ಜೀಸಸ್ ಬದಲು ಕಮ್ಯುನಿಸ್ಟ್ ನಾಯಕರ ಭಾವಚಿತ್ರ ಹಾಕಲು ಕ್ರೈಸ್ತರ ಮೇಲೆ ಚೀನಾದಲ್ಲಿ ಒತ್ತಡ 
ವಿದೇಶ

ಜೀಸಸ್ ಬದಲು ಕಮ್ಯುನಿಸ್ಟ್ ನಾಯಕರ ಭಾವಚಿತ್ರ ಹಾಕಲು ಕ್ರೈಸ್ತರ ಮೇಲೆ ಚೀನಾದಲ್ಲಿ ಒತ್ತಡ

ಚೀನಾದಲ್ಲಿ  ಕ್ರೈಸ್ತ ಮತಾನುಯಾಯಿಗಳಿಗೆ ಅವರ ಮನೆಗಳಲ್ಲಿ  ಜೀಸಸ್ ನ ಫೋಟೋಗಳನ್ನು ತೆಗೆದು ಕಮ್ಯುನಿಸ್ಟ್ ನಾಯಕರ ಫೋಟೊಗಳನ್ನು ಹಾಕುವಂತೆ ಅಧಿಕಾರಿಗಳು ಒತ್ತಡ ಹೇರುತ್ತಿದ್ದಾರೆ. 

ಚೀನಾದಲ್ಲಿ ಧಾರ್ಮಿಕ ಅಲ್ಪಸಂಖ್ಯಾತರ ವಿರುದ್ಧ ಕಮ್ಯುನಿಸ್ಟ್ ಪಕ್ಷ ಅನುಸರಿಸುತ್ತಿರುವ ದಬ್ಬಾಳಿಕೆ, ದೌರ್ಜನ್ಯದ ಪ್ರಕರಣಗಳು ಹೆಚ್ಚುತ್ತಿದ್ದು, ಅಲ್ಲಿನ ಕ್ರೈಸ್ತ ಮತಾನುಯಾಯಿಗಳಿಗೆ ಅವರ ಮನೆಗಳಲ್ಲಿ  ಜೀಸಸ್ ನ ಫೋಟೋಗಳನ್ನು ತೆಗೆದು ಕಮ್ಯುನಿಸ್ಟ್ ನಾಯಕರ ಫೋಟೊಗಳನ್ನು ಹಾಕುವಂತೆ ಅಧಿಕಾರಿಗಳು ಒತ್ತಡ ಹೇರುತ್ತಿದ್ದಾರೆ. 

ಚೀನಾದಲ್ಲಿ ಧಾರ್ಮಿಕ ಮತಗಳು ಅಲ್ಲಿನ ಆಡಳಿತಾರೂಢ ಕಮ್ಯುನಿಸ್ಟ್ ಪಕ್ಷ ತನ್ನ ಸಿದ್ಧಾಂತಗಳಿಗೆ ಬದ್ಧವಾಗಿರುವಂತೆ ಮಾಡಲು ಯತ್ನಿಸುತ್ತಿದ್ದು, ಇದರ ಭಾಗವಾಗಿ ಧಾರ್ಮಿಕ ಮತಾನುಯಾಯಿಗಳ ಮೇಲೆ ಒತ್ತಡ ಹೇರುತ್ತಿದೆ.  ಈಗಾಗಲೇ ಚೀನಾದ ಕ್ಸಿನ್ಜಿಯಾಂಗ್ ಪ್ರಾಂತ್ಯದಲ್ಲಿರುವ ಉಯ್ಘರ್ ಮುಸ್ಲಿಮರ ಮೇಲೆ ದೌರ್ಜನ್ಯ ಎಸಗುತ್ತಿರುವ ಚೀನಾ ಬಗ್ಗೆ ಜಾಗತಿಕ ಮಟ್ಟದಲ್ಲಿ ನಕಾರಾತ್ಮಕ ಅಭಿಪ್ರಾಯ ಮೂಡಿರುವ ಬೆನ್ನಲ್ಲೇ ಡೇಲಿ ಮೇಲ್ ಚೀನಾದಲ್ಲಿ ಕ್ರೈಸ್ತರ ಮೇಲೆ ಒತ್ತಡ ಹೇರಲಾಗುತ್ತಿರುವ ಬಗ್ಗೆ ವರದಿ ಪ್ರಕಟಿಸಿದೆ.

ಅನ್ಹುಯಿ, ಜಿಯಾಂಗ್ಸು, ಹೆಬೀ ಮತ್ತು ಝೆಜಿಯಾಂಗ್ ಗಳಲ್ಲಿ ಕ್ರೈಸ್ತರಿಗೆ ಜೀಸಸ್ ಹಾಗೂ ಶಿಲುಬೆಯ ಪ್ರತಿಮೆಗಳನ್ನು ತೆಗೆದುಹಾಕಿ ಅಲ್ಲಿ ಚೀನಾದ ಕಮ್ಯುನಿಸ್ಟ್ ನಾಯಕರ ಫೋಟೊಗಳನ್ನು ಹಾಕಬೇಕೆಂಬ ಆದೇಶವನ್ನು ಚೀನಾದ ಸರ್ಕಾರಿ ಅಧಿಕಾರಿಗಳು ನೀಡಿದ್ದಾರೆ. 
ಇದರ ಭಾಗವಾಗಿ ಚೀನಾದ ಅಧಿಕಾರಿಗಳು ಚರ್ಚ್ ಗಳಿಗೆ ತೆರಳಿ ಶಿಲುಬೆಗಳನ್ನು ಏಸುಕ್ರಿಸ್ತನ ಪ್ರತಿಮೆಗಳನ್ನು ತೆರವುಗೊಳಿಸುವ ಕೆಲಸ ಮಾಡಿದ್ದಾರೆ. 

ಶಿವಾನ್ ಕ್ರೈಸ್ಟ್ ಚರ್ಚ್ ನಲ್ಲಿ ಇದಕ್ಕೆ ತೀವ್ರ ವಿರೋಧ ವ್ಯಕ್ತವಾಗಿದ್ದು ಅಲ್ಲಿನ ಶ್ರದ್ಧಾಳುಗಳ ತಂಡ, ಶಿಲುಬೆ, ಕ್ರಿಸ್ತನ ಪ್ರತಿಮೆಯನ್ನು ಧ್ವಂಸಗೊಳಿಸಲು ಕೇನ್ ನಲ್ಲಿ ಬಂದಿದ್ದ ಚೀನಾ ಅಧಿಕಾರಿಗಳ ನಡೆಯನ್ನು ತೀವ್ರವಾಗಿ ವಿರೋಧಿಸಿದ ಘಟನೆ ನಡೆದಿದೆ.
ಕಳೆದ ವರ್ಷ ಚೀನಾ ಸರ್ಕಾರ, ತನ್ನ ದೇಶದಲ್ಲಿ ಪಾಲಿಸಲಾಗುವ ಎಲ್ಲಾ ಧಾರ್ಮಿಕ ಗ್ರಂಥಗಳನ್ನು ಸಮಾಜವಾದಿ ತತ್ವಗಳನ್ನು ಪ್ರತಿಬಿಂಬಿಸುವಂತೆ ತಿದ್ದುಪಡಿ ಮಾಡಲು ಆದೇಶ ಹೊರಡಿಸಿ, ತಿದ್ದುಪಡಿಯಾದ ಧಾರ್ಮಿಕ ಗ್ರಂಥಗಳಲ್ಲಿ ಸರ್ಕಾರದ ವಿರುದ್ಧದ ಯಾವುದೇ ತತ್ವಗಳೂ ಇರಬಾರದೆಂದು ಆದೇಶ ಹೊರಡಿಸಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

SCROLL FOR NEXT