ಸಂಗ್ರಹ ಚಿತ್ರ 
ವಿದೇಶ

ಭಾರತೀಯ ರಾಯಭಾರಿ ಅಧಿಕಾರಿಗಳ ಮೇಲೆ ದೌರ್ಜನ್ಯ: ಆರೋಪ ನಿರಾಕರಿಸಿದ ಪಾಕಿಸ್ತಾನ

ಭಾರತೀಯ ರಾಯಭಾರ ಕಚೇರಿಯ ಇಬ್ಬರು ಸಿಬ್ಬಂದಿಗಳನ್ನು ಅಪಹರಿಸಿ, ಅವರ ಮೇಲೆ ದೌರ್ಜನ್ಯ ನಡೆಸಿದ ಭಾರತದ ಆರೋಪವನ್ನು ಪಾಕಿಸ್ತಾನ ಬುಧವಾರ ನಿರಾಕರಿಸಿದೆ. 

ನವದೆಹಲಿ: ಭಾರತೀಯ ರಾಯಭಾರ ಕಚೇರಿಯ ಇಬ್ಬರು ಸಿಬ್ಬಂದಿಗಳನ್ನು ಅಪಹರಿಸಿ, ಅವರ ಮೇಲೆ ದೌರ್ಜನ್ಯ ನಡೆಸಿದ ಭಾರತದ ಆರೋಪವನ್ನು ಪಾಕಿಸ್ತಾನ ಬುಧವಾರ ನಿರಾಕರಿಸಿದೆ. 

ಭಾರತೀಯ ರಾಯಭಾರಿ ಕಚೇರಿಯ ಇಬ್ಬರು ಅಧಿಕಾರಿಗಳನ್ನು ಅಪಹರಿಸಿದ್ದ ಪಾಕಿಸ್ತಾನ, ಅವರನ್ನು 12 ತಾಸುಗಳ ಬಳಿಕ ಬಿಡುಗಡೆ ಮಾಡಿತ್ತು. 

ತನ್ನ ವಶದಲ್ಲಿದ್ದ ಆ ಇಬ್ಬರು ಅಧಿಕಾರಿಗಳ ಮೇಲೆ ದೌರ್ಜನ್ಯವೆಸಗಿದ್ದ ಪಾಕಿಸ್ತಾನದ ಅಧಿಕಾರಿಗಳು, ಕೊಳಕು ನೀರನ್ನು ಕುಡಿಸಿತ್ತು. ಕಚೇರಿಗೆ ಇಬ್ಬರು ಸಿಬ್ಬಂದಿಗಳು ತೆರಳುತ್ತಿದ್ದ ವೇಳೆ, ಪೆಟ್ರೋಲ್ ಬಂಕ್ ಒಂದರಲ್ಲಿ 6 ವಾಹನಗಳಲ್ಲಿ ಬಂದ 15-16 ಬಂದೂಕುಧಾರಿ ವ್ಯಕ್ತಿಗಳು ಇಬ್ಬರೂ ಅಧಿಕಾರಿಗಳ ಕಣ್ಣುಕಟ್ಟಿ, ಮುಖದ ಮೇಲೆ ಚೀಲ ಹಾಕಿದ್ದರು. ಬಳಿಕ ಕೈಕೋಳ ತೊಡಿಸಿ ಅಜ್ಞಾತ ಸ್ಥಳಕ್ಕೆ ಅಪಹರಿಸಿದ್ದರು. 

6 ತಾಸು ಆ ಅಜ್ಞಾತಸ್ಥಳದಲ್ಲಿ ವಿಚಾರಣೆ ನಡೆಸಿದ್ದರು. ಈ ವೇಳೆ ಕಟ್ಟಿಗೆ, ಕಬ್ಬಿಣದ ಸರಳುಗಳಿಂದ ಹೊಡೆದು, ಕೊಳಕು ನೀರು ಕುಡಿಸಿದ್ದರು ಎಂದು ಹೇಳಲಾಗುತ್ತಿದೆ. 

ವಿಚಾರಣೆ ವೇಳೆ ನೀವು ಅಪಘಾತ ಎಸಗಿದ್ದೀರಿ ಎಂದು ಒಪ್ಪಿಕೊಳ್ಳಿ ಎಂದು ಬಲವಂತಪಡಿಸಿ, ಚಿತ್ರೀಕರಣ ಮಾಡಿಕೊಂಡರು. ಅಲ್ಲದೆ, ಕಚೇರಿಯ ಕೆಲಸಗಳ ರಹಸ್ಯಗಳನ್ನು ತಿಳಿದುಕೊಳ್ಳಲು ಯತ್ನಿಸಿದ್ದು, ಮುಂದಿನ ದಿನಗಳಲ್ಲಿ ರಾಯಭಾರಿ ಕಚೇರಿಯ ಇತರೆ ಅಧಿಕಾರಿಗಳಿಗೂ ಇದೇ ಗತಿ ಬರಲಿದೆ ಎಂದೂ ಬೆದರಿಕೆ ಹಾಕಿದ್ದಾರೆಂದು ಮೂಲಗಳಿಂದ ತಿಳಿದುಬಂದಿದೆ. 

ಈ ಘಟನೆಗೆ ಭಾರತ ತೀವ್ರ ಪ್ರತಿಭಟನೆ ವ್ಯಕ್ತಪಡಿಸಿದ್ದು, ಪಾಕಿಸ್ತಾನ ರಾಯಭಾರಿ ಕಚೇರಿಯ ಅಧಿಕಾರಿಗಳಿಗೆ ನೋಟಿಸ್ ಜಾರಿ ಮಾಡಿತ್ತು. 

ಘಟನೆ ಬಳಿಕ ಸೋಮವಾರ ರಾತ್ರಿ ಇಬ್ಬರೂ ಅಧಿಕಾರಿಗಳು ಭಾರತೀಯ ರಾಯಭಾರಿ ಕಚೇರಿಗೆ ಮರಳಿದ್ದಾರೆ. ಆದರೆ, ದೇಹದ ಮೇಲೆ ಏಟು ತಿಂದ ಗುರುತುಗಳು ಕಂಡು ಬಂದಿವೆ ಎಂದು ಹೇಳಲಾಗುತ್ತಿದೆ.  

ಭಾರತದ ಈ ಆರೋಪಕ್ಕೆ ಪ್ರತಿಕ್ರಿಯೆ ನೀಡಿರುವ ಪಾಕಿಸ್ತಾನ, ಇದೊಂದು ಆಧಾರ ರಹಿತ ಆರೋಪವಾಗಿದೆ. ಹಿಟ್ ಆ್ಯಂಡ್ ರನ್ ಕೇಸ್ ಅಡಿಯಲ್ಲಿ ಇಬ್ಬರನ್ನು ವಶಕ್ಕೆ ಪಡೆದುಕೊಳ್ಳಲಾಗಿತ್ತು. ನಂತರ ಆ ಇಬ್ಬರೂ ಭಾರತೀಯ ರಾಯಭಾರಿ ಕಚೇರಿಯ ಸಿಬ್ಬಂದಿಗಳು ಎಂದು ತಿಳಿದ ಬಳಿಕ ಬಿಡುಗಡೆ ಮಾಡಲಾಗಿತ್ತು ಎಂದು ತಿಳಿಸಿದೆ. 

ಆರೋಪ ಕುರಿತು ಪಾಕಿಸ್ತಾನದ ವಿದೇಶಾಂಗ ಕಚೇರಿಯು ಹೇಳಿಕೆ ನೀಡಿದ್ದು, ಸತ್ಯವನ್ನು ತಿರುಚುವ ಯತ್ನ ಇದಾಗಿದ್ದು, ಅಧಿಕಾರಿಗಳ ಅಪರಾಧವನ್ನು ನಿರಾಕರಿಸುವುದೂ ಕೂಡ ಕಾನೂನು ಬಾಹಿರವಾಗಿದೆ ಎಂದಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Nepal floods|ಮೃತರ ಸಂಖ್ಯೆ 165ಕ್ಕೆ ಏರಿಕೆ; ನಾಪತ್ತೆಯಾದವರಲ್ಲಿ 133 ಮಂದಿ ಭಾರತೀಯರು

Iran ಸರ್ವೋಚ್ಚ ನಾಯಕ Mojtaba Khamenei ಸತ್ತಿಲ್ಲ, ಗಂಭೀರವಾಗಿ ಗಾಯಗೊಂಡಿದ್ದಾರೆ: ಹಳೇ Vidoe ಬಿಡುಗಡೆ ಬೆನ್ನಲ್ಲೇ ಅಸಲಿಯತ್ತು ಬಿಚ್ಚಿಟ್ಟ Donald Trump..!

Nepal floods: ಸಾವಿನ ಸಂಖ್ಯೆ 157ಕ್ಕೇರಿಕೆ, 750ಕ್ಕೂ ಅಧಿಕ ಮಂದಿ ನಾಪತ್ತೆ, ನೇಪಾಳಕ್ಕೆ ಭಾರತ ನೆರವು! ಸಹಾಯವಾಣಿ ಬಿಡುಗಡೆ

ನೇಪಾಳ ಭೀಕರ ಪ್ರವಾಹ: 95 ಮಂದಿ ಸಾವು; 105 ಭಾರತೀಯರು ಸೇರಿ 400 ಮಂದಿ ನಾಪತ್ತೆ: ಬಿಹಾರ, ಯುಪಿಯಲ್ಲಿ ಹೈ ಅಲರ್ಟ್! Video

ನೇಪಾಳ ಪ್ರವಾಹ: ಭಾರತಕ್ಕೆ ದೊಡ್ಡ ಆತಂಕವಿಲ್ಲ, ಜಲಾಶಯಗಳ ನೀರಿನ ಮಟ್ಟ ಇಳಿಕೆ: ಕೇಂದ್ರ ಸ್ಪಷ್ಟನೆ