ಪ್ರಧಾನಿ ಮೋದಿ, ಡೊನಾಲ್ಡ್ ಟ್ರಂಪ್ 
ವಿದೇಶ

ಮುಂದಿನ ವಾರ ಅಮೆರಿಕಾದಿಂದ ಭಾರತಕ್ಕೆ ಮೊದಲ ಹಂತದಲ್ಲಿ 100 ವೆಂಟಿಲೇಟರ್ ಗಳ ರವಾನೆ: ಶ್ವೇತ ಭವನ

ಕೋವಿಡ್- 19 ರೋಗಿಗಳಿಗೆ ಚಿಕಿತ್ಸೆಗಾಗಿ ಮುಂದಿನ ವಾರ ಅಮೆರಿಕಾದಿಂದ ಭಾರತಕ್ಕೆ ಮೊದಲ ಹಂತದಲ್ಲಿ 100 ವೆಂಟಿಲೇಟರ್ ಗಳನ್ನು ರವಾನಿಸಲಾಗುವುದು, ಕಾನ್ಫೆರೆನ್ಸ್ ಕಾಲ್ ನಲ್ಲಿ ಡೊನಾಲ್ಡ್ ಟ್ರಂಪ್  ಮೋದಿಗೆ ಈ ವಿಷಯವನ್ನು ತಿಳಿಸಿದ್ದಾರೆ ಎಂದು ಶ್ವೇತ ಭವನ ಹೇಳಿದೆ.

ವಾಷಿಂಗ್ಟನ್ : ಕೋವಿಡ್- 19 ರೋಗಿಗಳಿಗೆ ಚಿಕಿತ್ಸೆಗಾಗಿ ಮುಂದಿನ ವಾರ ಅಮೆರಿಕಾದಿಂದ ಭಾರತಕ್ಕೆ ಮೊದಲ ಹಂತದಲ್ಲಿ 100 ವೆಂಟಿಲೇಟರ್ ಗಳನ್ನು ರವಾನಿಸಲಾಗುವುದು, ಕಾನ್ಫೆರೆನ್ಸ್ ಕಾಲ್ ನಲ್ಲಿ ಡೊನಾಲ್ಡ್ ಟ್ರಂಪ್  ಮೋದಿಗೆ ಈ ವಿಷಯವನ್ನು ತಿಳಿಸಿದ್ದಾರೆ ಎಂದು ಶ್ವೇತ ಭವನ ಹೇಳಿದೆ.

ಮಂಗಳವಾರ ಡೊನಾಲ್ಡ್ ಟ್ರಂಪ್ ಹಾಗೂ ಪ್ರಧಾನಿ ನರೇಂದ್ರ ಮೋದಿ ಮಾತುಕತೆ ನಡೆಸಿದ್ದು, ಜಿ-7 ಶೃಂಗಸಭೆ, ಕೋವಿಡ್-19 ನಿರ್ವಹಣೆ, ಪ್ರಾದೇಶಿಕ ಭದ್ರತೆ ವಿಚಾರಗಳ ಕುರಿತಂತೆ ಚರ್ಚೆ ನಡೆಸಿದ್ದಾರೆ ಎಂದು ಹೇಳಲಾಗಿದೆ. 

ಮುಂದಿನ ವಾರ ಭಾರತಕ್ಕೆ ಮೊದಲ ಹಂತದಲ್ಲಿ 100 ವೆಂಟಿಲೇಟರ್ ಗಳ ಕೊಡುಗೆಯನ್ನು ಡೊನಾಲ್ಡ್ ಟ್ರಂಪ್ ಸಂತೋಷದಿಂದ ಘೋಷಿಸಿದ್ದಾರೆ ಎಂದು ವೈಟ್ ಹೌಸ್ ತಿಳಿಸಿದೆ. 

ಕೋವಿಡ್-19 ಪೀಡಿತ ರಾಷ್ಟ್ರಗಳ ಪೈಕಿಯಲ್ಲಿ ಅಮೆರಿಕಾ, ಬ್ರೆಜಿಲ್, ರಷ್ಯಾ, ಇಂಗ್ಲೆಡ್ , ಸ್ಪೇನ್ ಮತ್ತು ಇಟಲಿ ನಂತರ ಇದೀಗ ಭಾರತ ಏಳನೇ ಸ್ಥಾನದಲ್ಲಿದೆ. ದೇಶದಲ್ಲಿ ಕೋವಿಡ್-19 ಸೋಂಕಿನಿಂದ 5,815 ಜನರು ಮೃತಪಟ್ಟಿದ್ದು, ಸೋಂಕಿತರ ಸಂಖ್ಯೆ ಎರಡು ಲಕ್ಷಕ್ಕೆ ಏರಿಕೆ ಆಗಿದೆ ಎಂದು ಆರೋಗ್ಯ ಸಚಿವಾಲಯ ಬುಧವಾರ ತಿಳಿಸಿದೆ. 

ಗಂಭೀರ ಪರಿಸ್ಥಿತಿಯಲ್ಲಿರುವ ರೋಗಿಗಳಿಗೆ ವೆಂಟಿಲೇಟರ್ ಪ್ರಮುಖ ವೈದ್ಯಕೀಯ ಸಲಕರಣೆಯಾಗಿದೆ. ಕೋವಿಡ್ 19ನಿಂದಾಗಿ ತೀವ್ರ ರೀತಿಯ ಅನಾರೋಗ್ಯಕ್ಕೊಳಾಗಾದ ಪ್ರತಿ 5 ಜನರ ಪೈಕಿ ಒಬ್ಬರಿಗೆ ಉಸಿರಾಟದ ಸಮಸ್ಯೆ ಕಂಡಬರಲಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆ ಹೇಳಿದ್ದು, ಕಾಯಿಲೆಯಿಂದ ಶ್ವಾಸಕೋಶಕ್ಕೆ ತೊಂದರೆಯಾದಾಗ ಉಸಿರಾಟ ಪ್ರಕ್ರಿಯೆಗೆ ವೆಂಟಿಲೇಟರ್ ನೆರವು ನೀಡಲಿವೆ. 

ಟ್ರಂಪ್ ಜೊತೆಗಿನ ಮಾತುಕತೆಯಲ್ಲಿ ಕೋವಿಡ್-19 ಸಾಂಕ್ರಾಮಿಕ ರೋಗ, ಮತ್ತಿತರ ವಿಚಾರಗಳ ಬಗ್ಗೆ ಮಾತುಕತೆ ನಡೆಸಿರುವುದಾಗಿ ಮಂಗಳವಾರ ಪ್ರಧಾನಿ ಮೋದಿ ಸರಣಿ ಟ್ವೀಟ್ ಮಾಡಿದ್ದರು. 

ಫೆಬ್ರವರಿ ತಿಂಗಳಲ್ಲಿ ಭಾರತಕ್ಕೆ ಭೇಟಿ ನೀಡಿದದ್ದು ಹಾಗೂ ಭಾರತ ಹಾಗೂ ಅಮೆರಿಕಾ ನಡುವಣ ಒಪ್ಪಂದಗಳನ್ನು ಕೂಡಾ ಟ್ರಂಪ್ ನೆನಪು ಮಾಡಿಕೊಂಡಿರುವುದಾಗಿ ಪ್ರಧಾನಮಂತ್ರಿ ಕಾರ್ಯಾಲಯದ ಟ್ವೀಟರ್ ನಲ್ಲಿ ಹಾಕಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

ಕೃಷ್ಣಾ ಮೇಲ್ದಂಡೆ ಯೋಜನೆ-3: ಸರ್ವಪಕ್ಷ ನಾಯಕರೊಂದಿಗೆ ಶೀಘ್ರದಲ್ಲೇ ಸಭೆ; ಡಿಕೆ.ಶಿವಕುಮಾರ್

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

SCROLL FOR NEXT