ತಹವ್ವೂರ್ ರಾಣಾ 
ವಿದೇಶ

ಭಾರತದ ಮನವಿ ಹಿನ್ನೆಲೆ, ಅಮೆರಿಕಾದಲ್ಲಿ ಮುಂಬೈ ದಾಳಿಯ ಸಂಚುಕೋರ ರಾಣಾ ಮರು ಬಂಧನ

 2008ರಲ್ಲಿ ನಡೆದ ಮುಂಬೈ ಉಗ್ರ ದಾಳಿಯ ಸಂಚುಕೋರ ಪಾಕಿಸ್ತಾನ ಮೂಲದ ಕೆನಡಾದ ಉದ್ಯಮಿ ತಹವ್ವೂರ್ ರಾಣಾನನ್ನು ಭಾರತಕ್ಕೆ ಹಸ್ತಾಂತರಿಸಬೇಕೆಂಬ ಮನವಿ ಮೇರೆಗೆ ಲಾಸ್ ಎಂಜಲೀಸ್ ನಲ್ಲಿ ಮತ್ತೆ ಬಂಧಿಸಲಾಗಿದೆ ಎಂದು ಅಮೆರಿಕಾದ ಪ್ರಾಸಿಕ್ಯೂಟರ್ ತಿಳಿಸಿದ್ದಾರೆ. 

ಲಾಸ್ ಎಂಜಲೀಸ್: 2008ರಲ್ಲಿ ನಡೆದ ಮುಂಬೈ ಉಗ್ರ ದಾಳಿಯ ಸಂಚುಕೋರ ಪಾಕಿಸ್ತಾನ ಮೂಲದ ಕೆನಡಾದ ಉದ್ಯಮಿ ತಹವ್ವೂರ್ ರಾಣಾನನ್ನು ಭಾರತಕ್ಕೆ ಹಸ್ತಾಂತರಿಸಬೇಕೆಂಬ ಮನವಿ ಮೇರೆಗೆ ಲಾಸ್ ಎಂಜಲೀಸ್ ನಲ್ಲಿ ಮತ್ತೆ ಬಂಧಿಸಲಾಗಿದೆ ಎಂದು ಅಮೆರಿಕಾದ ಪ್ರಾಸಿಕ್ಯೂಟರ್ ತಿಳಿಸಿದ್ದಾರೆ. 

59 ವರ್ಷದ ರಾಣಾ,  ತನಗೆ ಕೋವಿಡ್-19 ಸೋಂಕು ತಗುಲಿದ್ದು, ಕರುಣೆ ತೋರಿ ಬಿಡುಗಡೆ ಮಾಡಬೇಕೆಂದು ಅಮೆರಿಕಾ ನ್ಯಾಯಾಲಯಕ್ಕೆ ಮನವಿ ಮಾಡಿದ ಬಳಿಕ ಆತನನ್ನು  ಇತ್ತೀಚಿಗೆ ಜೈಲಿನಿಂದ ಬಿಡುಗಡೆ ಮಾಡಲಾಗಿತ್ತು. ಆದರೆ, ಭಾರತದ ಕೋರಿಕೆ ಮೇರೆಗೆ ಮರು ಬಂಧಿಸಲಾಗಿದೆ ಎಂದು ಅವರು ಹೇಳಿದ್ದಾರೆ. 

ಜೂನ್ 11 ರಂದು ರಾಣಾ ಆರಂಭಿಕ ನ್ಯಾಯಾಲಯಕ್ಕೆ ಹಾಜರಾಗಿದ್ದರು. ಅಮೆರಿಕಾದ ಜಿಲ್ಲಾ ನ್ಯಾಯಾಧೀಶ ಜಾಕ್ವೆಲಿನ್ ಚೊಲ್ಜಿಯಾನ್ ಜೂನ್ 30ರಂದು ಕ್ಯಾಲಿಪೋರ್ನಿಯಾದ ಜಿಲ್ಲಾ ನ್ಯಾಯಾಲಯದಲ್ಲಿ ರಾಣಾನಾ ಜಾಮೀನು ಅರ್ಜಿ ವಿಚಾರಣೆಯನ್ನು ನಿಗದಿಪಡಿಸಿದ್ದಾರೆ.  

ಈ ಸಂಬಂಧ ಜೂನ್ 22 ರೊಳಗೆ ಅರ್ಜಿ ಸಲ್ಲಿಸುವಂತೆ ರಾಣಾ ಪರ ವಕೀಲರಿಗೆ ತಿಳಿಸಲಾಗಿದೆ. ಜೂನ್ 26ರೊಳಗೆ ಫೆಡರಲ್ ಸರ್ಕಾರದ ಪ್ರತಿಕ್ರಿಯೆ ಬರಲಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ನೊಬೆಲ್ ಶಾಂತಿ ಪ್ರಶಸ್ತಿ ಘೋಷಣೆಯಾಗುತ್ತಿದ್ದಂತೆಯೇ Maria Corina Machado ವಿವಾದಕ್ಕೆ ಗುರಿ; ಭುಗಿಲೆದ್ದ ಅಶಾಂತಿ!

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

'China isn't afraid': ಅಮೆರಿಕದ ಶೇ.100 ರಷ್ಟು ಸುಂಕದ ಬಗ್ಗೆ ಚೀನಿಯರ ಪ್ರತಿಕ್ರಿಯೆ!

ಲಾಲ್ ಬಾಗ್ ಅಭಿವೃದ್ಧಿಗೆ 10 ಕೋಟಿ ರೂ; ಸುರಂಗ ರಸ್ತೆ ಯೋಜನೆಯಿಂದ ಸಸ್ಯೋದ್ಯಾನದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ: ಡಿ.ಕೆ ಶಿವಕುಮಾರ್; Video

SCROLL FOR NEXT