ಸಂಗ್ರಹ ಚಿತ್ರ 
ವಿದೇಶ

WHO ಮತ್ತೊಂದು ಎಡವಟ್ಟು ಬಹಿರಂಗ: ಕೊರೋನಾ ರೋಗಿಗಳಿಗೆ HCQ ಮಾರಕ ಎಂದಿದ್ದ ವರದಿ ಹಿಂದಕ್ಕೆ!

ಮಾರಕ ಕೊರೋನಾ ವೈರಸ್ ಗೆ ಸಂಬಂಧಿಸಿದಂತೆ ವಿಶ್ವ ಆರೋಗ್ಯ ಸಂಸ್ಥೆಯ ಮತ್ತೊಂದು ಎಡವಟ್ಟು ಬಹಿರಂಗವಾಗಿದ್ದು, ಈ ಹಿಂದೆ WHO ಕೊರೋನಾ ರೋಗಿಗಳಿಗೆ HCQ ಮಾರಕ ಎಂದು ಹೇಳಿ ಅದರ ಬಳಕೆ ಮೇಲೆ ನಿರ್ಬಂಧ ಹೇರಿತ್ತು. ಆದರೆ ಇದೀಗ ಕೊರೋನಾ ರೋಗಿಗಳಿಗೆ HCQ ಮಾರಕ ಎಂಬ ವರದಿಯನ್ನೇ ಹಿಂದಕ್ಕೆ ಪಡೆದುಕೊಳ್ಳಲಾಗಿದೆ.

ವಾಷಿಂಗ್ಟನ್: ಮಾರಕ ಕೊರೋನಾ ವೈರಸ್ ಗೆ ಸಂಬಂಧಿಸಿದಂತೆ ವಿಶ್ವ ಆರೋಗ್ಯ ಸಂಸ್ಥೆಯ ಮತ್ತೊಂದು ಎಡವಟ್ಟು ಬಹಿರಂಗವಾಗಿದ್ದು, ಈ ಹಿಂದೆ WHO ಕೊರೋನಾ ರೋಗಿಗಳಿಗೆ HCQ ಮಾರಕ ಎಂದು ಹೇಳಿ ಅದರ ಬಳಕೆ ಮೇಲೆ ನಿರ್ಬಂಧ ಹೇರಿತ್ತು. ಆದರೆ ಇದೀಗ ಕೊರೋನಾ ರೋಗಿಗಳಿಗೆ HCQ ಮಾರಕ ಎಂಬ ವರದಿಯನ್ನೇ ಹಿಂದಕ್ಕೆ ಪಡೆದುಕೊಳ್ಳಲಾಗಿದೆ.

ಕೊರೋನಾ ರೋಗಿಗಳಿಗೆ HCQ (ಹೈಡ್ರಾಕ್ಸಿಕ್ಲೋಕ್ವಿನ್)ಮಾರಕ ಎಂದು ಹೇಳಿದ್ದ ಸಂಶೋಧನಾ ವರದಿಯನ್ನು ಲ್ಯಾನ್ಸೆಟ್ ಸ್ಟಡಿ ಹಿಂದಕೆ ಪಡೆದುಕೊಂಡಿದೆ ಎಂದು ಹೇಳಲಾಗಿದೆ. ಸಂಶೋಧನಾಕಾರರು ಸಂಪೂರ್ಣ ದತ್ತಾಂಶವನ್ನು ಹಂಚಿಕೊಳ್ಳಲು ವಿಫಲವಾದ ಹಿನ್ನಲೆಯಲ್ಲಿ ವರದಿಯನ್ನು ಹಿಂಪಡೆಯಲಾಗಿದೆ ಎನ್ನಲಾಗಿದೆ.

ಈ ಹಿಂದೆ ವಿಶ್ವ ಆರೋಗ್ಯ ಸಂಸ್ಥೆ HCQ ಕೊರೋನಾ ರೋಗಿಗಳ ಜೀವಕ್ಕೆ ಮಾರಕ ಎಂದು ಅದರ ಬಳಕೆ ಮೇಲೆ ನಿರ್ಬಂಧ ಹೇರಿದ ಬೆನ್ನಲ್ಲೇ ಸಾಕಷ್ಚು ಪ್ರಶ್ನೆಗಳು ಉದ್ಬವಿಸಿತ್ತು. ಸರ್ಜಿಕಲ್ ಸ್ಪೇರ್ ಕಾರ್ಪೋರೇಷನ್ ಮತ್ತು ಅದರ ಸಂಸ್ಥಾಪಕ, ಸಹ ಲೇಖಕ ಸಪನ್ ದೇಸಾಯಿ ಅವರು ಲ್ಯಾನ್ಸೆಟ್ ಜರ್ನಲ್ ಗೆ ನೀಡಿದ್ದ ವರದಿಯನ್ನು ಹಿಂದಕ್ಕೆ ಪಡೆಯುವುದಾಗಿ ಹೇಳಿಕೆ ನೀಡಿದ್ದಾರೆ ಎನ್ನಲಾಗಿದೆ.

ಈ ವರದಿಯನ್ನು ಪರಿಶೀಲಿಸಿದ್ದ ಪೀರ್ ರೀವ್ಯೂವರ್ ಗಳು ಸರ್ಜಿಕಲ್ ಸ್ಪೇರ್ ಕಾರ್ಪೋರೇಷನ್ ಸಂಸ್ಥೆ ಸಂಶೋಧನೆಯ ಸಂಪೂರ್ಣ ದತ್ತಾಂಶವನ್ನು ನೀಡಿಲ್ಲ ಎಂದು ಹೇಳಿದ್ದರು.  ಇದರ ಬೆನ್ನಲ್ಲೇ ಸರ್ಜಿಕಲ್ ಸ್ಪೇರ್ ಕಾರ್ಪೋರೇಷನ್ ಸಂಸ್ಥೆ ತನ್ನ ವರದಿಯನ್ನು ಹಿಂದಕ್ಕೆ ಪಡೆದಿದೆ.

ಅನುಮಾನ ಮೂಡಿಸಿದ ವಿಶ್ವ ಆರೋಗ್ಯ ಸಂಸ್ಥೆಯ ನಡೆ
ಇನ್ನು ಈ ಅಪೂರ್ಣ ವರದಿಯನ್ನೇ ಮುಂದಿಟ್ಟುಕೊಂಡು ವಿಶ್ವ ಆರೋಗ್ಯ ಸಂಸ್ಥೆ HCQ ಔಷಧಿ ಕೊರೋನಾ ರೋಗಿಳಿಗೆ ಮಾರಕವಾಗಬಹುದು ಎಂದು ಹೇಳಿ ಅದರ ಬಳಕೆ ಮೇಲೆ ನಿರ್ಬಂಧ ಹೇರಿತ್ತು, ಆದರೆ ಬಳಿಕ ತನ್ನ ನಿರ್ಧಾರವನ್ನು ಬದಲಿಸಿತ್ತು. ಒಟ್ಟಾರೆ ವಿಶ್ವ ಆರೋಗ್ಯ ಸಂಸ್ಥೆಯ ಈ ತರಾತುರಿ ನಿರ್ಧಾರಗಳು ಅದರ ನಡೆ ಮೇಲೆ ಅನುಮಾನ ಮೂಡುವಂತೆ ಮಾಡುತ್ತಿದೆ.

ಹೈಡ್ರಾಕ್ಸಿಕ್ಲೋರೋಕ್ವಿನ್ ಮಾತ್ರೆಗಳ ಪರೀಕ್ಷೆ ಸ್ವಾಗತಿಸಿದ CSIR!
ಹೈಡ್ರಾಕ್ಸಿಕ್ಲೋರೋಕ್ವಿನ್ ಮಾತ್ರೆಗಳ ಪರೀಕ್ಷೆಯನ್ನು ಪುನರಾರಂಭಿಸಿರುವ ವಿಶ್ವ ಆರೋಗ್ಯ ಸಂಸ್ಥೆ(WHO) ನಿರ್ಧಾರವನ್ನು ಸಿಎಸ್‌ಐಆರ್‌, ಈ ಹಿಂದೆ ತರಾತುರಿಯಲ್ಲಿ ಮಾತ್ರೆಗಳ ಪರೀಕ್ಷಾ ಪ್ರಕ್ರಿಯನ್ನು ನಿಲ್ಲಿಸಲಾಗಿತ್ತು ಎಂದು ಅಭಿಪ್ರಾಯಪಟ್ಟಿದೆ. ಈ ಕುರಿತು ಮಾತನಾಡಿರುವ ಸಿಎಸ್‌ಐಆರ್ ಮಹಾನಿರ್ದೇಶಕ ಡಾ. ಶೇಖರ್ ಸಿ ಮಾಂಡೆ, ಹೈಡ್ರಾಕ್ಸಿಕ್ಲೋರೋಕ್ವಿನ್ ಮಾತ್ರೆಗಳ ಪರೀಕ್ಷೆಯನ್ನು ಪುನರಾರಂಭಿಸಿರುವ WHO ನಿರ್ಣಯ ಉತ್ತಮವಾದುದು ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

AI- ಚಾಲಿತ ಡಿಜಿಟಲೀಕರಣ, SIR ಕುರಿತು CECಗೆ ಐದನೇ ಪತ್ರ ಬರೆದ ಮಮತಾ ಬ್ಯಾನರ್ಜಿ

Vijay Hazare Trophy: ಸೆಮಿಫೈನಲ್‌ಗೆ ಲಗ್ಗೆ ಇಟ್ಟ ಕರ್ನಾಟಕ

ಪ್ಯಾಕ್ಸ್ ಸಿಲಿಕಾ ಅಲೈಯನ್ಸ್‌ನ ಸದಸ್ಯ ದೇಶವಾಗಲಿದೆ; ಅಮೆರಿಕಕ್ಕೆ ಭಾರತಕ್ಕಿಂತ ಮುಖ್ಯ ದೇಶ ಮತ್ತೊಂದಿಲ್ಲ: ಸೆರ್ಗಿಯೊ ಗೋರ್

UP ದಲಿತ ಮಹಿಳೆ ಕೊಲೆ: ಯೋಗಿ ಸರ್ಕಾರ ಜಾತಿ, ಧರ್ಮದ ಆಧಾರದಲ್ಲಿ ದ್ವೇಷಕ್ಕೆ ಪ್ರಚೋದನೆ- ಕಾಂಗ್ರೆಸ್ ಕಿಡಿ!

Indian Stock Market: 5 ದಿನಗಳ ಸತತ ಕುಸಿತಕ್ಕೆ ಕೊನೆಗೂ ಬ್ರೇಕ್, Sensex 301 ಅಂಕ ಏರಿಕೆ!

SCROLL FOR NEXT