ಭುವನೇಶ್ವರದಲ್ಲಿ ಅಗ್ನಿ ಶಾಮಕ ಸಿಬ್ಬಂದಿ ಸೋಂಕು ನಿವಾರಕಗಳನ್ನು ಸಿಂಪಡಿಸುತ್ತಿರುವುದು 
ವಿದೇಶ

ಕೊರೋನಾ ತಡೆಗೆ ಸೋಂಕುನಿವಾರಕಗಳನ್ನು ಸಿಂಪಡಿಸುವುದು ಹಾನಿಕಾರಕ:ವಿಶ್ವ ಆರೋಗ್ಯ ಸಂಸ್ಥೆ

ಕೊರೋನಾ ಸೋಂಕು ನಿವಾರಣೆಗೆ ರಸ್ತೆ ಮೇಲೆ ಸೋಂಕು ನಿವಾರಕಗಳನ್ನು ಸಿಂಪಡಿಸುವುದು ಕೊರೋನಾ ತಡೆಗಟ್ಟುವ ಬದಲು ಆರೋಗ್ಯಕ್ಕೆ ಅಪಾಯವನ್ನು ತಂದೊಡ್ಡುತ್ತದೆ ಎಂದು ವಿಶ್ವ ಆರೋಗ್ಯ ಸಂಸ್ಥೆ ಎಚ್ಚರಿಕೆ ನೀಡಿದೆ.

ಜಿನಿವಾ: ಕೊರೋನಾ ಸೋಂಕು ನಿವಾರಣೆಗೆ ರಸ್ತೆ ಮೇಲೆ ಸೋಂಕು ನಿವಾರಕಗಳನ್ನು ಸಿಂಪಡಿಸುವುದು ಕೊರೋನಾ ತಡೆಗಟ್ಟುವ ಬದಲು ಆರೋಗ್ಯಕ್ಕೆ ಅಪಾಯವನ್ನು ತಂದೊಡ್ಡುತ್ತದೆ ಎಂದು ವಿಶ್ವ ಆರೋಗ್ಯ ಸಂಸ್ಥೆ ಎಚ್ಚರಿಕೆ ನೀಡಿದೆ.

ರಸ್ತೆಗಳಲ್ಲಿ, ಮನೆಗಳ ಸುತ್ತಮುತ್ತ, ಕಂಪೌಡ್ ಗಳ ಹೊರಗೆ ಮತ್ತು ಒಳಗೆ ತೆರೆದ ಸ್ಥಳಗಳಲ್ಲಿ ಸೋಂಕು ನಿವಾರಕಗಳಿಂದ ಸ್ವಚ್ಛಗೊಳಿಸುವುದರಿಂದ ಅದು ಸೋಂಕಿನ ನಿವಾರಣೆಗೆ ಪರಿಣಾಮ ಬೀರುವುದಿಲ್ಲ ಎಂದು ಹೇಳಿದೆ. ಬೀದಿಗಳು ಅಥವಾ ಮಾರುಕಟ್ಟೆ ಸ್ಥಳಗಳಂತಹ ಹೊರಾಂಗಣ ಸ್ಥಳಗಳಲ್ಲಿ ಸೋಂಕು ನಿವಾರಕಗಳನ್ನು ಸಿಂಪಡಿಸುವುದು, ಧೂಮಪಾನ ಮಾಡುವುದು ಕೋವಿಡ್-19 ವೈರಸ್ ಅಥವಾ ಇತರ ರೋಗಕಾರಕಗಳನ್ನು ಕೊಲ್ಲಲು ಸಹಾಯವಾಗುವುದಿಲ್ಲ. ಸೋಂಕುನಿವಾರಕವನ್ನು ಕೊಳಕು ಮತ್ತು ಅವಶೇಷಗಳಿಂದ ನಿಷ್ಕ್ರಿಯಗೊಳಿಸಲಾಗುತ್ತದೆ ಎಂದು ಸಂಸ್ಥೆ ಹೇಳಿದೆ.

ರಸ್ತೆಗಳು, ಪಾದಚಾರಿ ಸ್ಥಳಗಳು ಸೋಂಕು ಸಂಗ್ರಹಣೆಯ ಸ್ಥಳಗಳು ಎಂದು ಪರಿಗಣಿಸುವುದಿಲ್ಲ, ಹೀಗಿರುವಾಗ ಅಂತಹ ಕಡೆಗಳಲ್ಲಿ ಸೋಂಕು ನಿವಾರಕಗಳನ್ನು ಹೊರಗೆ ಸಿಂಪಡಿಸುವುದರಿಂದ ಗಾಳಿಯನ್ನು ಸೇವಿಸುವ ಮನುಷ್ಯರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರಬಹುದು ಎಂದು ಸಂಸ್ಥೆ ಹೇಳಿದೆ.

ಇನ್ನು ವ್ಯಕ್ತಿಗಳ ಮೇಲೆ ಕೂಡ ಸೋಂಕು ನಿವಾರಕಗಳಿಂದ ಸಿಂಪಡಿಸುವುದನ್ನು ಯಾವುದೇ ಸಂದರ್ಭದಲ್ಲಿಯೂ ಶಿಫಾರಸು ಮಾಡುವುದಿಲ್ಲ ಎಂದು ದಾಖಲೆಗಳು ಹೇಳುತ್ತವೆ.ಇದು ದೈಹಿಕವಾಗಿ ಮತ್ತು ಮಾನಸಿಕವಾಗಿ ಹಾನಿಕಾರಕವಾಗಬಹುದು ಮತ್ತು ಸೋಂಕಿತ ವ್ಯಕ್ತಿಯಿಂದ ಸೋಂಕು ಹರಡುವುದನ್ನು ಕೂಡ ತಪ್ಪಿಸಲು ಸಾಧ್ಯವಿಲ್ಲ ಎಂದು ಹೇಳಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನಾವು ಏಕೆ ತಡೆಯಲಿ... ತಾಂತ್ರಿಕ ಸಮಸ್ಯೆ ಹೊರತು ಉದ್ದೇಶಪೂರ್ವಕವಲ್ಲ: ಮಹಿಳಾ ಪತ್ರಕರ್ತರನ್ನು ದೂರವಿಟ್ಟ ಬಗ್ಗೆ ಮುತ್ತಕಿ ಸ್ಪಷ್ಟನೆ

Afghan-Pak War: 'ಅಲ್ಲಾ ಕಾಪಾಡು' ಅಫ್ಘಾನ್ ಪ್ರತೀಕಾರದ ದಾಳಿ; ಆಗಸದೆತ್ತರಕ್ಕೆ ಚಿಮ್ಮಿದ ಪಾಕ್ ಸೈನಿಕರ ಶವಗಳು, ಗಡಿಯಿಂದ ಕಾಲ್ಕಿತ್ತ ಸೇನೆ, Video

ಯಾವುದೇ ಸಿದ್ಧಾಂತ ಅಥವಾ ಅಜೆಂಡಾವನ್ನು ಪ್ರಚಾರ ಮಾಡುತ್ತಿಲ್ಲ; 'ಕಾಂತಾರ: ಚಾಪ್ಟರ್ 1' ಕುರಿತು ರಿಷಬ್ ಶೆಟ್ಟಿ

'ಆಕೆ ಮಧ್ಯರಾತ್ರಿ 12.30ಕ್ಕೆ ಹೇಗೆ ಹೊರಬಂದಳು?': ಗ್ಯಾಂಗ್ ರೇಪ್ ಕುರಿತು ಮಮತಾ ಬ್ಯಾನರ್ಜಿ ಹೇಳಿಕೆ

ಹಾಸನಾಂಬ ದರ್ಶನಕ್ಕೆ ಭಕ್ತರ ಸಂಖ್ಯೆ ಹೆಚ್ಚಳ: ಎರಡೇ ದಿನಗಳಲ್ಲಿ ರೂ. 2.24 ಕೋಟಿ ಆದಾಯ, ಆರು ಸಿಬ್ಬಂದಿ ಅಮಾನತು!

SCROLL FOR NEXT