ಯೋಗಿ ಆದಿತ್ಯನಾಥ್ 
ವಿದೇಶ

ಕೋವಿಡ್-19: ದೈನಂದಿನ ವೇತನ ಪಡೆಯುವವರಿಗಾದ ನಷ್ಟಕ್ಕೆ ಯೋಗಿ ಸರ್ಕಾರದಿಂದ ಪರಿಹಾರ! 

ಕೊರೋನಾ ವೈರಸ್ ಹರಡುವುದನ್ನು ತಡೆಗಟ್ಟಲು ಭಾರತದ ಸರ್ಕಾರ ಲಾಕ್ ಡೌನ್ ಕ್ರಮ ಕೈಗೊಂಡಿದ್ದು, ಇದರ ನೇರ, ಪರೋಕ್ಷ ಪರಿಣಾಮ ದೈನಂದಿನ ವೇತನಕ್ಕಾಗಿ ದುಡಿಯುವ ವರ್ಗದವರ ಮೇಲೆ ಬೀರಿದೆ. 

ಲಖನೌ: ಕೊರೋನಾ ವೈರಸ್ ಹರಡುವುದನ್ನು ತಡೆಗಟ್ಟಲು ಭಾರತದ ಸರ್ಕಾರ ಲಾಕ್ ಡೌನ್ ಕ್ರಮ ಕೈಗೊಂಡಿದ್ದು, ಇದರ ನೇರ, ಪರೋಕ್ಷ ಪರಿಣಾಮ ದೈನಂದಿನ ವೇತನಕ್ಕಾಗಿ ದುಡಿಯುವ ವರ್ಗದವರ ಮೇಲೆ ಬೀರಿದೆ. 

ಲಾಕ್ ಡೌನ್ ನಿಂದ ಉಂಟಾಗುತ್ತಿರುವ ನಷ್ಟದಿಂದ ದಿನನಿತ್ಯದ ವೇತನಕ್ಕಾಗಿ ದುಡಿಯುವವರಿಗೆ ಹೆಚ್ಚಿನ ಹೊರೆಯಾಗದಂತೆ ಎಚ್ಚರ ವಹಿಸಲು ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಕ್ರಮ ಕೈಗೊಳ್ಳಲು ಮುಂದಾಗಿದ್ದಾರೆ. ಇದರ ಭಾಗವಾಗಿ ಹಣಕಾಸು ಸಚಿವರ ನೇತೃತ್ವದಲ್ಲಿ ಕೃಷಿ ಸಚಿವ, ಕಾರ್ಮಿಕ ಸಚಿವರನ್ನೊಳಗೊಂಡ ಉನ್ನತ ಮಟ್ಟದ ಸಮಿತಿಯನ್ನು ರಚನೆ ಮಾಡಿರುವ ಸಿಎಂ ಯೋಗಿ ಆದಿತ್ಯನಾಥ್ ಮೂರು ದಿನಗಳಲ್ಲಿ ವರದಿ ನೀಡುವಂತೆ ಸೂಚಿಸಿದ್ದಾರೆ. 

ಕೊರೋನಾ ವೈರಸ್ ನಿಂದ ಉಂಟಾಗಿರುವ ಪರಿಸ್ಥಿತಿಯನ್ನು ಅವಲೋಕಿಸಿ, ಬಡವರು, ದೈನದಿಂದ ವೇತನಕ್ಕಾಗಿ ದುಡಿಯುವ ವರ್ಗಗಳ ಮೇಲೆ ಪರಿಣಾಮ ಬೀರದಂತೆ, ಆರ್ಥಿಕ ನೆರವು ನೀಡುವುದಕ್ಕೆ ಕೈಗೊಳ್ಳಬೇಕಿರುವ ಕ್ರಮಗಳನ್ನು ಈ ಸಮಿತಿ ಸರ್ಕಾರಕ್ಕೆ ಶಿಫಾರಸು ಮಾಡಲಿದೆ ಎಂದು ಉತ್ತರ ಪ್ರದೇಶ ಸಚಿವ ಶ್ರೀಕಾಂತ್ ಶರ್ಮ ಹೇಳಿದ್ದಾರೆ. 
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT