ಕ್ರಿಸ್ಟಲಿನಾ ಜಾರ್ಜಿಯಾ 
ವಿದೇಶ

‘ನಾವು ಆರ್ಥಿಕ ಹಿಂಜರಿತಕ್ಕೆ ಕಾಲಿಟ್ಟಿದ್ದೇವೆ, 2009ಕ್ಕಿಂತಲೂ ಇದು ಕೆಟ್ಟ ಸ್ಥಿತಿಯಾಗಿರಲಿದೆ'

ನಾವು ಆರ್ಥಿಕ ಹಿಂಜರಿತಕ್ಕೆ ಕಾಲಿಟ್ಟಿದ್ದೇವೆ. 2009ರಲ್ಲಿ ಇದ್ದಂತಹ ಸ್ಥಿತಿಗಿಂತಲೂ ಇದು ಕೆಟ್ಟದಾಗಿರಲಿದೆ’ ಎಂದು ಅಂತರರಾಷ್ಟ್ರೀಯ ಹಣಕಾಸು ನಿಧಿಯ (ಐಎಂಎಫ್‌) ಮುಖ್ಯಸ್ಥೆ ಕ್ರಿಸ್ಟಲಿನಾ ಜಾರ್ಜಿಯಾ ಅವರು ಎಚ್ಚರಿಕೆ ನೀಡಿದ್ದಾರೆ.

ವಾಷಿಂಗ್ಟನ್:  ‘ನಾವು ಆರ್ಥಿಕ ಹಿಂಜರಿತಕ್ಕೆ ಕಾಲಿಟ್ಟಿದ್ದೇವೆ. 2009ರಲ್ಲಿ ಇದ್ದಂತಹ ಸ್ಥಿತಿಗಿಂತಲೂ ಇದು ಕೆಟ್ಟದಾಗಿರಲಿದೆ’ ಎಂದು ಅಂತರರಾಷ್ಟ್ರೀಯ ಹಣಕಾಸು ನಿಧಿಯ (ಐಎಂಎಫ್‌) ಮುಖ್ಯಸ್ಥೆ ಕ್ರಿಸ್ಟಲಿನಾ ಜಾರ್ಜಿಯಾ ಅವರು ಎಚ್ಚರಿಕೆ ನೀಡಿದ್ದಾರೆ.

‘ಕೊರೊನಾ ವೈರಸ್‌ ಸೋಂಕು ಜಾಗತಿಕ ಆರ್ಥಿಕತೆಯ ಮೇಲೆ ಪ್ರತಿಕೂಲ ಪರಿಣಾಮ ಬೀರಿದ್ದು, ಪ್ರವರ್ಧಮಾನಕ್ಕೆ ಬರುತ್ತಿರುವ ದೇಶಗಳಿಗೆ ಹೆಚ್ಚಿನ ಪ್ರಮಾಣದಲ್ಲಿ ಹಣಕಾಸಿನ ನೆರವು ಬೇಕಾಗಲಿದೆ’ ಎಂದು ಅಭಿಪ್ರಾಯಪಟ್ಟಿದ್ದಾರೆ.‘ಆರ್ಥಿಕ ಚಟುವಟಿಕೆಗಳು ದಿಢೀರನೆ ಸ್ಥಗಿತಗೊಂಡಿವೆ. ಇದರಿಂದಾಗಿ ಪ್ರವರ್ಧಮಾನಕ್ಕೆ ಬರುತ್ತಿರುವ ದೇಶಗಳಿಗೆ ₹185 ಲಕ್ಷ ಕೋಟಿಗಳಷ್ಟು ಹಣಕಾಸಿನ ನೆರವು ನೀಡಬೇಕಾಗಿದೆ. ಇದು ಕನಿಷ್ಠ ಮಟ್ಟದ ಅಂದಾಜಾಗಿದೆ ಎಂದು ಹೇಳಿದ್ದಾರೆ.

ಪ್ರವರ್ಧಮನಾಕ್ಕೆ ಬರುತ್ತಿರುವ ದೇಶಗಳು ಇತ್ತೀಚಿನ ವಾರಗಳಲ್ಲಿ ₹6.145 ಲಕ್ಷ ಕೋಟಿಗೂ ಅಧಿಕ ನಷ್ಟ ಅನುಭವಿಸಿವೆ. ಈ ನಷ್ಟ ತುಂಬಿಕೊಳ್ಳಲು ದೇಶಿ ವರಮಾನದ ಕೊರತೆಯೂ ಎದುರಾಗಿದೆ. ಈಗಾಗಲೇ ಕೆಲವು ದೇಶಗಳು ಭಾರಿ ಪ್ರಮಾಣದ ಸಾಲದ ಹೊರೆಯಲ್ಲಿ ಸಿಲುಕಿವೆ. ‘ಕಡಿಮೆ ಆದಾಯ ಇರುವ 80ಕ್ಕೂ ಅಧಿಕ ದೇಶಗಳಲ್ಲಿ ಬಹುತೇಕ ದೇಶಗಳು ಐಎಂಎಫ್‌ನಿಂದ ತುರ್ತು ನಿಧಿಗಾಗಿ ಬೇಡಿಕೆ ಸಲ್ಲಿಸಿವೆ’ ಎಂದು ತಿಳಿಸಿದ್ದಾರೆ.

ವಾಷಿಂಗ್ಟನ್‌ ಮೂಲದ ಹಣಕಾಸು ಸಮಿತಿಯೊಂದಿಗೆ ವಿಡಿಯೊ ಕಾನ್ಫರೆನ್ಸ್‌ ಮೂಲಕ ಮಾತುಕತೆ ನಡೆಸಿದ ಅವರು, ಈಗಿರುವ ₹ 3.70 ಲಕ್ಷ ಕೋಟಿ ತುರ್ತು ನಿಧಿ ಮೊತ್ತವನ್ನು ಹೆಚ್ಚಿಸುವಂತೆ ಮನವಿ ಮಾಡಿದ್ದಾರೆ. ಅಮೆರಿಕ ಘೋಷಿಸಿರುವ ಪ್ಯಾಕೆಜ್‌ ಬಗ್ಗೆಯೂ ಅವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ವಿಶ್ವಕಪ್ ವಿಜೇತ ಅಂಧ ಕರ್ನಾಟಕದ ಆಟಗಾರ್ತಿಯರಿಗೆ ತಲಾ 10 ಲಕ್ಷ ನಗದು, ಸರ್ಕಾರಿ ಉದ್ಯೋಗ: ಸಿಎಂ ಸಿದ್ದರಾಮಯ್ಯ ಘೋಷಣೆ

ಸ್ಮೃತಿ ಮಂಧಾನ ಮದುವೆ ಮುಂದೂಡಿಕೆಗೆ ಅಸಲಿ ಕಾರಣ? ಮತ್ತೊಂದು ಹೆಣ್ಣಿನೊಂದಿಗೆ ಮೋಹ, ನಂಬಿಕೆ ದ್ರೋಹ; ಬಯಲಾಯ್ತು ಪಲಾಶ್'ನ ಅಸಲಿ ರಂಗಿನಾಟ!

ಅಯೋಧ್ಯ ಧ್ವಜಾರೋಹಣ: ಸ್ವಿಚ್ ಅಥವಾ ಹಗ್ಗ ಬಳಸದ ಪ್ರಧಾನಿ, ಹೇಗೆ ನೆರವೇರಿಸಿದ್ರು?ಈ ಅದ್ಭುತ Video ನೋಡಿ..

ಬರವಣಿಗೆಯಲ್ಲಿ ಖುಷಿ ಕಂಡ ಪೊಲೀಸ್ ಅಧಿಕಾರಿ: 'ಬಸವಣ್ಣನ ವಚನ' ಗಳನ್ನು ಇಂಗ್ಲೀಷ್ ಗೆ ಅನುವಾದ ಮಾಡ್ತಿರೋ DYSP ಬಸವರಾಜ್ ಯಲಿಗಾರ್!

SCROLL FOR NEXT