ರಿಚರ್ಡ್ ವರ್ಮಾ 
ವಿದೇಶ

ಭದ್ರತಾ ಮಂಡಳಿಯಲ್ಲಿ ಭಾರತಕ್ಕೆ ಶಾಶ್ವತ ಸದಸ್ಯತ್ವಕ್ಕೆ ಬಿಡೆನ್‌ ನೆರವು: ರಿಚರ್ಡ್ ವರ್ಮಾ

ಅಮೆರಿಕದ ಮುಂದಿನ ಅಧ್ಯಕ್ಷರಾಗಿ ಜೋ ಬಿಡೆನ್ ಅವರು ಆಯ್ಕೆಯಾದರೆ ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಭಾರತಕ್ಕೆ ಶಾಶ್ವತ ಸದಸ್ಯತ್ವ ಕೊಡಿಸುವ ಕುರಿತು ನೆರವು ನೀಡಲಿದೆ ಎಂದು ಭಾರತಕ್ಕೆ ಅಮೆರಿಕದ ರಾಯಭಾರಿಯಾಗಿದ್ದ ರಿಚರ್ಡ್‌ ವರ್ಮಾ ಹೇಳಿದ್ದಾರೆ.

ವಾಷಿಂಗ್ಟನ್‌: ಅಮೆರಿಕದ ಮುಂದಿನ ಅಧ್ಯಕ್ಷರಾಗಿ ಜೋ ಬಿಡೆನ್ ಅವರು ಆಯ್ಕೆಯಾದರೆ ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಭಾರತಕ್ಕೆ ಶಾಶ್ವತ ಸದಸ್ಯತ್ವ ಕೊಡಿಸುವ ಕುರಿತು ನೆರವು ನೀಡಲಿದೆ ಎಂದು ಭಾರತಕ್ಕೆ ಅಮೆರಿಕದ ರಾಯಭಾರಿಯಾಗಿದ್ದ ರಿಚರ್ಡ್‌ ವರ್ಮಾ ಹೇಳಿದ್ದಾರೆ.

ಈ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿರುವ ರಿಚರ್ಡ್‌ ವರ್ಮಾ ಅವರು,  ನವೆಂಬರ್‌ನಲ್ಲಿ ನಡೆಯಲಿರುವ ಅಧ್ಯಕ್ಷೀಯ ಚುನಾವಣೆಯಲ್ಲಿ ಡೆಮಾಕ್ರೆಟಿಕ್ ಪಕ್ಷದ‌ ಅಭ್ಯರ್ಥಿ ಜೊ ಬಿಡೆನ್‌ ಅವರು ಆಯ್ಕೆಯಾದರೆ, ವಿಶ್ವಸಂಸ್ಥೆಯಂಥ ಜಾಗತಿಕಮಟ್ಟದ ಸಂಘಟನೆಯನ್ನು ಪುನರ್‌ ರೂಪಿಸಲು ಶ್ರಮಿಸುವುದಲ್ಲದೆ, ಅದರ ಭದ್ರತಾ ಮಂಡಳಿಯಲ್ಲಿ ಭಾರತಕ್ಕೆ ಶಾಶ್ವತ ಸದಸ್ಯತ್ವ ನೀಡಲು ನೆರವಾಗುವರು ಎಂದು ಹೇಳಿದ್ದಾರೆ.

ಭಾರತಕ್ಕೆ ಶಾಶ್ವತ ಸದಸ್ಯತ್ವ ನೀಡಲು ಬಿಡೆನ್‌ ಅವರು ನೆರವಾಗಲಿದ್ದಾರೆ ಎಂಬುದರಲ್ಲಿ ಸಂದೇಹವಿಲ್ಲ. ನಮ್ಮ ನಾಗರಿಕರನ್ನು ಸುರಕ್ಷಿತವಾಗಿಡುವ ನಿಟ್ಟಿನಲ್ಲಿ ಅವರು ಭಾರತದ ಜತೆಗೆ ಕೈಜೋಡಿಸಿ ಕೆಲಸ ಮಾಡುವರು. ಗಡಿಯಾಚೆಗಿನ ಭಯೋತ್ಪಾದನೆ, ಗಡಿಯ ಯಥಾಸ್ಥಿತಿಯನ್ನು ಕದಡುವ ಭಾರತದ ನೆರೆರಾಷ್ಟ್ರಗಳ ಪ್ರಯತ್ನಗಳನ್ನು ತಡೆಯಲು ಅವರು ನೆರವಾಗುವರು’ ಎಂದು ಮಾಜಿ ರಾಯಭಾರಿ ಕೂಡ ಆಗಿದ್ದ ವರ್ಮಾ ಹೇಳಿದ್ದಾರೆ.

ವರ್ಮಾ ಅವರು 2014ರಿಂದ 2017ರ ಅವಧಿಯಲ್ಲಿ ಭಾರತದಲ್ಲಿ ಅಮೆರಿಕದ ರಾಯಭಾರಿಯಾಗಿ ಕಾರ್ಯ ನಿರ್ವಹಿಸಿದ್ದರು.

ವಿಶ್ವ ಸಂಸ್ಥೆಯಲ್ಲಿ ಸರಿಯಾದ ಪ್ರಾತಿನಿಧ್ಯ ಇಲ್ಲದಿರುವುದರಿಂದ ಅದನ್ನು ಮರುರೂಪಿಸುವ ಅಗತ್ಯವಿದೆ ಮತ್ತು ಅದರ ಭದ್ರತಾ ಮಂಡಳಿಯಲ್ಲಿ ಶಾಶ್ವತ ಸ್ಥಾನಪಡೆಯಲು ಭಾರತ ಅರ್ಹವಾಗಿದೆ ಎಂದು ಭಾರತವು ಹಲವು ವರ್ಷಗಳಿಂದ ವಾದಿಸುತ್ತಿದೆ. ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಪ್ರಸಕ್ತ 15 ಸದಸ್ಯರಾಷ್ಟ್ರಗಳಿದ್ದು, ಅಮೆರಿಕ, ಬ್ರಿಟನ್‌, ಫ್ರಾನ್ಸ್, ರಷ್ಯಾ ಹಾಗೂ ಚೀನಾ ಶಾಶ್ವತ ಸದಸ್ಯತ್ವ ಹೊಂದಿವೆ. ಭಾರತಕ್ಕೆ ಶಾಶ್ವತ ಸದಸ್ಯತ್ವ ನೀಡುವುದನ್ನು ಎಲ್ಲಾ ರಾಷ್ಟ್ರಗಳು ಬೆಂಬಲಿಸಿದ್ದರೂ, ಚೀನಾ ವಿರೋಧಿಸುತ್ತಾ ಬಂದಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಪ್ಯಾಕ್ಸ್ ಸಿಲಿಕಾ ಅಲೈಯನ್ಸ್‌ನ ಸದಸ್ಯ ದೇಶವಾಗಲಿದೆ; ಅಮೆರಿಕಕ್ಕೆ ಭಾರತಕ್ಕಿಂತ ಮುಖ್ಯ ದೇಶ ಮತ್ತೊಂದಿಲ್ಲ: ಸೆರ್ಗಿಯೊ ಗೋರ್

ಬಿಗ್ ಬಾಸ್ 12 ಫಿನಾಲೆ ಹೊತ್ತಲ್ಲಿ ಕಿಚ್ಚ ಸುದೀಪ್‌ಗೆ ಸಂಕಷ್ಟ ತಂದ 'ರಣಹದ್ದು'!

CM ಕುರ್ಚಿ ಗುದ್ದಾಟ: ಅಗತ್ಯವಿದ್ದಾಗ ಸಿದ್ದರಾಮಯ್ಯ, ಶಿವಕುಮಾರ್‌ರನ್ನು ಮಾತುಕತೆಗೆ ಕರೆಯಲಾಗುವುದು; ಮಲ್ಲಿಕಾರ್ಜುನ ಖರ್ಗೆ

ಉತ್ತರ ಪ್ರದೇಶ: "ಆಕ್ಷೇಪಾರ್ಹ" ಸ್ಥಿತಿಯಲ್ಲಿದ್ದ ಪ್ರೇಮಿಗಳನ್ನು ಹೊಡೆದು ಕೊಂದ ಕುಟುಂಬಸ್ಥರು!

ಮಹಾತ್ಮ ಗಾಂಧಿ ಸಂದೇಶಗಳು ಹಿಂದೆಂದಿಗಿಂತಲೂ ಈಗ ಹೆಚ್ಚು ಪ್ರಸ್ತುತ: ಸಬರಮತಿ ಆಶ್ರಮದಲ್ಲಿ ಜರ್ಮನ್ ಚಾನ್ಸೆಲರ್!

SCROLL FOR NEXT