ಸಾಂದರ್ಭಿಕ ಚಿತ್ರ 
ವಿದೇಶ

ಐಎಎಫ್ ಭಯದಿಂದ ಕರಾಚಿಯನ್ನು ಕತ್ತಲಲ್ಲಿ ಮುಳುಗಿಸಿದ ಪಾಕ್: ಟ್ವಿಟರ್ ನಲ್ಲಿ ಇದರದ್ದೇ ಚರ್ಚೆ 

ಪುಲ್ವಾಮದಲ್ಲಿ ಪಾಕ್ ಭಯೋತ್ಪಾದಕರು ನಡೆಸಿದ್ದ ದಾಳಿಗೆ ಪ್ರತಿಕಾರವಾಗಿ ಭಾರತ ಬಾಲಾಕೋಟ್ ಭಯೋತ್ಪಾದಕರ ನೆಲೆಗಳ ಮೇಲೆ ಐಎಎಫ್ ನಡೆಸಿದ್ದ ದಾಳಿಯ ಭೀತಿಯಿಂದ ಪಾಕಿಸ್ತಾನ ಒಂದು ವರ್ಷವಾದರೂ ಹೊರಬಂದಿಲ್ಲ. 

ಪುಲ್ವಾಮದಲ್ಲಿ ಪಾಕ್ ಭಯೋತ್ಪಾದಕರು ನಡೆಸಿದ್ದ ದಾಳಿಗೆ ಪ್ರತಿಕಾರವಾಗಿ ಭಾರತ ಬಾಲಾಕೋಟ್ ಭಯೋತ್ಪಾದಕರ ನೆಲೆಗಳ ಮೇಲೆ ಐಎಎಫ್ ನಡೆಸಿದ್ದ ದಾಳಿಯ ಭೀತಿಯಿಂದ ಪಾಕಿಸ್ತಾನ ಒಂದು ವರ್ಷವಾದರೂ ಹೊರಬಂದಿಲ್ಲ. 

ಇದನ್ನು ಸ್ಪಷ್ಟಪಡಿಸುವಂತಹ ಘಟನೆ ಪಾಕಿಸ್ತಾನದ ಕರಾಚಿಯಲ್ಲಿ ನಡೆದಿದ್ದು, ಭಾರತೀಯ ವಾಯುಪಡೆಯ ಭೀತಿಯಿಂದ ಪಾಕಿಸ್ತಾನದ ಭೂ ಸೇನೆ ಇಡೀ ಕರಾಚಿ ನಗರವನ್ನು ಕತ್ತಲಲ್ಲಿ ಮುಳುಗಿಸಿದ್ದ ಘಟನೆ ವರದಿಯಾಗಿದೆ. 

ಜೂ.09 ರಂದು ರಾತ್ರಿ ಪಾಕಿಸ್ತಾನದ ಕರಾಚಿ ನಗರದ ಮೇಲೆ ಯುದ್ಧ ವಿಮಾನಗಳು ಹಾರಾಡತೊಡಗಿದ್ದವು. ಇದನ್ನು ಭಾರತೀಯ ವಾಯುಪಡೆಯ ವಿಮಾನಗಳೆಂದುಕೊಂಡ ಪಾಕಿಸ್ತಾನದ ಸೇನೆ ಸರ್ಕಾರದೊಂದಿಗೆ ಮಾತುಕತೆ ನಡೆಸಿ ಇಡೀ ಕರಾಚಿ ನಗರದ ವಿದ್ಯುತ್ ನ್ನು ಕಡಿತಗೊಳಿಸಿ ಕತ್ತಲಲ್ಲಿರಿಸಿತ್ತು. ಭಾರತೀಯ ವಾಯುಪಡೆ ಮತ್ತೆ ಪಾಕಿಸ್ತಾನದ ಮೇಲೆ ಸರ್ಜಿಕಲ್ ಸ್ಟ್ರೈಕ್ ನಡೆಸಲು ಮುಂದಾಗಿದೆ, ಈ ಹಿನ್ನೆಲೆಯಲ್ಲಿ ವಿದ್ಯುತ್ ಕಡಿತಗೊಳಿಸಿದರೆ ಐಎಎಫ್ ಗೆ ಸ್ಪಷ್ಟವಾಗಿ ಏನೂ ಕಾಣುವುದಿಲ್ಲ  ಎಂದು ಪಾಕಿಸ್ತಾನದ ಸೇನೆ ಭಾವಿಸಿತ್ತು. ಆದರೆ ಕರಾಚಿಯಲ್ಲಿ ಹಾರಾಡಿದ್ದ ವಿಮಾನಗಳು ಪಾಕಿಸ್ತಾನದ ವಾಯುಸೇನೆಯದ್ದೇ ಆಗಿದ್ದವು ಎಂಬ ಮಾಹಿತಿ ನಂತರ ಬಹಿರಂಗವಾಗಿದೆ. 

2019 ರಲ್ಲಿ ಪಾಕ್ ನ ಬಾಲಾಕೋಟ್ ಮೇಲೆ ಭಾರತೀಯ ವಾಯುಪಡೆ ನಡೆಸಿದ್ದ ಸರ್ಜಿಕಲ್ ಸ್ಟ್ರೈಕ್ ಪಾಕಿಸ್ತಾನಕ್ಕೆ ಈಗಲೂ ದುಃಸ್ವಪ್ನವಾಗಿ ಕಾಡುತ್ತಿದೆ ಎಂಬುದಕ್ಕೆ ಈ ಘಟನೆ ಉದಾಹರಣೆಯಾಗಿದ್ದು, ಟ್ವಿಟರ್ ನಲ್ಲಿ ಈ ಬಗ್ಗೆ ಭಾರಿ ಚರ್ಚೆ ನಡೆಯುತ್ತಿದೆ. ಆದರೆ ಪಾಕಿಸ್ತಾನ ಮಾತ್ರ ಕರಾಚಿಯಲ್ಲಿ ನಡೆದಿದ್ದನ್ನು ತಾಂತ್ರಿಕ ದೋಷದಿಂದಾಗಿ ವಿದ್ಯುತ್ ಕಡಿತಗೊಳಿಸಲಾಗಿತ್ತು ಎಂದು ಸಮರ್ಥನೆ ನೀಡಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT