ಬಾಂಗ್ಲಾದೇಶಿ ಹಿಂದೂಗಳು 
ವಿದೇಶ

ಲಾಕ್ ಡೌನ್ ವೇಳೆ ಬಾಂಗ್ಲಾದಲ್ಲಿ ಹಿಂದೂಗಳ ಮೇಲೆ ದೌರ್ಜನ್ಯ, ಭೂಕಬಳಿಕೆ, ಶ್ರೀಮಂತರ ಕೊಲೆ, ಅತ್ಯಾಚಾರ!

ಮಹಾಮಾರಿ ಕೊರೋನಾ ಲಾಕ್‌ಡೌನ್ ಸಮಯದಲ್ಲಿ ಬಾಂಗ್ಲಾದೇಶದಲ್ಲಿ ಹಿಂದೂಗಳ ಕಿರುಕುಳ ಹೆಚ್ಚಾಗಿದೆ ಎಂದು ವಿಶ್ವ ಹಿಂದೂ ಒಕ್ಕೂಟ ಆರೋಪಿಸಿದೆ.

ಗುವಾಹಟಿ: ಮಹಾಮಾರಿ ಕೊರೋನಾ ಲಾಕ್‌ಡೌನ್ ಸಮಯದಲ್ಲಿ ಬಾಂಗ್ಲಾದೇಶದಲ್ಲಿ ಹಿಂದೂಗಳ ಕಿರುಕುಳ ಹೆಚ್ಚಾಗಿದೆ ಎಂದು ವಿಶ್ವ ಹಿಂದೂ ಒಕ್ಕೂಟ ಆರೋಪಿಸಿದೆ.

ಕಳೆದ ತಿಂಗಳಲ್ಲಿ ಅಂಗಡಿಗಳ ಲೂಟಿ, ಉದ್ಯಮಿ ಕೊಲೆ, ಭೂಕಬಳಿಕೆ, ದೇವಾಲಯಗಳ ನೆಲಸಮ ಮತ್ತು ವಿಗ್ರಹಗಳ ಧ್ವಂಸ, ದೇಶ ತೊರೆಯುವಂತೆ ಹಿಂದೂ ಕುಟುಂಬಗಳಿಗೆ ಒತ್ತಾಯ. ಇನ್ನು ಮಹಿಳೆಯರು, ಹೆಣ್ಣು ಮಕ್ಕಳನ್ನು ಅಪಹರಿಸಿ ಅತ್ಯಾಚರಿಸುತ್ತಿದ್ದಾರೆ ಎಂದು ಫೆಡರೇಶನ್ ಗಂಭೀರ ಆರೋಪ ಮಾಡಿದೆ. 

ಏಪ್ರಿಲ್ ನಲ್ಲಿ ಹಿಂದೂಗಳ 12 ಅಂಗಡಿಗಳನ್ನು ಕೊಳ್ಳೆ ಹೊಡೆದಿದ್ದಾರೆ. ಇಬ್ಬರು ಉದ್ಯಮಿಗಳ ಬರ್ಬರ ಹತ್ಯೆ, 307 ಏಕರೆಯಷ್ಟು ಹಿಂದೂಗಳ ಭೂಮಿಯನ್ನು ಸ್ಥಳೀಯ ರೌಡಿಗಳಿಂದ ಕಬ್ಜ. ಎರಡು ದೇವಾಲಯಗಳ ನೆಲಸಮ, ವಿಗ್ರಹಗಳ ಧ್ವಂಸ, 21 ಹಿಂದೂ ಕುಟಂಬಗಳನ್ನು ಬಲವಂತವಾಗಿ ದೇಶದಿಂದ ಹೊರದಬ್ಬಲಾಗಿದೆ ಮತ್ತು 14 ಕುಟುಂಬಸ್ಥರು ದೇಶವನ್ನು ತೊರೆದಿದ್ದಾರೆ ಎಂದು ಫೆಡರೇಶನ್ ಆರೋಪಿಸಿದೆ. 

ಏಪ್ರಿಲ್ ನಲ್ಲಿ ನಾಲ್ಕು ಹಿಂದೂ ಹುಡುಗಿಯರನ್ನು ಅಪಹರಿಸಲಾಗಿದ್ದು ಇತರ ಆರು ಹಿಂದೂ ಹುಡುಗಿಯರು ಮತ್ತು ಮಹಿಳೆಯರ ಮೇಲೆ ಅತ್ಯಾಚಾರ ಮಾಡಲಾಗಿದೆ. ಹತ್ತು ಮಂದಿಯನ್ನು ಅತ್ಯಾಚಾರಕ್ಕೆ ಯತ್ನಿಸಲಾಗಿದ್ದು ಮೂವರು ಹಿಂದೂ ಹುಡುಗಿಯರನ್ನು ಇಸ್ಲಾಂಗೆ ಮತಾಂತರಗೊಳಿಸಲಾಗಿದೆ ಎಂದು ಹೇಳಿದೆ. 

ಬಾಂಗ್ಲಾದೇಶದಲ್ಲಿ ದಿನದಿಂದ ದಿನಕ್ಕೆ ಮಾನವ ಹಕ್ಕುಗಳ ಪರಿಸ್ಥಿತಿ ಹದಗೆಡುತ್ತಿದೆ ಆದರೆ ದುರದೃಷ್ಟವಶಾತ್ ಇನ್ನೂ ಯಾರನ್ನೂ ಬಂಧಿಸಲಾಗಿಲ್ಲ ಎಂದು ಫೆಡರೇಶನ್ ವಿಷಾದ ವ್ಯಕ್ತಪಡಿಸಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮುಖ್ಯಮಂತ್ರಿ ಬದಲಾವಣೆ: ದೆಹಲಿಯಲ್ಲಿ ಕಾಂಗ್ರೆಸ್‌ ಮ್ಯಾರಥಾನ್‌ ಮೀಟಿಂಗ್ ಬಳಿಕ ಕೆ.ಸಿ ವೇಣುಗೋಪಾಲ್ ಹೇಳಿದ್ದೇನು? Video

IPL 2026 Qualifier 1: ರಜತ್ ಪಟಿದಾರ್ ಸ್ಫೋಟಕ ಬ್ಯಾಟಿಂಗ್, GTಗೆ ಗೆಲ್ಲಲು 255 ರನ್ ಬೃಹತ್ ಗುರಿ ನೀಡಿದ RCB

ಬೆಂಗಳೂರು: ದೃಷ್ಟಿಹೀನ ಸ್ನೇಹಿತೆ ಬಳಿ ಇದ್ದ 49.5 ಲಕ್ಷ ರೂ. ನಗದು, ಚಿನ್ನ ಕದ್ದ ಖದೀಮ ದಂಪತಿ ಬಂಧನ!

IPL 2026 Qualifier 1: ಐಪಿಎಲ್ ಇತಿಹಾಸದ ಅತ್ಯಪರೂಪದ ದಾಖಲೆ ಬರೆದ Virat Kohli; ಡಬಲ್ ಆಘಾತ ಕೊಟ್ಟ Holder

ಕರ್ನಾಟಕ ವಿಧಾನ ಪರಿಷತ್‌ನ ಏಳು ಸ್ಥಾನಗಳಿಗೆ ಚುನಾವಣೆ ಘೋಷಣೆ; ಜೂನ್ 18 ರಂದು ಮತದಾನ

SCROLL FOR NEXT