ಚೀನಾ ವಿದೇಶಾಂಗ ಸಚಿವ ವಾಂಗ್ ಯೀ 
ವಿದೇಶ

ಭಾರತೀಯ ಸೈನಿಕರ 'ಆಕ್ರಮಣಶೀಲತೆ, ಲಜ್ಜೆಗೇಡಿತನ' ಗಾಲ್ವಾನ್ ಸಂಘರ್ಷಕ್ಕೆ ಕಾರಣ: ಚೀನಾ ವಿದೇಶಾಂಗ ಸಚಿವ ವಾಂಗ್ ಯೀ

ಗಾಲ್ವಾನ್ ಸಂಘರ್ಷಕ್ಕೆ ಭಾರತೀಯ ಸೈನಿಕರ ಆಕ್ರಮಣಶೀಲತೆಯೇ ಕಾರಣ. ಉಭಯ ದೇಶಗಳ ನಡುವೆ ಶಾಂತಿ ಮಾತುಕತೆ ಚಾಲ್ತಿಯಲ್ಲಿರುವಾಗಲೇ ಸೈನಿಕರು ಲಜ್ಜೆಗೆಟ್ಟವರಂತೆ ವರ್ತಿಸಿದ್ದಾರೆ ಎಂದು ಚೀನಾ ವಿದೇಶಾಂಗ ಸಚಿವ ವಾಂಗ್ ಯೀ ಹೇಳಿದ್ದಾರೆ. 

ನವದೆಹಲಿ: ಗಾಲ್ವಾನ್ ಸಂಘರ್ಷಕ್ಕೆ ಭಾರತೀಯ ಸೈನಿಕರ ಆಕ್ರಮಣಶೀಲತೆಯೇ ಕಾರಣ. ಉಭಯ ದೇಶಗಳ ನಡುವೆ ಶಾಂತಿ ಮಾತುಕತೆ ಚಾಲ್ತಿಯಲ್ಲಿರುವಾಗಲೇ ಸೈನಿಕರು ಲಜ್ಜೆಗೆಟ್ಟವರಂತೆ ವರ್ತಿಸಿದ್ದಾರೆ ಎಂದು ಚೀನಾ ವಿದೇಶಾಂಗ ಸಚಿವ ವಾಂಗ್ ಯೀ ಹೇಳಿದ್ದಾರೆ. 

ಭಾರತ-ಚೀನಾ ಗಡಿ ಪ್ರದೇಶ ಲಡಾಖ್ ನ ಗಾಲ್ವಾನ್ ನಲ್ಲಿ ನಡೆದ ಸಂಘರ್ಷ ವಿಚಾರಕ್ಕೆ ಸಂಬಂಧಿಸಿದಂತೆ ಭಾರತದ ವಿದೇಶಾಂಗ ಸಚಿವ ಎಸ್. ಜೈಶಂಕರ್ ಮತ್ತು ಚೀನಾದ ವಿದೇಶಾಂಗ ಸಚಿವ ವಾಂಗ್ ಯಿ ಇಂದು ದೂರವಾಣಿ ಕರೆ ಮೂಲಕ ಚರ್ಚೆ ನಡೆಸಿದರು. ಈ ವೇಳೆ ಭಾರತೀಯ ಸೈನಿಕರ ಆಕ್ರಮಣಕಾರಿ ಮನೋಭಾವದ ಕುರಿತು ತೀವ್ರ ಅಸಮಾಧನ ವ್ಯಕ್ತಪಡಿಸಿದ ವಾಂಗ್ ಯೀ, ಭಾರತ ಸರ್ಕಾರ ಕೂಡಲೇ ತನ್ನ ಸೈನಿಕರ ಪ್ರಚೋದನಾತ್ಮಕ ನಡೆಗೆ ಕೂಡಲೇ ಬ್ರೇಕ್ ಹಾಕಬೇಕು. ಅಲ್ಲದೆ ಗಾಲ್ವಾನ್ ಸಂಘರ್ಷ ಸಂಬಂಧ ಕೂಲಂಕುಷ ತನಿಖೆ ನಡೆಸಿ ತಪ್ಪಿತಸ್ಥ ಸೈನಿಕರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

ಈ ಬಗ್ಗೆ ಚೀನಾ ವಿದೇಶಾಂಗ ಇಲಾಖೆ ಹೇಳಿಕೆ ಬಿಡುಗಡೆ ಮಾಡಿದ್ದು, 'ಭಾರತೀಯ ಸೈನಿಕರ ಆಕ್ರಮಣಶೀಲತೆಯೇ ಸಂಘರ್ಷಕ್ಕೆ ಕಾರಣ ಎಂದು ಹೇಳಿರುವ ವಾಂಗ್ ಯೀ, ಭಾರತೀಯ ಸೈನಿಕರೇ ಮೊದಲು ವಿವಾದಿತ ಗಡಿ ಪ್ರದೇಶವನ್ನು ಪ್ರವೇಶ ಮಾಡುವ ಸಾಹಸ ಮಾಡಿದ್ದು, ಇದು ಸಂಘರ್ಷಕ್ಕೆ ಕಾರಣವಾಯಿತು ಎಂದು ಆರೋಪಿಸಿದ್ದಾರೆ.  ಅಲ್ಲದೆ ಭಾರತ ಸರ್ಕಾರ ಕೂಡಲೇ ತನ್ನ ಸೈನಿಕರ ಪ್ರಚೋದನಾತ್ಮಕ ನಡೆಗೆ ಕೂಡಲೇ ಬ್ರೇಕ್ ಹಾಕಬೇಕು. ಅಲ್ಲದೆ ಗಾಲ್ವಾನ್ ಸಂಘರ್ಷ ಸಂಬಂಧ ಕೂಲಂಕುಷ ತನಿಖೆ ನಡೆಸಿ ತಪ್ಪಿತಸ್ಥ ಸೈನಿಕರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಭವಿಷ್ಯದಲ್ಲಿ ಇಂತಹ ಘಟನೆಗಳು ಮರಕಳಿಸದಂತೆ ಭಾರತ ಸರ್ಕಾರ ವಿಶ್ವಾಸ ಮೂಡಿಸಬೇಕು ಎಂದು ಒತ್ತಾಯಿಸಿದೆ. 

ಶಾಂತಿ ಮಾತುಕತೆ ಚಾಲ್ತಿಯಲ್ಲಿರುವಾಗಲೇ ಸೈನಿಕರು ಲಜ್ಜೆಗೆಟ್ಟವರಂತೆ ವರ್ತಿಸಿದ್ದಾರೆ. ಗಾಲ್ವಾನ್ ನಲ್ಲಿ ಪರಿಸ್ಥಿತಿ ನಿಯಂತ್ರಣದಲ್ಲಿದ್ದಾಗ ಭಾರತೀಯ ಸೈನಿಕರು ಅನಾವಶ್ಯಕವಾಗಿ ವಿವಾಧಿತ ಭೂ ಪ್ರದೇಶವನ್ನು ಅಕ್ರಮಿಸಿಕೊಳ್ಳುವ ಮೂಲಕ ಚೀನಾ ಸೈನಿಕರನ್ನು ಪ್ರಚೋದಿಸಿದ್ದಾರೆ. ಇದು ಚೀನಾ ಸೇನಾಧಿಕಾರಿಗಳ ಆಕ್ರೋಶಕ್ಕೆ ಕಾರಣವಾಗಿ ವಾಗ್ವಾದ ನಡೆದು ಸಂಘರ್ಷಕ್ಕೆ ದಾರಿ ಮಾಡಿದೆ ಎಂದು ವಾಂಗ್ ಯೀ ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Bihar election 2025: ಎನ್ ಡಿಎ ಸೀಟು ಹಂಚಿಕೆ ಅಂತಿಮ, ಬಿಜೆಪಿ, ಜೆಡಿಯು ತಲಾ 101 ಸ್ಥಾನಗಳಲ್ಲಿ ಸ್ಪರ್ಧೆ! ಚಿರಾಗ್ ಗೆ ದಕ್ಕಿದ್ದೆಷ್ಟು?

BJP ಶಾಸಕ ಮುನಿರತ್ನ ಧರಿಸಿದ್ದ RSS ಟೋಪಿ ಕಿತ್ತೆಸೆದ Congress ಮುಖಂಡ: Video Viral!

ವಿಶ್ವದಾಖಲೆ ಬರೆದ ಸ್ಮೃತಿ ಮಂದಾನ: ಕ್ಯಾಲೆಂಡರ್ ವರ್ಷದಲ್ಲಿ ODI ಕ್ರಿಕೆಟ್ ನಲ್ಲಿ 1,000 ರನ್ ಪೂರೈಸಿದ ಜಗತ್ತಿನ ಮೊದಲ ಬ್ಯಾಟರ್!

ನಿಮ್ಮ ಮೇಲೆ ಕ್ರಿಮಿನಲ್ ಕೇಸ್ ಗಳಿವೆ; ಯಾರ ಒತ್ತಡಕ್ಕೆ ಒಳಗಾಗಿ Congress ಮರ್ಯಾದೆ ತೆಗೆಯುತ್ತಿದ್ದೀರಾ? ಚಿದಂಬರಂ ವಿರುದ್ಧ ಹೈಕಮಾಂಡ್ ಗರಂ!

Afghan-Pak War: 'ಅಲ್ಲಾ ಕಾಪಾಡು' ಅಫ್ಘಾನ್ ಪ್ರತೀಕಾರದ ದಾಳಿ; ಆಗಸದೆತ್ತರಕ್ಕೆ ಚಿಮ್ಮಿದ ಪಾಕ್ ಸೈನಿಕರ ಶವಗಳು, ಗಡಿಯಿಂದ ಕಾಲ್ಕಿತ್ತ ಸೇನೆ, Video

SCROLL FOR NEXT