ವಿಜ್ಞಾನಿ ಡಾ.ಸೌಮ್ಯ ಸ್ವಾಮಿನಾಥನ್ 
ವಿದೇಶ

"ಹೈಡ್ರಾಕ್ಸಿಕ್ಲೋರೋಕ್ವಿನ್ ಕೋವಿಡ್-19 ನಿಂದ ಎದುರಾಗುವ ಸಾವನ್ನು ತಡೆಯುವುದಿಲ್ಲ ಎಂಬುದು ಸಾಬೀತಾಗಿದೆ"

ಹೊಸ ಕೊರೋನಾ ವೈರಸ್ ಸೋಂಕಿಗೆ ಗುರಿಯಾಗಿ ಆಸ್ಪತ್ರೆಯಲ್ಲಿರುವವರನ್ನು ಹೈಡ್ರಾಕ್ಸಿಕ್ಲೋರೋಕ್ವಿನ್ ಸಾವಿನಿಂದ ಕಾಪಾಡುವುದಿಲ್ಲ ಎಂಬುದು ಸ್ಪಷ್ಟವಾಗಿ ಸಾಬೀತಾಗಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆಯ ವಿಜ್ಞಾನಿಯೊಬ್ಬರು ಹೇಳಿದ್ದಾರೆ.

ಲಂಡನ್: ಹೊಸ ಕೊರೋನಾ ವೈರಸ್ ಸೋಂಕಿಗೆ ಗುರಿಯಾಗಿ ಆಸ್ಪತ್ರೆಯಲ್ಲಿರುವವರನ್ನು ಹೈಡ್ರಾಕ್ಸಿಕ್ಲೋರೋಕ್ವಿನ್ ಸಾವಿನಿಂದ ಕಾಪಾಡುವುದಿಲ್ಲ ಎಂಬುದು ಸ್ಪಷ್ಟವಾಗಿ ಸಾಬೀತಾಗಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆಯ ವಿಜ್ಞಾನಿಯೊಬ್ಬರು ಹೇಳಿದ್ದಾರೆ.

ಮುಖ್ಯ ವಿಜ್ಞಾನಿ ಡಾ.ಸೌಮ್ಯ ಸ್ವಾಮಿನಾಥನ್ ಅವರು ಈ ಬಗ್ಗೆ ಮಾತನಾಡಿದ್ದು, ಕೋವಿಡ್-19 ರಿಂದ ಪಾರಾಗುವುದರಲ್ಲಿ ಹೈಡ್ರಾಕ್ಸಿಕ್ಲೋರೋಕ್ವಿನ್ ನ ಪಾತ್ರ ಅಗ್ರಸ್ಥಾನದಲ್ಲಿಯೇ ಇದೆ. ಈ ಕುರಿತು ಕ್ಲಿನಿಕಲ್ ಟ್ರೈಲ್ಸ್ ಮುಂದುವರೆದಿದೆ ಎಂದಿದ್ದಾರೆ.  
ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿರುವ ಸೌಮ್ಯ ಸ್ವಾಮಿನಾಥನ್ ಅವರು, ರೋಗದ ಪ್ರಾರಂಭದಲ್ಲಿ ಅದರ ತೀವ್ರತೆಯನ್ನು ಕಡಿಮೆ ಮಾಡಲು ಅಥವಾ ತಡೆಗಟ್ಟುವಲ್ಲಿ ಹೈಡ್ರಾಕ್ಸಿಕ್ಲೋರೋಕ್ವಿನ್ ನ ಪಾತ್ರದ ಬಗ್ಗೆ ಇನ್ನೂ ಭಿನ್ನಾಭಿಪ್ರಾಯಗಳಿವೆ. ಈ ವರೆಗೂ ಗೊತ್ತಿಲ್ಲ, ಹೆಚ್ಚಿನ ಪ್ರಯೋಗಗಳು ನಡೆದು ಡಾಟಾ ಸಿಗಬೇಕಿದೆ ಎಂದು ಹೇಳಿದ್ದು, ಡಬ್ಲ್ಯು ಹೆಚ್ ಒ ನಡೆಸದೇ ಇರುವ ಪ್ರಯೋಗಗಳ ಬಗ್ಗೆಯೂ ಉಲ್ಲೇಖಿಸಿದ್ದಾರೆ.

ಹೈಡ್ರಾಕ್ಸಿಕ್ಲೊರೋಕ್ವಿನ್ ನ ತನ್ನ ಟ್ರಯಲ್ ಟೆಸ್ಟಿಂಗ್ ನಿಂದ ಕೈಬಿಡುತ್ತಿರುವುದಾಗಿ ಎಂದು ವಿಶ್ವ ಆರೋಗ್ಯ ಸಂಸ್ಥೆ ಈ ವಾರ ಹೇಳಿತ್ತು. ಈ ವೇಳೆ ಬ್ರಿಟನ್ ಹಾಗೂ ಇನ್ನಿತರ ಪ್ರತ್ಯೇಕ ವಿಶ್ಲೇಷಣೆಗಳ ಸಾಕ್ಷ್ಯಗಳನ್ನು ಈ ಔಷಧದ ಕುರಿತು ನೀಡಿತ್ತು. ಕೋವಿಡ್-19 ಚಿಕಿತ್ಸೆಗೆ ಎಬೋಲಾ ಹಾಗೂ ಏಡ್ಸ್ ಗೆ ನೀಡಲಾಗುತ್ತಿದ್ದ ಚಿಕಿತ್ಸೆಗಳ ಬಗ್ಗೆ ಪರೀಕ್ಷೆಗಳು ಈ ಹಿಂದಿನಂತೆಯೇ ಮುಂದುವರೆದಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

ಡಿಕೆಶಿ RSS ಗೀತೆ ಹೇಳಿದ್ದೂ ರಾಹುಲ್‌ ಗಾಂಧಿಗೆ ತಲುಪಲಿ: ಶಾಕ್ ಕೊಟ್ಟ ಸತೀಶ್‌ ಜಾರಕಿಹೊಳಿ ಹೇಳಿಕೆ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

SCROLL FOR NEXT