ಸಂಗ್ರಹ ಚಿತ್ರ 
ವಿದೇಶ

ಹುಟ್ಟೂರಲ್ಲೇ ಮಾಯವಾದ ಕೊರೋನಾ: ವುಹಾನ್ ನಲ್ಲಿ ಶೂನ್ಯಕ್ಕಿಳಿದ ಸೋಂಕಿತರ ಸಂಖ್ಯೆ

ಚೀನಾದ ವುಹಾನ್ ನಲ್ಲಿ ಕಾಣಿಸಿಕೊಂಡು ಸುಮಾರು 3,000ಕ್ಕೂ ಅಧಿಕ ಮಂದಿಯನ್ನು ಬಲಿ ಪಡೆದುಕೊಂಡಿದ್ದ ಕೊರೋನಾ ವೈರಸ್, ಇದೀಗ ತನ್ನ ಹುಟ್ಟೂರಿನಿಂದಲೇ ಮಾಯವಾಗಿದೆ. ವುಹಾನ್ ನಲ್ಲಿ ಸೋಂಕಿತರ ಸಂಖ್ಯೆ ಇದೇ ಮೊದಲ ಬಾರಿಗೆ ಶೂನ್ಯಕ್ಕಿಳಿದಿದೆ. 

ಬೀಜಿಂಗ್: ಚೀನಾದ ವುಹಾನ್ ನಲ್ಲಿ ಕಾಣಿಸಿಕೊಂಡು ಸುಮಾರು 3,000ಕ್ಕೂ ಅಧಿಕ ಮಂದಿಯನ್ನು ಬಲಿ ಪಡೆದುಕೊಂಡಿದ್ದ ಕೊರೋನಾ ವೈರಸ್, ಇದೀಗ ತನ್ನ ಹುಟ್ಟೂರಿನಿಂದಲೇ ಮಾಯವಾಗಿದೆ. ವುಹಾನ್ ನಲ್ಲಿ ಸೋಂಕಿತರ ಸಂಖ್ಯೆ ಇದೇ ಮೊದಲ ಬಾರಿಗೆ ಶೂನ್ಯಕ್ಕಿಳಿದಿದೆ. 

ಈ ಹಿಂದೆ ಚೀನಾದ ವುಹಾನ್ ಪ್ರಾಂತ್ಯವನ್ನು ವೈರಸ್ ಕೇಂದ್ರ ಬಿಂದು ಘೋಷೆ ಮಾಡಲಾಗಿತ್ತು. 3,000ಕ್ಕೂ ಅಧಿಕ ಮಂದಿಯನ್ನು ಬಲಿಪಡೆದುಕೊಂಡ ವೈರಸ್ ನಿಯಂತ್ರಣಕ್ಕ ಇಡೀ ಚೀನಾ ರಾಷ್ಟ್ರವೇ ಟೊಂಕಕಟ್ಟಿ ನಿಂತಿತ್ತು. ಇದರಂತೆ ತನ್ನ ಹೋರಾಟದಲ್ಲಿ ಇದೀಗ ಯಶಸ್ಸು ಕಾಣುತ್ತಿದೆ. ಇದೀಗ ಸೋಂಕಿತರ ಸಂಖ್ಯೆ ಶೂನ್ಯಕ್ಕೆ ಇಳಿದಿದೆ. 

ವ್ಯಾಪಕವಾಗಿ ಹರಡಿ ಸಾವಿರಾರು ಜೀವಗಳನ್ನು ಬಲಿ ಪಡೆಯುತ್ತಿದ್ದ ಕೊರೋನಾ ವೈರಸ್ ನಿಯಂತ್ರಣಕ್ಕೆ ಪಣತೊಟ್ಟ ಚೀನಾ ಕ್ರಮವನ್ನು ಇದೀಗ ಸೋಷಿಯನ್ ನ್ಯೂಕ್ಲಿಯರ್ ವೆಪನ್ ಎಂದೇ ಬಣ್ಣಿಸಲಾಗುತ್ತಿದೆ. ವೈರಸ್ ವ್ಯಾಪಕವಾಗುತ್ತಿದ್ದಂತೆಯೇ ಅಲ್ಲಿನ ಸರ್ಕಾರ ಕುರ್ತು ಕ್ರಮ ಕೈಗೊಂಡಿತ್ತು. ಅದರಲ್ಲೂ ಮುಖ್ಯವಾಗಿ ಇಡೀ ಚೀನಾ ಒಗ್ಗಟ್ಟಿನಿಂದ ಮುಂಜಾಗ್ರತಾ ಕ್ರಮಕ್ಕೆ ಮುಂದಾಗಿದ್ದೇ ವೈರಸ್ ನಿಯಂತ್ರಣಕ್ಕೆ ಬರಲು ಪ್ರಮುಖ ಕಾರಣ ಎಂದು ಹೇಳಲಾಗುತ್ತಿದೆ. 

ಕೊರೋನಾ ವೈರಸ್ ಸಾರ್ಸ್'ನ ಇನ್ನೊಂದು ರೂಪ ಎನ್ನುವುದು ಖಚಿತವಾಗುತ್ತಿದ್ದಂತೆಯೇ ಮತ್ತು ಸೋಂಕಿತರ ಪ್ರಮಾಣ ದಿನಂದಿಂದ ದಿನಕ್ಕೆ ಸಾವಿರಾರು ಸಂಖ್ಯೆಯಲ್ಲಿ ಹೆಚ್ಚುತ್ತಿದ್ದಂತೆಯೇ ಚೀನಾ ಕೊರೋನಾ ಚಿಕಿತ್ಸೆಗಾಗಿಯೇ ಬರೀ 10 ದಿನದಲ್ಲಿ ವುಹಾನ್ ನಲ್ಲಿ 1000 ಹಾಸಿಗೆ ಸಾಮರ್ಥ್ಯದ 25,000 ಚ.ಮೀ ವಿಸ್ತೀರ್ಣದ ಆಸ್ಪತ್ರೆಯನ್ನೇ ನಿರ್ಮಿಸಿತ್ತು. 

ಬರೀ 10 ದಿನಗಳಲ್ಲಿ ಆಸ್ಪತ್ರೆ ನಿರ್ಮಾಣ ಎಂದರೆ ಅದು ಸುಲಭದ ಮಾತಲ್ಲ. 7000ಕ್ಕೂ ಹೆಚ್ಚು ಕಾರ್ಮಿಕರು ದಿನದ ಮೂರು ಪಾಳಿಯಲ್ಲಿ ಕೆಲಸ ಮಾಡಿ ಆಸ್ಪತ್ರೆ ನಿರ್ಮಿಸಿದ್ದರು. ಅದರ ಜೊತಗೆ ಉದ್ಘಾಟನೆಯಾದ ಬಳಿಕವೇ ಇಲ್ಲಿಗೆ 1400ಕ್ಕೂ ಹೆಚ್ಚು ವೈದ್ಯರು, ದಾದಿಯರು ಮತ್ತು ಇತರೆ ಸಿಬ್ಬಂದಿಗಳನ್ನು ನಿಯೋಜಿಸಿತ್ತು. ಜೊತೆಗೆ ಎಲ್ಲಾ ರೀತಿಯ ಅತ್ಯಾಧುನಿಕ ಸೌಲಭ್ಯಗಲನ್ನು ಒದಗಿಸಿತ್ತು. 

ಇನ್ನು ಕೊರೋನಾ ವೈರಸ್ ನಿಯಂತ್ರಣಕ್ಕೆ ಚೀನಾ ಕೈಗೊಂಡ ತುರ್ತು ಕ್ರಮವನ್ನು ಈ ಹಿಂದೆ ವಿಶ್ವ ಆರೋಗ್ಯ ಸಂಸ್ಥೆ ಶ್ಲಾಘಿಸಿತ್ತು. ಆದರೆ, ವೈರಸ್ ಆರಂಭಿಕ ಹಂತದಲ್ಲಿದ್ದಾಗ ಚೀನಾದ ನಿರ್ಲಕ್ಷ್ಯ, ಕೆಟ್ಟ ನಿರ್ವಹಣೆಯೇ ಇಷ್ಟೊಂದು ಸಂಖ್ಯೆಯಲ್ಲಿ ಜನರು ಬಲಿಯಾಗಲು ಕಾರಣ ಎಂದು ಹೇಳಲಾಗುತ್ತಿದೆ. 

ಏಕೆಂದರೆ, ಕಳೆದ ವರ್ಷ ಡಿಸೆಂಬರ್ 8ರಂದೇ ಚೀನಾದ ವುಹಾನ್ ನಲ್ಲಿ ಮೊದಲ ಪ್ರಕರಣ ಪತ್ತೆಯಾಗಿತ್ತು. ಆದರೆ, ಕೊರೋನಾ ನಿಯಂತ್ರಣಕ್ಕೆ ಕ್ರಮ ಕೈಗೊಂಡಿದ್ದು ಮಾತ್ರ ಜನವರಿ 14 ರಿಂದ. ಚೀನಾ ಎಡವಿದ್ದೇ ಇಲ್ಲಿ. ವುಹಾನ್ ನ ನೇತ್ರ ತಜ್ಞ ಡಾ.ಲೀವೆನ್ ಲಿಯಂಗ್ ಎಂಬುವವರು ಇದು ಸಾರ್ಸ್ ರೀತಿಯ ವೈರಸ್ ಎಂದು ಎಚ್ಚರಿಸಿದ್ದರೂ, ವದಂತಿ ಹರಡುವವರ ವಿರುದ್ಧ ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ಚೀನಾ ಸರ್ಕಾರ ಆದೇಶಿಸಿತ್ತು. 

ಜನವರಯಿಲ್ಲಿ ಹೊಸ ವೈರಸ್ ಸಾರ್ಸ್ ರೂಪದ್ದು ಎಂದಿದ್ದ 8 ಜನರನ್ನು ಬಂಧನಕ್ಕೊಳಪಡಿಸಿತ್ತು. ಆದರೆ, ತಜ್ಞರು ಅನಂತರ ಕೊರೋನಾ ಅಥವಾ ಕೋವಿಡ್-19, ಸಾರ್ಸ್ ನ ಇನ್ನೊಂದು ರೂಪ ಎನ್ನುವುದನ್ನು ಸಾಬೀತುಪಡಿಸಿದರು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

ಶಿಬು ಸೊರೇನ್ 'ರಾಜ್ಯದ ಪಿತಾಮಹ' ಎಂದು ಘೋಷಿಸುವಂತೆ ಜೆಎಂಎಂ ಆಗ್ರಹ

SCROLL FOR NEXT