೇಪಾಳ ಪ್ರಧಾನಿ ಕೆಪಿ ಶರ್ಮಾ ಓಲಿ ಹೇಳಿಕೆಗೆ ಅಲ್ಲಿನ ವಿದೇಶಾಂಗ ಇಲಾಖೆ ತೇಪೆ ಹಚ್ಚುವ ಕೆಲಸ ಮಾಡಿ ಸ್ಪಷ್ಟನೆ ನೀಡಲು ಯತ್ನಿಸಿದೆ. 

ಕಠ್ಮಂಡು: ಅಯೋಧ್ಯೆ ಭಾರತದಲ್ಲಿಲ್ಲ, ನಿಜವಾದ ಅಯೋಧ್ಯೆ ಇರುವುದು ನೇಪಾಳದಲ್ಲಿ ರಾಮ ನೇಪಾಳದವನು ಎಂಬ ನೇಪಾಳ ಪ್ರಧಾನಿ ಕೆಪಿ ಶರ್ಮಾ ಓಲಿ ಹೇಳಿಕೆಗೆ ಅಲ್ಲಿನ ವಿದೇಶಾಂಗ ಇಲಾಖೆ ತೇಪೆ ಹಚ್ಚುವ ಕೆಲಸ ಮಾಡಿ ಸ್ಪಷ್ಟನೆ ನೀಡಲು ಯತ್ನಿಸಿದೆ. 

ಜು.13 ರಂದು ಕೆ.ಪಿ ಶರ್ಮಾ ಓಲಿ ನೀಡಿರುವ ಹೇಳಿಕೆ ಸಂಬಂಧ ಪ್ರತಿಕ್ರಿಯೆ ನೀಡಿರುವ ವಿದೇಶಾಂಗ ಇಲಾಖೆ, ಅಯೋಧ್ಯೆ ಹಾಗೂ ಅದರ ಸಾಂಸ್ಕೃತಿಕ ಮೌಲ್ಯಗಳನ್ನು  ಮಹತ್ವವನ್ನು ಕಡಿಮೆಮಾಡುವ ಉದ್ದೇಶ  ಪ್ರಧಾನಿಗಳ ಹೇಳಿಯಲ್ಲಿ ಇರಲಿಲ್ಲ ಎಂದು ಹೇಳಿದೆ.

ನೇಪಾಳಿ ಭಾಷೆಯ ರಾಮಾಯಣದ ಕರ್ತೃ ಆದಿಕವಿ ಭಾನು ಭಕ್ತ ಆಚಾರ್ಯರ 207 ನೇ ಜನ್ಮದಿನಾಚರಣೆ ಅಂಗವಾಗಿ ಮಾತನಾಡಿದ್ದ ನೇಪಾಳ ಪ್ರಧಾನಿ ರಾಮನ ನಿಜವಾದ ಜನ್ಮಭೂಮಿ ಇರುವುದು ಭಾರತದಲ್ಲಿ ಅಲ್ಲ ನೇಪಾಳದಲ್ಲಿ ಎಂದು ಹೇಳಿದ್ದರು.

ಈ ಬಗ್ಗೆ ವಿವಾದ ಉಂಟಾದ ಬೆನ್ನಲ್ಲೇ ಡ್ಯಾಮೇಜ್ ಕಂಟ್ರೋಲ್ ಗೆ ಮುಂದಾಗಿರುವ ನೇಪಾಳ ವಿದೇಶಾಂಗ ಸಚಿವಾಲಯ, ಪ್ರಧಾನಿಯವರ ಹೇಳಿಕೆ ಯಾವುದೇ ರಾಜಕೀಯ ವಿಷಯಕ್ಕೂ ಸಂಬಂಧಿಸಿದ್ದಾಗಲೀ ಯಾವುದೇ ಭಾವನೆಗಳಿಗೆ ನೋವುಂಟು ಮಾಡುವುದಾಗಲೀ ಅಲ್ಲ. ರಾಮಾಯಣ ಹಾಗೂ ಅವುಗಳ ಘಟನೆಗಳಿಗೆ ಬೆಸೆದುಕೊಂಡಿರುವ ಹಲವಾರು ಪ್ರದೇಶಗಳು ಪುರಾಣಗಳಲ್ಲಿ ಬಂದಿವೆ, ಈ ಸಂಬಂಧ ಹೆಚ್ಚಿನ ಅಧ್ಯಯನಕ್ಕೆ ಸಹಾಯವಾಗುವಂತೆ ಅವುಗಳ ಮಹತ್ವವನ್ನು ಪ್ರಧಾನಿ ಹೇಳಿದ್ದಾರೆ ಎಂದು ತಿಳಿಸಿದೆ.

ಪ್ರತಿ ವರ್ಷ ಬಿಭಾ ಪಂಚಮಿಯ ದಿನದಂದು ಭಾರತದ ಅಯೋಧ್ಯೆಯಿಂದ ನೇಪಾಳದ ಜನಕಪುರಿಗೆ ಮದುವೆ ದಿಬ್ಬಣ ಬರುವ ಸಂಪ್ರದಾಯ ಗಮನಾರ್ಹವಾಗಿದೆ. 2018 ರಲ್ಲಿ ನೇಪಾಳ ಪ್ರಧಾನಿಯೇ ರಾಮಾಯಣ ಸರ್ಕ್ಯೂಟ್ ಉದ್ಘಾಟಿಸಿ ಜನಕಪುರದಿಂದ ಅಯೋಧ್ಯೆಗೆ ಬಸ್ ಸೇವೆಯನ್ನು ಪ್ರಾರಂಭಿಸಿದ್ದನ್ನೂ ವಿದೇಶಾಂಗ ಇಲಾಖೆ ಉಲ್ಲೇಖಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Nepal floods: ಸಾವಿನ ಸಂಖ್ಯೆ 157ಕ್ಕೇರಿಕೆ, 750ಕ್ಕೂ ಅಧಿಕ ಮಂದಿ ನಾಪತ್ತೆ, ನೇಪಾಳಕ್ಕೆ ಭಾರತ ನೆರವು! ಸಹಾಯವಾಣಿ ಬಿಡುಗಡೆ

ನೇಪಾಳ ಭೀಕರ ಪ್ರವಾಹ: 95 ಮಂದಿ ಸಾವು; 105 ಭಾರತೀಯರು ಸೇರಿ 400 ಮಂದಿ ನಾಪತ್ತೆ: ಬಿಹಾರ, ಯುಪಿಯಲ್ಲಿ ಹೈ ಅಲರ್ಟ್! Video

ನೇಪಾಳ ಪ್ರವಾಹ: ಭಾರತಕ್ಕೆ ದೊಡ್ಡ ಆತಂಕವಿಲ್ಲ, ಜಲಾಶಯಗಳ ನೀರಿನ ಮಟ್ಟ ಇಳಿಕೆ: ಕೇಂದ್ರ ಸ್ಪಷ್ಟನೆ

Sugar Price: ಈರುಳ್ಳಿ ಬೆನ್ನಲ್ಲೇ ಇದೀಗ ಸಕ್ಕರೆ ಶಾಕ್: ಕೆಜಿಗೆ 65 ರೂ ದಾಟಿದ ದರ, ಗ್ರಾಹಕರ ಜೇಬಿಗೆ 'ಸಿಹಿ ಕಹಿ'!

2nd Test: ಬೌಂಡರಿ ಲೈನ್ ಬಳಿ ದುರ್ವರ್ತನೆ ತೋರಿದ್ದ ಲಂಕಾ ಆಟಗಾರ Prabath Jayasuriyaಗೆ ಬರೆ ಹಾಕಿದ ICC!