ನೇಪಾಳ ಭೂಪಟ 
ವಿದೇಶ

ನೇಪಾಳ ದುಸ್ಸಾಹಸ: ಭಾರತದ ಭೂ ಭಾಗ ತನ್ನದೆಂದು ತೋರಿಸುವ ಹೊಸ ಭೂಪಟಕ್ಕೆ ಸಂಪುಟ ಅಂಗೀಕಾರ!

ಭಾರತ- ನೇಪಾಳ ನಡುವೆ ನಡುವೆ ಗಡಿ ವಿವಾದ ತಲೆ ಎತ್ತಿರುವ ಪ್ರಸ್ತುತ ಸಂದರ್ಭದಲ್ಲಿ, ಭಾರತದ ಭೂ ಪ್ರದೇಶವಾಗಿರುವ ಲಿಪುಲೇಖ್, ಕಾಲಾಪಾನಿ, ಪಿಂಪಿಯಾಧುರ ಪ್ರದೇಶಗಳು ತಮಗೆ ಸೇರಿದ್ದು ಎಂದು ತೋರಿಸುವ ಹೊಸ ರಾಜಕೀಯ ಭೂಪಟ(ಪೊಲಿಟಿಕಲ್ ಮ್ಯಾಪ್)ಕ್ಕೆ ನೇಪಾಳ ಸಚಿವ ಸಂಪುಟ ಅನುಮೋದನೆ ನೀಡಿರುವುದು ತೀವ್ರ ವಿವಾದ ಸೃಷ್ಟಿಸಿದೆ. 

ಕಂಠ್ಮಂಡು: ಭಾರತ- ನೇಪಾಳ ನಡುವೆ ನಡುವೆ ಗಡಿ ವಿವಾದ ತಲೆ ಎತ್ತಿರುವ ಪ್ರಸ್ತುತ ಸಂದರ್ಭದಲ್ಲಿ, ಭಾರತದ ಭೂ ಪ್ರದೇಶವಾಗಿರುವ ಲಿಪುಲೇಖ್, ಕಾಲಾಪಾನಿ, ಪಿಂಪಿಯಾಧುರ ಪ್ರದೇಶಗಳು ತಮಗೆ ಸೇರಿದ್ದು ಎಂದು ತೋರಿಸುವ ಹೊಸ ರಾಜಕೀಯ ಭೂಪಟ(ಪೊಲಿಟಿಕಲ್ ಮ್ಯಾಪ್)ಕ್ಕೆ ನೇಪಾಳ ಸಚಿವ ಸಂಪುಟ ಅನುಮೋದನೆ ನೀಡಿರುವುದು ತೀವ್ರ ವಿವಾದ ಸೃಷ್ಟಿಸಿದೆ. 

ಉಭಯ ದೇಶಗಳ ನಡುವಣ ಗಡಿ ವಿವಾದವನ್ನು ರಾಜತಾಂತ್ರಿಕವಾಗಿ ಬಗೆಹರಿಸಿಕೊಳ್ಳುಲಾಗುವುದು ಎಂದು ನೇಪಾಳ ವಿದೇಶಾಂಗ ಸಚಿವ ಪ್ರದೀಪ್ ಕುಮಾರ್ ಗ್ಯಾವಲಿ ಹೇಳಿಕೆ ನೀಡಿದ ವಾರದೊಳಗೆ ನೇಪಾಳ ಈ ದುಸ್ಸಾಹಸ ನಡೆಸಿದೆ.

ಅಷ್ಟು ಮಾತ್ರವಲ್ಲ, ಕಾಲಾಪಾನಿ, ಲಿಂಪಿಯಾಧುರ, ಲಿಪುಲೇಖ್ ಗಳನ್ನು ನೇಪಾಳ ಭೂಭಾಗಳಾಗಿದ್ದು ಅವುಗಳನ್ನು ವಾಪಸ್ಸು ನೀಡಬೇಕೆಂದು ಒತ್ತಾಯಿಸಿ ಆಡಳಿತಾರೂಢ ನೇಪಾಳ ಕಮ್ಯುನಿಸ್ಟ್ ಪಕ್ಷದ ಸಂಸದರೊಬ್ಬರು ಸಂಸತ್ತಿನಲ್ಲಿ ನಿರ್ಣಯವನ್ನು ಮಂಡಿಸಿದ್ದರು.

ಭಾರತ - ನೇಪಾಳ ನಡುವೆ ವಿವಾದಾಸ್ಪದ ಗಡಿ ಪ್ರದೇಶವಾಗಿರುವ ಕಾಲಾಪಾನಿ ಸಮೀಪದ ಪಶ್ಚಿಮ ಸ್ಥಾನ ಲಿಫುಲೇಖ್ ಪಾಸ್, ಭಾರತ, ನೇಪಾಳ ಎರಡೂ ದೇಶಗಳು ಕಾಲಪಾನಿ ತಮ್ಮ ದೇಶದ ಅವಿಭಾಜ್ಯ ಅಂಗ ಎಂದು ಹೇಳುತ್ತಿವೆ. 

ಉತ್ತರಾಖಂಡದಲ್ಲಿ ಪಿತೋರ್ ಗಢ್ ಜಿಲ್ಲೆಗೆ ಈ ಭಾಗ ಸೇರಿದೆ ಎಂದು ಭಾರತ ಹೇಳುತ್ತಿದೆ, ಅದು ತಮ್ಮ ದಾರ್ಚುಲಾ ಜಿಲ್ಲೆಯ ಭಾಗವೆಂದು ನೇಪಾಳ ವಾದಿಸುತ್ತಿದೆ.

ನೇಪಾಳ ಸಂಪುಟ ಅನುಮೋದಿಸಿದ ಹೊಸ ಭೂಪಟ ಸದ್ಯದಲ್ಲೇ ಭೂ ನಿರ್ವಹಣೆ ಸಚಿವಾಲಯ ಮೂಲಕ ಅಧಿಕೃತವಾಗಿ ಬಿಡುಗಡೆ ಗೊಳಿಸಲಾಗುವುದು ಎಂದು ಪ್ರದೀಪ್ ಕುಮಾರ್ ಗ್ಯಾವಲಿ ತಿಳಿಸಿದ್ದಾರೆ. 

ಏಳು ರಾಜ್ಯಗಳು, ೭೭ ಜಿಲ್ಲೆಗಳು, ಲಿಂಪಿಯಾಧುರ, ಲಿಪುಲೇಖ್, ಕಾಲಾಪಾನಿ ಸೇರಿ ೭೫೩ ಸ್ಥೂಲ ಆಡಳಿತ ವಿಭಾಗಗಳನ್ನು ಒಳಗೊಂಡ ನಕ್ಷೆಯನ್ನು ಪ್ರಕಟಿಸಲು ನೇಪಾಳ ಸರ್ಕಾರದ ಮಂತ್ರಿ ಮಂಡಳ ನಿರ್ಣಯಿಸಿದೆ ಎಂದು ಪ್ರದೀಪ್ ಕುಮಾರ್ ಟ್ವೀಟ್ ಮಾಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮುಂಬೈ: ಖ್ಯಾತ ಹಿರಿಯ ಗಾಯಕಿ ಆಶಾ ಭೋಸ್ಲೆ ನಿಧನ, ಗಣ್ಯರ ಕಂಬನಿ

US-Iran Peace Talks: ಇಸ್ಲಾಮಾಬಾದ್‌ನಲ್ಲಿ 21 ಗಂಟೆ ಮಾತುಕತೆಯಾದ್ರು, ಯುಎಸ್- ಇರಾನ್ ಶಾಂತಿ ಒಪ್ಪಂದ ವಿಫಲ! ಕಾರಣಗಳೇನು?

'ಇರಾನ್ ನಮಗೆ ಬೆದರಿಕೆಯೊಡ್ಡಿತ್ತು, ಆದರೆ ಈಗ ಬದುಕುಳಿಯಲು ಹೋರಾಡುತ್ತಿದೆ': ಶಾಂತಿ ಮಾತುಕತೆ ವಿಫಲದ ಬಳಿಕ ಇಸ್ರೇಲ್!

"Bad News": ಅಮೆರಿಕದ ಷರತ್ತುಗಳನ್ನು ಇರಾನ್ ಒಪ್ಪುತ್ತಿಲ್ಲ- ಜೆಡಿ ವ್ಯಾನ್ಸ್!

ಪಾಕಿಸ್ತಾನ ಮಧ್ಯಸ್ಥಿಕೆಯಲ್ಲಿ ನೇರ ಮಾತುಕತೆ; ಅಮೆರಿಕದ ಬೇಡಿಕೆ ಅತಿಯಾಗಿದೆ ಎಂದು ಇರಾನ್ ಮಾಧ್ಯಮಗಳ ಆರೋಪ

SCROLL FOR NEXT