ಬಾಂಗ್ಲಾದೇಶಿ ಹಿಂದೂಗಳು 
ವಿದೇಶ

ಲಾಕ್ ಡೌನ್ ವೇಳೆ ಬಾಂಗ್ಲಾದಲ್ಲಿ ಹಿಂದೂಗಳ ಮೇಲೆ ದೌರ್ಜನ್ಯ, ಭೂಕಬಳಿಕೆ, ಶ್ರೀಮಂತರ ಕೊಲೆ, ಅತ್ಯಾಚಾರ!

ಮಹಾಮಾರಿ ಕೊರೋನಾ ಲಾಕ್‌ಡೌನ್ ಸಮಯದಲ್ಲಿ ಬಾಂಗ್ಲಾದೇಶದಲ್ಲಿ ಹಿಂದೂಗಳ ಕಿರುಕುಳ ಹೆಚ್ಚಾಗಿದೆ ಎಂದು ವಿಶ್ವ ಹಿಂದೂ ಒಕ್ಕೂಟ ಆರೋಪಿಸಿದೆ.

ಗುವಾಹಟಿ: ಮಹಾಮಾರಿ ಕೊರೋನಾ ಲಾಕ್‌ಡೌನ್ ಸಮಯದಲ್ಲಿ ಬಾಂಗ್ಲಾದೇಶದಲ್ಲಿ ಹಿಂದೂಗಳ ಕಿರುಕುಳ ಹೆಚ್ಚಾಗಿದೆ ಎಂದು ವಿಶ್ವ ಹಿಂದೂ ಒಕ್ಕೂಟ ಆರೋಪಿಸಿದೆ.

ಕಳೆದ ತಿಂಗಳಲ್ಲಿ ಅಂಗಡಿಗಳ ಲೂಟಿ, ಉದ್ಯಮಿ ಕೊಲೆ, ಭೂಕಬಳಿಕೆ, ದೇವಾಲಯಗಳ ನೆಲಸಮ ಮತ್ತು ವಿಗ್ರಹಗಳ ಧ್ವಂಸ, ದೇಶ ತೊರೆಯುವಂತೆ ಹಿಂದೂ ಕುಟುಂಬಗಳಿಗೆ ಒತ್ತಾಯ. ಇನ್ನು ಮಹಿಳೆಯರು, ಹೆಣ್ಣು ಮಕ್ಕಳನ್ನು ಅಪಹರಿಸಿ ಅತ್ಯಾಚರಿಸುತ್ತಿದ್ದಾರೆ ಎಂದು ಫೆಡರೇಶನ್ ಗಂಭೀರ ಆರೋಪ ಮಾಡಿದೆ. 

ಏಪ್ರಿಲ್ ನಲ್ಲಿ ಹಿಂದೂಗಳ 12 ಅಂಗಡಿಗಳನ್ನು ಕೊಳ್ಳೆ ಹೊಡೆದಿದ್ದಾರೆ. ಇಬ್ಬರು ಉದ್ಯಮಿಗಳ ಬರ್ಬರ ಹತ್ಯೆ, 307 ಏಕರೆಯಷ್ಟು ಹಿಂದೂಗಳ ಭೂಮಿಯನ್ನು ಸ್ಥಳೀಯ ರೌಡಿಗಳಿಂದ ಕಬ್ಜ. ಎರಡು ದೇವಾಲಯಗಳ ನೆಲಸಮ, ವಿಗ್ರಹಗಳ ಧ್ವಂಸ, 21 ಹಿಂದೂ ಕುಟಂಬಗಳನ್ನು ಬಲವಂತವಾಗಿ ದೇಶದಿಂದ ಹೊರದಬ್ಬಲಾಗಿದೆ ಮತ್ತು 14 ಕುಟುಂಬಸ್ಥರು ದೇಶವನ್ನು ತೊರೆದಿದ್ದಾರೆ ಎಂದು ಫೆಡರೇಶನ್ ಆರೋಪಿಸಿದೆ. 

ಏಪ್ರಿಲ್ ನಲ್ಲಿ ನಾಲ್ಕು ಹಿಂದೂ ಹುಡುಗಿಯರನ್ನು ಅಪಹರಿಸಲಾಗಿದ್ದು ಇತರ ಆರು ಹಿಂದೂ ಹುಡುಗಿಯರು ಮತ್ತು ಮಹಿಳೆಯರ ಮೇಲೆ ಅತ್ಯಾಚಾರ ಮಾಡಲಾಗಿದೆ. ಹತ್ತು ಮಂದಿಯನ್ನು ಅತ್ಯಾಚಾರಕ್ಕೆ ಯತ್ನಿಸಲಾಗಿದ್ದು ಮೂವರು ಹಿಂದೂ ಹುಡುಗಿಯರನ್ನು ಇಸ್ಲಾಂಗೆ ಮತಾಂತರಗೊಳಿಸಲಾಗಿದೆ ಎಂದು ಹೇಳಿದೆ. 

ಬಾಂಗ್ಲಾದೇಶದಲ್ಲಿ ದಿನದಿಂದ ದಿನಕ್ಕೆ ಮಾನವ ಹಕ್ಕುಗಳ ಪರಿಸ್ಥಿತಿ ಹದಗೆಡುತ್ತಿದೆ ಆದರೆ ದುರದೃಷ್ಟವಶಾತ್ ಇನ್ನೂ ಯಾರನ್ನೂ ಬಂಧಿಸಲಾಗಿಲ್ಲ ಎಂದು ಫೆಡರೇಶನ್ ವಿಷಾದ ವ್ಯಕ್ತಪಡಿಸಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇರಾನ್‌ ಸರ್ಕಾರ ವಿರುದ್ಧ ಪ್ರತಿಭಟನೆ: ಹಿಂಸಾಚಾರದಲ್ಲಿ ಮೃತಪಟ್ಟವರ ಸಂಖ್ಯೆ 116 ಕ್ಕೆ ಏರಿಕೆ

ಕೇಂದ್ರ ಬಜೆಟ್ 2026-27: ರಾಜ್ಯದ ಹಣಕಾಸು ಸಮತೋಲನ ಪುನಃಸ್ಥಾಪಿಸಲು ಹೆಚ್ಚಿನ ಅನುದಾನ ಒದಗಿಸಿ; ಕೇಂದ್ರಕ್ಕೆ ರಾಜ್ಯ ಸರ್ಕಾರ ಆಗ್ರಹ

Grok ಅಶ್ಲೀಲ ಕಂಟೆಂಟ್ ವಿವಾದ: ಕೇಂದ್ರ ಸರ್ಕಾರಕ್ಕೆ ಕೊನೆಗೂ ಮಣಿದ X, 600 ಖಾತೆಗಳ ಡಿಲೀಟ್!

ನೋಂದಣಿ ಇಲ್ಲದೆ 'stock tips': ‘Finfluencers’ಗಳ ಸುಮಾರು 1 ಲಕ್ಷ ವಿಡಿಯೋ ಡಿಲೀಟ್​ ಮಾಡಿದ SEBI

ನ್ಯೂಜಿಲೆಂಡ್ ವಿರುದ್ಧದ ಏಕದಿನ ಸರಣಿಯಿಂದ ರಿಷಭ್ ಪಂತ್ ಔಟ್; ಭಾರತ ತಂಡ ಸೇರಿದ 24 ವರ್ಷದ ಆಟಗಾರ!

SCROLL FOR NEXT