ಜೀಸಸ್ ಬದಲು ಕಮ್ಯುನಿಸ್ಟ್ ನಾಯಕರ ಭಾವಚಿತ್ರ ಹಾಕಲು ಕ್ರೈಸ್ತರ ಮೇಲೆ ಚೀನಾದಲ್ಲಿ ಒತ್ತಡ 
ವಿದೇಶ

ಜೀಸಸ್ ಬದಲು ಕಮ್ಯುನಿಸ್ಟ್ ನಾಯಕರ ಭಾವಚಿತ್ರ ಹಾಕಲು ಕ್ರೈಸ್ತರ ಮೇಲೆ ಚೀನಾದಲ್ಲಿ ಒತ್ತಡ

ಚೀನಾದಲ್ಲಿ  ಕ್ರೈಸ್ತ ಮತಾನುಯಾಯಿಗಳಿಗೆ ಅವರ ಮನೆಗಳಲ್ಲಿ  ಜೀಸಸ್ ನ ಫೋಟೋಗಳನ್ನು ತೆಗೆದು ಕಮ್ಯುನಿಸ್ಟ್ ನಾಯಕರ ಫೋಟೊಗಳನ್ನು ಹಾಕುವಂತೆ ಅಧಿಕಾರಿಗಳು ಒತ್ತಡ ಹೇರುತ್ತಿದ್ದಾರೆ. 

ಚೀನಾದಲ್ಲಿ ಧಾರ್ಮಿಕ ಅಲ್ಪಸಂಖ್ಯಾತರ ವಿರುದ್ಧ ಕಮ್ಯುನಿಸ್ಟ್ ಪಕ್ಷ ಅನುಸರಿಸುತ್ತಿರುವ ದಬ್ಬಾಳಿಕೆ, ದೌರ್ಜನ್ಯದ ಪ್ರಕರಣಗಳು ಹೆಚ್ಚುತ್ತಿದ್ದು, ಅಲ್ಲಿನ ಕ್ರೈಸ್ತ ಮತಾನುಯಾಯಿಗಳಿಗೆ ಅವರ ಮನೆಗಳಲ್ಲಿ  ಜೀಸಸ್ ನ ಫೋಟೋಗಳನ್ನು ತೆಗೆದು ಕಮ್ಯುನಿಸ್ಟ್ ನಾಯಕರ ಫೋಟೊಗಳನ್ನು ಹಾಕುವಂತೆ ಅಧಿಕಾರಿಗಳು ಒತ್ತಡ ಹೇರುತ್ತಿದ್ದಾರೆ. 

ಚೀನಾದಲ್ಲಿ ಧಾರ್ಮಿಕ ಮತಗಳು ಅಲ್ಲಿನ ಆಡಳಿತಾರೂಢ ಕಮ್ಯುನಿಸ್ಟ್ ಪಕ್ಷ ತನ್ನ ಸಿದ್ಧಾಂತಗಳಿಗೆ ಬದ್ಧವಾಗಿರುವಂತೆ ಮಾಡಲು ಯತ್ನಿಸುತ್ತಿದ್ದು, ಇದರ ಭಾಗವಾಗಿ ಧಾರ್ಮಿಕ ಮತಾನುಯಾಯಿಗಳ ಮೇಲೆ ಒತ್ತಡ ಹೇರುತ್ತಿದೆ.  ಈಗಾಗಲೇ ಚೀನಾದ ಕ್ಸಿನ್ಜಿಯಾಂಗ್ ಪ್ರಾಂತ್ಯದಲ್ಲಿರುವ ಉಯ್ಘರ್ ಮುಸ್ಲಿಮರ ಮೇಲೆ ದೌರ್ಜನ್ಯ ಎಸಗುತ್ತಿರುವ ಚೀನಾ ಬಗ್ಗೆ ಜಾಗತಿಕ ಮಟ್ಟದಲ್ಲಿ ನಕಾರಾತ್ಮಕ ಅಭಿಪ್ರಾಯ ಮೂಡಿರುವ ಬೆನ್ನಲ್ಲೇ ಡೇಲಿ ಮೇಲ್ ಚೀನಾದಲ್ಲಿ ಕ್ರೈಸ್ತರ ಮೇಲೆ ಒತ್ತಡ ಹೇರಲಾಗುತ್ತಿರುವ ಬಗ್ಗೆ ವರದಿ ಪ್ರಕಟಿಸಿದೆ.

ಅನ್ಹುಯಿ, ಜಿಯಾಂಗ್ಸು, ಹೆಬೀ ಮತ್ತು ಝೆಜಿಯಾಂಗ್ ಗಳಲ್ಲಿ ಕ್ರೈಸ್ತರಿಗೆ ಜೀಸಸ್ ಹಾಗೂ ಶಿಲುಬೆಯ ಪ್ರತಿಮೆಗಳನ್ನು ತೆಗೆದುಹಾಕಿ ಅಲ್ಲಿ ಚೀನಾದ ಕಮ್ಯುನಿಸ್ಟ್ ನಾಯಕರ ಫೋಟೊಗಳನ್ನು ಹಾಕಬೇಕೆಂಬ ಆದೇಶವನ್ನು ಚೀನಾದ ಸರ್ಕಾರಿ ಅಧಿಕಾರಿಗಳು ನೀಡಿದ್ದಾರೆ. 
ಇದರ ಭಾಗವಾಗಿ ಚೀನಾದ ಅಧಿಕಾರಿಗಳು ಚರ್ಚ್ ಗಳಿಗೆ ತೆರಳಿ ಶಿಲುಬೆಗಳನ್ನು ಏಸುಕ್ರಿಸ್ತನ ಪ್ರತಿಮೆಗಳನ್ನು ತೆರವುಗೊಳಿಸುವ ಕೆಲಸ ಮಾಡಿದ್ದಾರೆ. 

ಶಿವಾನ್ ಕ್ರೈಸ್ಟ್ ಚರ್ಚ್ ನಲ್ಲಿ ಇದಕ್ಕೆ ತೀವ್ರ ವಿರೋಧ ವ್ಯಕ್ತವಾಗಿದ್ದು ಅಲ್ಲಿನ ಶ್ರದ್ಧಾಳುಗಳ ತಂಡ, ಶಿಲುಬೆ, ಕ್ರಿಸ್ತನ ಪ್ರತಿಮೆಯನ್ನು ಧ್ವಂಸಗೊಳಿಸಲು ಕೇನ್ ನಲ್ಲಿ ಬಂದಿದ್ದ ಚೀನಾ ಅಧಿಕಾರಿಗಳ ನಡೆಯನ್ನು ತೀವ್ರವಾಗಿ ವಿರೋಧಿಸಿದ ಘಟನೆ ನಡೆದಿದೆ.
ಕಳೆದ ವರ್ಷ ಚೀನಾ ಸರ್ಕಾರ, ತನ್ನ ದೇಶದಲ್ಲಿ ಪಾಲಿಸಲಾಗುವ ಎಲ್ಲಾ ಧಾರ್ಮಿಕ ಗ್ರಂಥಗಳನ್ನು ಸಮಾಜವಾದಿ ತತ್ವಗಳನ್ನು ಪ್ರತಿಬಿಂಬಿಸುವಂತೆ ತಿದ್ದುಪಡಿ ಮಾಡಲು ಆದೇಶ ಹೊರಡಿಸಿ, ತಿದ್ದುಪಡಿಯಾದ ಧಾರ್ಮಿಕ ಗ್ರಂಥಗಳಲ್ಲಿ ಸರ್ಕಾರದ ವಿರುದ್ಧದ ಯಾವುದೇ ತತ್ವಗಳೂ ಇರಬಾರದೆಂದು ಆದೇಶ ಹೊರಡಿಸಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

IPL 2026: SRH ವಿರುದ್ಧ RR ಗೆ 47 ರನ್ ಗಳ ಭರ್ಜರಿ ಗೆಲುವು

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

SCROLL FOR NEXT