ಕೊರೋನಾ ವೈರಸ್ ’ಚಿಕಿತ್ಸೆ’ಗೆ ಕಳ್ಳಬಟ್ಟಿ ಕುಡಿದು 27 ಮಂದಿ ಸಾವು! 
ವಿದೇಶ

ಸುಳ್ಳು ಸುದ್ದಿಯ ಪರಿಣಾಮ: ಕೊರೋನಾ ವೈರಸ್ ’ಚಿಕಿತ್ಸೆ’ಗೆ ಕಳ್ಳಬಟ್ಟಿ ಕುಡಿದು 27 ಮಂದಿ ಸಾವು! 

ಕೊರೋನಾ ವೈರಸ್ ತಡೆಗೆ ಮದ್ಯಸೇವನೆ ಸಹಕಾರಿ ಎಂಬ ಸುಳ್ಳುಸುದ್ದಿ ನಂಬಿ ಕಳ್ಳಬಟ್ಟಿ ಕುಡಿದ 27 ಮಂದಿ ಸಾವನ್ನಪ್ಪಿದ್ದಾರೆ. 

ತೆಹ್ರಾನ್: ಕೊರೋನಾ ವೈರಸ್ ತಡೆಗೆ ಮದ್ಯಸೇವನೆ ಸಹಕಾರಿ ಎಂಬ ಸುಳ್ಳುಸುದ್ದಿ ನಂಬಿ ಕಳ್ಳಬಟ್ಟಿ ಕುಡಿದ 27 ಮಂದಿ ಸಾವನ್ನಪ್ಪಿದ್ದಾರೆ. 

ಇರಾನ್ ನಲ್ಲಿ ಈ ಘಟನೆ ನಡೆದಿದ್ದು, ಕಳ್ಳಬಟ್ಟಿಯಲ್ಲಿದ್ದ ಮೆಥನಾಲ್ ವಿಷ ಸೇವನೆಯಿಂದಾಗಿ 27 ಜನರು ಮೃತಪಟ್ಟಿದ್ದಾರೆ ಎಂದು ಇರಾನ್ ನ ಸರ್ಕಾರಿ ಸುದ್ದಿ ಸಂಸ್ಥೆ ಮಾಹಿತಿ ನೀಡಿದೆ.

ಚೀನಾದಿಂದ ಪ್ರಾರಂಭವಾದ ಕೊರೋನಾ ವೈರಸ್ ಇರಾನ್ ನಲ್ಲಿಯೂ ವ್ಯಾಪಕವಾಗಿ ಹರಡಿದೆ. ಮುಸ್ಲಿಮೇತರ ಧಾರ್ಮಿಕ ಅಲ್ಪಸಂಖ್ಯಾತರನ್ನು ಹೊರತುಪಡಿಸಿ ಉಳಿದವರೆಲ್ಲರಿಗೂ ಇರಾನ್ ನಲ್ಲಿ ಮದ್ಯಸೇವನೆಯನ್ನು ನಿಷೇಧಿಸಲಾಗಿದೆ. ಆದರೆ ಕೊರೋನಾ ವೈರಸ್ ನಿಂದ ಗುಣಮುಖವಾಗುವುದಕ್ಕೆ ಮದ್ಯಸೇವನೆ ಸಹಕಾರಿ ಎಂಬ ಸುಳ್ಳು ಸುದ್ದಿ ಹರಡಿತ್ತು. ಇದನ್ನೇ ನಂಬಿದ ಹಲವರು ಕಳ್ಳಬಟ್ಟಿ ಸೇವನೆ ಮಾಡಿದ್ದಾರೆ. ಈ ಪೈಕಿ ಇರಾನ್ ನ ನೈಋತ್ಯ ಪ್ರದೇಶದ ಖುಜೆಸ್ತಾನ್ ನಲ್ಲಿ 20 ಮಂದಿ  ಹಾಗೂ ಉತ್ತರ ಭಾಗದ ಅಲ್ಬೋರ್ಜ್ 7 ಮಂದಿ ಸಾವನ್ನಪ್ಪಿದ್ದಾರೆ. ಇರಾನ್ ನಲ್ಲಿ ಕೊರೋನಾ ವೈರಸ್ ಪೀಡಿತ 69 ಮಂದಿಯ ಪೈಕಿ 16 ಜನರು ಸಾವನ್ನಪ್ಪಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

ಪಶ್ಚಿಮ ಬಂಗಾಳ ವೈದ್ಯಕೀಯ ವಿದ್ಯಾರ್ಥಿನಿ ಗ್ಯಾಂಗ್ ರೇಪ್ ಕೇಸ್: ಮೂವರ ಬಂಧನ

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

SCROLL FOR NEXT