ಹಂದ್ವಾರ ದಾಳಿಯ ಹುತಾತ್ಮ ಯೋಧರು 
ವಿದೇಶ

ಹಂದ್ವಾರ ದಾಳಿಗೆ ಹೊಣೆ ಹೊತ್ತ ಹಿಜ್ಬುಲ್ ಮುಜಾಹಿದ್ದೀನ್ ಸಂಘಟನೆ, ಭಾರತದ್ದೇ ಕೈ ಮೇಲಾಯಿತು ಎಂದ ಉಗ್ರರು! 

ಜಮ್ಮು-ಕಾಶ್ಮೀರದ ಹಂದ್ವಾರದಲ್ಲಿ ಭಯೋತ್ಪಾದಕರ ಎನ್ ಕೌಂಟರ್ ನಡೆದು 5 ದಿನಗಳು ಕಳೆದ ಬಳಿಕ ಅಲ್ಲಿನ ಘಟನಾವಳಿಗಳಿಗೆ ಉಗ್ರ ಸಂಘಟನೆ ಹಿಜ್ಬುಲ್ ಮುಜಾಹಿದ್ದೀನ್ ಹೊಣೆ ಹೊತ್ತಿದೆ. 

ನವದೆಹಲಿ: ಜಮ್ಮು-ಕಾಶ್ಮೀರದ ಹಂದ್ವಾರದಲ್ಲಿ ಭಯೋತ್ಪಾದಕರ ಎನ್ ಕೌಂಟರ್ ನಡೆದು 5 ದಿನಗಳು ಕಳೆದ ಬಳಿಕ ಅಲ್ಲಿನ ಘಟನಾವಳಿಗಳಿಗೆ ಉಗ್ರ ಸಂಘಟನೆ ಹಿಜ್ಬುಲ್ ಮುಜಾಹಿದ್ದೀನ್ ಹೊಣೆ ಹೊತ್ತಿದೆ. 

ಪಾಕಿಸ್ತಾನದ ಮೂಲದ ಹಿಜ್ಬುಲ್ ಮುಜಾಹಿದ್ದೀನ್ ಸಂಘಟನೆಯ ಉಗ್ರರ ವಿರುದ್ಧ ಹಂದ್ವಾರದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಐವರು ಭದ್ರತಾ ಸಿಬ್ಬಂದಿಗಳು ಸಾವನ್ನಪ್ಪಿದ್ದರು. ಈ ಘಟನೆಯ ಬಗ್ಗೆ ಸಂಘಟನೆಯ ಮುಖ್ಯಸ್ಥ ಸಯೀದ್ ಸಲಾಹುದ್ದೀನ್ ಮಾತನಾಡಿರುವ ವಿಡಿಯೋವನ್ನು ಬಿಜೆಪಿ ವಕ್ತಾರ ಸಂಬಿತ್ ಪಾತ್ರ ಹಂಚಿಕೊಂಡಿದ್ದು, ಈ ವಿಡಿಯೋದಲ್ಲಿ ಹಂದ್ವಾರ ಘಟನೆಗೆ ಹಿಜ್ಬುಲ್ ಮುಜಾಹಿದ್ದೀನ್ ಉಗ್ರರರೇ ಕಾರಣ ಎಂದು ಹೇಳಿರುವ ಸಯೀದ್ ಸಲಾಹುದ್ದೀನ್, ಉಗ್ರ ವಿರೋಧಿ ಕಾರ್ಯಾಚರಣೆಯಲ್ಲಿ ಭಾರತೀಯ ಸೇನೆ ಮೇಲುಗೈ ಸಾಧಿಸಿದೆ ಎಂದೂ ಹೇಳಿದ್ದಾನೆ. 

ಹಂದ್ವಾರದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಭಾರತೀಯ ಸೇನೆ ಮೇಲುಗೈ ಸಾಧಿಸಿದ್ದು, ಆಘಾತಕಾರಿಯಾಗಿದೆ. ಆದರೆ ಕಾಶ್ಮೀರದಲ್ಲಿ ಬಲಿದಾನ ಬಹಳ ಹಿಂದಿನಿಂದಲೂ ನಡೆದುಕೊಂಡುಬಂದಿದೆ. ಹಂದ್ವಾರದಲ್ಲಿ ಮುಜಾಹಿದ್ದೀನ್ ಗಳು ಶತೃಗಳ(ಭಾರತೀಯ ಸೇನೆ) ಬೆನ್ನು ಮೂಳೆ ಮುರಿದಿದ್ದರು. ಆದರೆ ಭಾರತೀಯ ಸೇನೆಯದ್ದೇ ಮೇಲುಗೈ ಆಗಿದೆ ಎಂದು ಸಯೀದ್ ಸಲಾಹುದ್ದೀನ್ ಹೇಳಿರುವುದು ವಿಡಿಯೋದಲ್ಲಿ ದಾಖಲಾಗಿದೆ.    

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟದ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

Theaterisation: 'ಥಿಯೇಟರ್ ಕಮಾಂಡ್‌' ರಚನೆ: ಪ್ರಯತ್ನದಲ್ಲಿ ಪ್ರಗತಿ ಸಾಧಿಸಲಾಗುತ್ತಿದೆಯೇ? ಆಡ್ಮಿರಲ್ ಡಿಕೆ ತ್ರಿಪಾಠಿ ಹೇಳಿದ್ದು ಹೀಗೆ...

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

'ಧಮ್ ಇದ್ರೆ.. ಸನಾತನಧರ್ಮ, ಬಿಹಾರಿಗಳ ಕುರಿತ ಹೇಳಿಕೆ ಮತ್ತೆ ಹೇಳ್ತೀರಾ?': MK Stalin ಗೆ ಬಿಜೆಪಿ-ಜೆಡಿಯು ಸವಾಲು!

SCROLL FOR NEXT