ಸಂಗ್ರಹ ಚಿತ್ರ 
ವಿದೇಶ

ಖಾಯಂ ಅಲ್ಲದ ಸದಸ್ಯ ದೇಶಗಳ ಆಯ್ಕೆಗೆ ಚುನಾವಣೆ: ಭದ್ರತಾ ಮಂಡಳಿ ಸೇರುವ ಭಾರತದ ಕನಸು ನನಸಿಗೆ ಒಂದೇ ಹೆಜ್ಜೆ ಬಾಕಿ!

ದಶಕಗಳಿಂದಲೂ ಮರೀಚಿಕೆಯಾಗಿದ್ದ ವಿಶ್ವ ಸಂಸ್ಥೆಯ ಭದ್ರತಾ ಮಂಡಳಿ ಸೇರುವ ಭಾರತದ ಕನಸು ನನಸಾಗುವ ಮತ್ತೊಂದು ಅಪೂರ್ವ ಅವಕಾಶ ಒದಗಿ ಬಂದಿದ್ದು, 2021–22ನೇ ಸಾಲಿನ ಖಾಯಂ ಅಲ್ಲದ ಸದಸ್ಯ ದೇಶಗಳ ಆಯ್ಕೆಗೆ ಚುನಾವಣೆ ಘೋಷಣೆಯಾಗಿದೆ.

ವಾಷಿಂಗ್ಟನ್: ದಶಕಗಳಿಂದಲೂ ಮರೀಚಿಕೆಯಾಗಿದ್ದ ವಿಶ್ವ ಸಂಸ್ಥೆಯ ಭದ್ರತಾ ಮಂಡಳಿ ಸೇರುವ ಭಾರತದ ಕನಸು ನನಸಾಗುವ ಮತ್ತೊಂದು ಅಪೂರ್ವ ಅವಕಾಶ ಒದಗಿ ಬಂದಿದ್ದು, 2021–22ನೇ ಸಾಲಿನ ಖಾಯಂ ಅಲ್ಲದ ಸದಸ್ಯ ದೇಶಗಳ ಆಯ್ಕೆಗೆ ಚುನಾವಣೆ ಘೋಷಣೆಯಾಗಿದೆ.

ವಿಶ್ವಸಂಸ್ಥೆಯ ಭದ್ರತಾ ಮಂಡಳಿಗೆ ಇದೇ ಬುಧವಾರ ಚುನಾವಣೆ ನಡೆಯಲಿದ್ದು, ಈ ಚುನಾವಣೆಯಲ್ಲಿ ಭಾರತ ಸುಲಭವಾಗಿ ಆಯ್ಕೆಯಾಗುವ ನಿರೀಕ್ಷೆಯಿದೆ. 2021–22ನೇ ಸಾಲಿನ ಖಾಯಂ ಅಲ್ಲದ ಸದಸ್ಯ ರಾಷ್ಟ್ರವಾಗಿ ಬಲಿಷ್ಠ ಭದ್ರತಾ ಮಂಡಳಿಯನ್ನು ಭಾರತ ಸೇರುವ ವಿಶ್ವಾಸವಿದೆ. 75ನೇ ಅಧಿವೇಶನದ ಅಧ್ಯಕ್ಷ, ಭದ್ರತಾ ಮಂಡಳಿಯ ಐದು ಖಾಯಂ ಅಲ್ಲದ ಸದಸ್ಯ ದೇಶಗಳು ಹಾಗೂ ಆರ್ಥಿಕ–ಸಾಮಾಜಿಕ ಮಂಡಳಿಯ ಸದಸ್ಯ ಹುದ್ದೆಗೆ 193 ಸದಸ್ಯ ರಾಷ್ಟ್ರಗಳ ವಿಶ್ವಸಂಸ್ಥೆಯ ಸಾಮಾನ್ಯಸಭೆಯು ಚುನಾವಣೆ ನಡೆಸಲಿದೆ. ಕೋವಿಡ್-19 ಕಾರಣದಿಂದ ಮತದಾನಕ್ಕೆ ವಿಶೇಷ ವ್ಯವಸ್ಥೆ ಕಲ್ಪಿಸಲಾಗಿದೆ. 

ಏಷ್ಯಾ–ಪೆಸಿಫಿಕ್ ಭಾಗದಿಂದ ಭಾರತ ಸ್ಪರ್ಧಿಸುತ್ತಿದ್ದು, ಈ ಭಾಗದಿಂದ ಚುನಾವಣಾ ಸ್ಪರ್ಧಾ ಕಣದಲ್ಲಿರುವ ಏಕೈಕ ದೇಶವಾಗಿದೆ. ಭಾರತದ ಉಮೇದುವಾರಿಕೆಯನ್ನು 55 ಸದಸ್ಯ ದೇಶಗಳ ಏಷ್ಯಾ–ಪೆಸಿಫಿಕ್ ಗುಂಪು ಅನುಮೋದಿಸಿದೆ. ಚೀನಾ, ಪಾಕಿಸ್ತಾನ ಕೂಡ ಭಾರತದ ಆಯ್ಕೆಗೆ ಬೆಂಬಲ ಸೂಚಿಸಿರುವುದು ಭಾರತದ ಗೆಲುವನ್ನು ಸುಲಭ ಮಾಡಿದೆ.  ಉಳಿದಂತೆ ಒಟ್ಟು ಆಫ್ರಿಕಾ ಹಾಗೂ ಏಷ್ಯಾ–ಪೆಸಿಫಿಕ್ ಭಾಗದಿಂದ ಗಿಜ್ಬೌಟಿ, ಹಾಗೂ ಕೀನ್ಯಾ ಸ್ಪರ್ಧೆಯಲ್ಲಿದ್ದು, ಭಾರತ ಹಾಗೂ ಕೀನ್ಯಾ ದೇಶಗಳು ಆಯ್ಕೆಗೆ ಅನುಮೋದನೆ ಪಡೆದಿವೆ ಎನ್ನಲಾಗಿದೆ. 

ಪ್ರತಿ ವರ್ಷ ಎರಡು ವರ್ಷಗಳ ಅವಧಿಗೆ ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ಕಾಯಂ ಅಲ್ಲದ ಸದಸ್ಯ ದೇಶಗಳ ಆಯ್ಕೆಗೆ ಚುನಾವಣೆ ನಡೆಯುತ್ತದೆ. 10 ಸದಸ್ಯ ಸ್ಥಾನಗಳನ್ನು ವಿಭಾಗವಾರು ಹಂಚಿಕೆ ಮಾಡಲಾಗಿದೆ. ಮೂರನೇ ಎರಡರಷ್ಟು ಬಹುಮತ ಪಡೆಯುವ ದೇಶಗಳು ಚುನಾವಣೆಯಲ್ಲಿ ಆಯ್ಕೆಯಾಗಲಿವೆ.  ವಿಶ್ವಸಂಸ್ಥೆಯ ಸಂಸ್ಥಾಪಕ ಸದಸ್ಯ ದೇಶಗಳಲ್ಲಿ ಒಂದಾಗಿರುವ ಭಾರತವು ಭದ್ರತಾ ಮಂಡಳಿಯಲ್ಲಿ ಕಾಯಂ ಅಲ್ಲದ ಸದಸ್ಯ ದೇಶವಾಗಿ ಎರಡು ವರ್ಷಗಳ ಅವಧಿಗೆ ಆಯ್ಕೆಯಾಗುತ್ತಿರುವುದು ಮಹತ್ವದ ಬೆಳವಣಿಗೆ ಎಂದು ವಿಶ್ವಸಂಸ್ಥೆಯ ಭಾರತದ ಪ್ರತಿನಿಧಿ ಟಿ.ಎಸ್. ತಿರುಮೂರ್ತಿ ಹೇಳಿದ್ದಾರೆ. 

ಭಾರತ ಈ ಹಿಂದೆ ಹಲವು ಭಾರಿ ಭದ್ರತಾ ಮಂಡಳಿಯ ಕಾಯಂ ಅಲ್ಲದ ಸದಸ್ಯ ದೇಶವಾಗಿ ಆಯ್ಕೆಯಾಗಿತ್ತು. 2011–12ರಲ್ಲಿ ಕೊನೆಯದಾಗಿ ಆಯ್ಕೆಯಾಗಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮೈಸೂರಿನಲ್ಲಿ ರಾಹುಲ್ ಗಾಂಧಿ ಜತೆ ಸಿದ್ದರಾಮಯ್ಯ, ಡಿಕೆಸಿ ಮಹತ್ವದ ಚರ್ಚೆ; ಬಳಿಕ ಸಿಎಂ ಹೇಳಿದ್ದೇನು? Video

'Ground Ops ಗಾಗಿ ಭಾರತೀಯ ಸೇನೆ ಸಂಪೂರ್ಣ ಸಜ್ಜು: ಪಾಕ್ ಗೆ ವಾರ್ನಿಂಗ್ ನೀಡಿದ ಸೇನಾ ಮುಖ್ಯಸ್ಥ ದ್ವಿವೇದಿ!

ಬ್ಲಿಂಕಿಟ್, ಸ್ವಿಗ್ಗಿ, ಜೆಪ್ಟೊಗೆ 10 ನಿಮಿಷಗಳ ಡೆಲಿವರಿ ಸೇವೆ ನಿಲ್ಲಿಸುವಂತೆ ಸರ್ಕಾರ ಸೂಚನೆ; ಯಾಕೆ ಗೊತ್ತಾ?

'ಹಾವು ಕಚ್ಚಿದೆ ಬೇಗ ಚಿಕಿತ್ಸೆ ಕೊಡಿ'; ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂದ ಆಟೋ ಚಾಲಕ, Video

ಜಮ್ಮು-ಕಾಶ್ಮೀರ: ಇದೇ ಮೊದಲು, ಮಸೀದಿಯ ಇಮಾಮ್ ಸೇರಿದಂತೆ ಎಲ್ಲರ ವೈಯಕ್ತಿಕ ಮಾಹಿತಿ ಕಲೆ ಹಾಕುತ್ತಿರುವ ಪೊಲೀಸರು! ಕಾರಣವೇನು ಗೊತ್ತಾ?

SCROLL FOR NEXT