ವಿಶ್ವ ಬ್ಯಾಂಕ್ 
ವಿದೇಶ

ವಿಶ್ವದ 6 ಕೋಟಿ ಜನರನ್ನು ಕಡು ಬಡತನಕ್ಕೆ ದೂಡಲಿದೆ ಕೊರೋನಾ ವೈರಸ್ ಸಾಂಕ್ರಾಮಿಕ!

ವಿಶ್ವದ 213ಕ್ಕೂ ಹೆಚ್ಚು ರಾಷ್ಟ್ರಗಳಲ್ಲಿ ಮಾರಣ ಹೋಮ ನಡೆಸುತ್ತಿರುವ ಕೊರೋನಾ ವೈರಸ್ ಸಾಂಕ್ರಾಮಿಕ ಪಿಡುಗಿನಿಂದಾಗಿ ಜಗತ್ತಿನ ಸುಮಾರು 6 ಕೋಟಿಗೂ ಅಧಿಕ ಮಂದಿ ಕಡು ಬಡತನಕ್ಕೆ ಜಾರಲಿದ್ದಾರೆ ಎಂದು ವಿಶ್ವ ಬ್ಯಾಂಕ್ ಆತಂಕ ವ್ಯಕ್ತಪಡಿಸಿದೆ.

ವಾಷಿಂಗ್ಟನ್: ವಿಶ್ವದ 213ಕ್ಕೂ ಹೆಚ್ಚು ರಾಷ್ಟ್ರಗಳಲ್ಲಿ ಮಾರಣ ಹೋಮ ನಡೆಸುತ್ತಿರುವ ಕೊರೋನಾ ವೈರಸ್ ಸಾಂಕ್ರಾಮಿಕ ಪಿಡುಗಿನಿಂದಾಗಿ ಜಗತ್ತಿನ ಸುಮಾರು 6 ಕೋಟಿಗೂ ಅಧಿಕ ಮಂದಿ ಕಡು ಬಡತನಕ್ಕೆ ಜಾರಲಿದ್ದಾರೆ ಎಂದು ವಿಶ್ವ ಬ್ಯಾಂಕ್ ಆತಂಕ ವ್ಯಕ್ತಪಡಿಸಿದೆ.

ಈ ಬಗ್ಗೆ ಮಾತನಾಡಿರುವ ವಿಶ್ವ ಬ್ಯಾಂಕ್ ಅಧ್ಯಕ್ಷ ಡೇವಿಡ್ ಮಲ್ಪಾಸ್ ಅವರು, 'ಕೋವಿಡ್-19 ಪಿಡುಗು ವಿಶ್ವದ ವಿವಿಧ ದೇಶಗಳಲ್ಲಿ 6 ಕೋಟಿ ಮಂದಿಯನ್ನು 'ಅತಿ ಬಡತನ'ಕ್ಕೆ ದೂಡಲಿದೆ. ಕಳೆದ ಮೂರು ವರ್ಷಗಳ ದುಡಿಮೆಯನ್ನು ಈ ಪಿಡುಗು ಕಿತ್ತುಕೊಂಡಿದೆ ಎಂದು ಹೇಳಿದ್ದಾರೆ.

ಅಂತೆಯೇ ಕೊರೋನಾ ಸಾಂಕ್ರಾಮಿಕ ಪಿಡುಗು ನಿರ್ವಹಣೆ ಕುರಿತಂತೆ ವಿಶ್ವ ಬ್ಯಾಂಕ್ ಕೈಗೊಂಡಿರುವ ಕ್ರಮಗಳ ಕುರಿತು ವಿವರಿಸಿದ ಅವರು, 'ವಿಶ್ವದ ಆರ್ಥಿಕತೆ ಈ ವರ್ಷ ಶೇ 5ರಷ್ಟು ಕಡಿಮೆಯಾಗಬಹುದು. ಬಡ ದೇಶಗಳ ಮೇಲೆ ಈ ಪರಿಣಾಮ ಕೆಟ್ಟದಾಗಿರಲಿದೆ. ಕಳೆದ ಮೂರು  ವರ್ಷಗಳಲ್ಲಿ ಬಡತನ ನಿರ್ಮೂಲನ ಕಾರ್ಯಕ್ರಮಗಳ ಮೂಲಕ ಸಾಧಿಸಲಾದ ಪ್ರಗತಿಯನ್ನು ಕೊರೊನಾ ಕೊಚ್ಚಿ ಹಾಕಲಿದೆ. ಅತ್ಯಂತ ಕೆಟ್ಟ ಆರ್ಥಿಕ ಹಿಂಜರಿತ ನಮ್ಮನ್ನು ಕಾಡಲಿದೆ. ವಿಶ್ವದ ವಿವಿಧೆಡೆ ಸುಮಾರು 50 ಲಕ್ಷ ಮಂದಿಗೆ ಕೊರೊನಾ ವೈರಸ್ ಸೋಂಕು ತಗುಲಿದೆ. ಈವರೆಗೆ  ಸುಮಾರು 3 ಲಕ್ಷ ಮಂದಿ ಮೃತಪಟ್ಟಿದ್ದಾರೆ. ಕೊರೊನಾ ಸೋಂಕು ಚೀನಾನದಲ್ಲಿ 2019ರ ಕೊನೆಯ ದಿನಗಳಲ್ಲಿ ಕಾಣಿಸಿಕೊಂಡಿತ್ತು ಎಂದು ಹೇಳಿದರು.

ಅಂತೆಯೇ ವಿಶ್ವದ 100 ದೇಶಗಳಲ್ಲಿ ವಿಶ್ವಬ್ಯಾಂಕ್ ವಿವಿಧ ಯೋಜನೆಗಳಿಗೆ ಹಣಕಾಸಿನ ನೆರವು ಒದಗಿಸುತ್ತಿದೆ. ಮುಂದಿನ 15 ತಿಂಗಳಿನಲ್ಲಿ 160 ಶತಕೋಟಿ ಡಾಲರ್ ಮೊತ್ತವನ್ನು ವಿವಿಧ ದೇಶಗಳಲ್ಲಿ ವಿನಿಯೋಗಿಸಲಿದೆ. ಬಡ ದೇಶಗಳಲ್ಲಿ ಆರೋಗ್ಯ ವ್ಯವಸ್ಥೆ ಸುಧಾರಿಸಲು, ಆರ್ಥಿಕ  ಮತ್ತು ಸಾಮಾಜಿಕ ಭದ್ರತಾ ಯೋಜನೆಗಳಿಗಾಗಿ ವಿಶ್ವಬ್ಯಾಂಕ್ ಈವರೆಗೆ 5.5 ಶತಕೋಟಿ ಡಾಲರ್ ವ್ಯಯಿಸಿದೆ. ಬಡ ರಾಷ್ಟ್ರಗಳಿಗೆ ಕೇವಲ ವಿಶ್ವಬ್ಯಾಂಕ್‌ ನೆರವು ನೀಡಿದರೆ ಅವುಗಳ ಪರಿಸ್ಥಿತಿ ಸುಧಾರಿಸುವುದಿಲ್ಲ. ಶ್ರೀಮಂತ ದೇಶಗಳು ದ್ವಿಪಕ್ಷೀಯ ಸಹಕಾರಕ್ಕೆ ಒತ್ತು ನೀಡಿ, ಬಡ ದೇಶಗಳ  ಆರ್ಥಿಕ ಅಭಿವೃದ್ಧಿಗೆ ನೆರವಾಗಬೇಕು ಎಂದು ಮಾಲ್ಪಾಸ್ ಸಲಹೆ ಮಾಡಿದರು.

ಬೇರೆ ದೇಶಗಳಿಗೆ ಹೋಗಿರುವ ಕಾರ್ಮಿಕರು ಅಲ್ಲಿಂದ ದುಡಿದು ಕಳಿಸುವ ಹಣ ಮತ್ತು ಪ್ರವಾಸೋದ್ಯಮ ಆದಾಯಗಳು ಅಭಿವೃದ್ಧಿಶೀಲ ದೇಶಗಳ ಮುಖ್ಯ ಆದಾಯದ ಮೂಲ. ಆರ್ಥಿಕತೆಯ ಪುನಶ್ಚೇತನಕ್ಕೆ ಇದು ಅನಿವಾರ್ಯ. ಅಭಿವೃದ್ಧಿ ಪ್ರಮಾಣ ಕಡಿಮೆಯಿರುವ ದೇಶಗಳಿಗೆ ನೀಡಿರುವ  ಸಾಲದ ಮರುಪಾವತಿ ಕಂತನ್ನು ಒಂದು ವರ್ಷದ ಅವಧಿಗೆ ಮುಂದೂಡುವ ಪ್ರಸ್ತಾವಕ್ಕೆ ಪೂರಕ ಸ್ಪಂದನೆ ವ್ಯಕ್ತವಾಗಿದೆ. ಈವರೆಗೆ 14 ದೇಶಗಳು ಈ ಪ್ರಸ್ತಾವವನ್ನು ಅನುಮೋದಿಸಿವೆ. ಉಳಿದ ದೇಶಗಳಿಂದ ಆಶಾದಾಯಕ ಸ್ಪಂದನೆ ವ್ಯಕ್ತವಾಗಿದೆ ಎಂದು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

30 ನಿಮಿಷಗಳಲ್ಲಿ ಹಿಂದಕ್ಕೆ ಹೋಗಿ: ಶಾಂತಿ ಮಾತುಕತೆ ಮಧ್ಯೆ ಹಾರ್ಮುಜ್'ಗೆ ನುಗ್ಗಿದ ಅಮೆರಿಕದ Destroyer ಯುದ್ಧನೌಕೆಗೆ ಇರಾನ್ ಎಚ್ಚರಿಕೆ!

"ಇರಾನ್ ದೊಡ್ಡ ಮಟ್ಟದಲ್ಲಿ ಸೋಲುತ್ತಿದೆ": ಮಾತುಕತೆ ಮುಕ್ತಾಯಕ್ಕೂ ಮುನ್ನ ಟ್ರಂಪ್ ಘೋಷಣೆ

IPL 2026: ಸ್ಯಾಮ್ಸನ್ ಬ್ಯಾಟಿಂಗ್ ಅಬ್ಬರ; DC ವಿರುದ್ಧ CSK ಗೆ 23 ರನ್ ಗಳ ಭರ್ಜರಿ ಜಯ

ಖ್ಯಾತ ಗಾಯಕಿ ಆಶಾ ಭೋಸ್ಲೆಗೆ ಹೃದಯಾಘಾತ: ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲು

IPL 2026: ಚೆನ್ನೈ ಪರ ಸಂಜು ಸ್ಯಾಮ್ಸನ್ ಸ್ಫೋಟಕ ಬ್ಯಾಟಿಂಗ್; MS ಧೋನಿ ದಾಖಲೆ ಪುಡಿ; ದಿಗ್ಗಜರ ಗುಂಪಿಗೆ ಸೇರ್ಪಡೆ

SCROLL FOR NEXT