ಕೊರೋನಾ ಭೀತಿ: ಭಾರತದ ನಮಸ್ತೆ ಬಳಸುವಂತೆ ದೇಶವಾಸಿಗಳಿಗೆ ಇಸ್ರೇಲ್ ಪ್ರಧಾನಿ ಕರೆ! 
ವಿದೇಶ

ಕೊರೋನಾ ಭೀತಿ: ಭಾರತದ ನಮಸ್ತೆ ಬಳಸುವಂತೆ ದೇಶವಾಸಿಗಳಿಗೆ ಇಸ್ರೇಲ್ ಪ್ರಧಾನಿ ಕರೆ!

ಚೀನಾ ಸೇರಿದಂತೆ ವಿಶ್ವದಾದ್ಯಂತ ಮರಣ ಮೃದಂಗ ಬಾರಿಸುತ್ತಿರುವ ಕೊರೋನಾ ವೈರಸ್ ಭೀತಿಯಿಂದಾಗಿ ಭಾರತೀಯರ ನಮಸ್ತೆ ಪದ್ಧತಿಯನ್ನು ಬಳಸುವುದನ್ನು ಅಭ್ಯಾಸ ಮಾಡಿಕೊಳ್ಳುವಂತೆ ತಮ್ಮ ದೇಶದ ಜನರಿಗೆ ಇಸ್ರೇಲ್ ಪ್ರಧಾನಮಂತ್ರಿ ಬೆಂಜಮಿನ್ ನೆತನ್ಯಾಹು ಕರೆ ಕೊಟ್ಟಿದ್ದಾರೆ. 

ಜೆರಿಸಲೇಂ: ಚೀನಾ ಸೇರಿದಂತೆ ವಿಶ್ವದಾದ್ಯಂತ ಮರಣ ಮೃದಂಗ ಬಾರಿಸುತ್ತಿರುವ ಕೊರೋನಾ ವೈರಸ್ ಭೀತಿಯಿಂದಾಗಿ ಭಾರತೀಯರ ನಮಸ್ತೆ ಪದ್ಧತಿಯನ್ನು ಬಳಸುವುದನ್ನು ಅಭ್ಯಾಸ ಮಾಡಿಕೊಳ್ಳುವಂತೆ ತಮ್ಮ ದೇಶದ ಜನರಿಗೆ ಇಸ್ರೇಲ್ ಪ್ರಧಾನಮಂತ್ರಿ ಬೆಂಜಮಿನ್ ನೆತನ್ಯಾಹು ಕರೆ ಕೊಟ್ಟಿದ್ದಾರೆ. 

ದೇಶದಲ್ಲಿ ಸೋಂಕು ತಡೆಗೆ ಕೈಗೊಂಡ ಕ್ರಮಗಳ ಬಗ್ಗೆ ಮಾಹಿತಿ ನೀಡಲು ಕರೆಯಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ನೆಹನ್ಯಾಹು, ತನ್ನ ದೇಶದ ಜನರಿಗೆ ಭಾರತದ ನಮಸ್ತೆ ಪದ್ಧತಿ ಅನುಸರಿಸುವಂತೆ ತಿಳಿಸಿದ್ದಾರೆ. 

ಸೋಂಕು ಹರಡದಂತೆ ತಡೆಯಲುಈಗಾಗಲೇ ಸರ್ಕಾರ ಸಾಕಷ್ಟು ಹಲವು ಕ್ರಮಗಳನ್ನು ಕೈಗೊಂಡಿದೆ. ಇದರ ಜೊತೆಗೆ ಹ್ಯಾಂಡ್ ಶೇಕ್ ಬದಲು ಭಾರತೀಯರು ಬಳಸುವ ನಮಸ್ತೆಯನ್ನು ಎಲ್ಲರೂ ಅಳವಡಿಸಿಕೊಳ್ಳಬಹುದು ಎಂದು ಸಲಹೆ ನೀಡಿದರು. ಅಲ್ಲದೆ, ಭಾರತೀಯರು ಹೇಗೆ ನಮಸ್ತೆ ಮಾಡುತ್ತಾರೆಂದು ಸ್ವತಃ ತಾವೇ ಮಾಡಿಯೂ ತೋರಿಸಿದರು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಲಾಲ್ ಬಾಗ್ ಅಭಿವೃದ್ಧಿಗೆ 10 ಕೋಟಿ ರೂ; ಸುರಂಗ ರಸ್ತೆ ಯೋಜನೆಯಿಂದ ಸಸ್ಯೋದ್ಯಾನದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ: ಡಿ.ಕೆ ಶಿವಕುಮಾರ್; Video

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ: ಒಂದಾದ ಜಾರಕಿಹೊಳಿ ಬ್ರದರ್ಸ್‌ಗೆ ಜಾಕ್‌ಪಾಟ್; ರಮೇಶ್ ಕತ್ತಿ ಬಣಕ್ಕೆ ಶಾಕ್!

ನೊಬೆಲ್ ಶಾಂತಿ ಪ್ರಶಸ್ತಿ ಘೋಷಣೆಯಾಗುತ್ತಿದ್ದಂತೆಯೇ Maria Corina Machado ವಿವಾದಕ್ಕೆ ಗುರಿ; ಭುಗಿಲೆದ್ದ ಅಶಾಂತಿ!

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

SCROLL FOR NEXT