ಡೊನಾಲ್ಡ್ ಟ್ರಂಪ್ 
ವಿದೇಶ

ಜಿ7 ಶೃಂಗಸಭೆ ಸೆಪ್ಟೆಂಬರ್ ಗೆ ಮುಂದೂಡಿದ ಅಮೆರಿಕ; ಇದು ಹಳೆಯ ಗುಂಪು, ಭಾರತವನ್ನೂ ಸೇರಿಸಬೇಕು ಎಂದ ಟ್ರಂಪ್!

ಶ್ವೇತಭವನದಲ್ಲಿ ಮುಂದಿನ ತಿಂಗಳು ನಡೆಸಲು ಉದ್ದೇಶಿಸಿದ್ದ ಜಿ7 ಶೃಂಗಸಭೆಯನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮುಂದೂಡಿದ್ದಾರೆ. ಜಿ7 ಶೃಂಗ ರಾಷ್ಟ್ರಗಳೊಂದಿಗೆ ಇಂದು ವಿಶ್ವದ ಆರ್ಥಿಕತೆಯಲ್ಲಿ ಗುರುತಿಸಿಕೊಂಡಿರುವ ಭಾರತ ಮತ್ತು ಇತರ ಕೆಲವು ದೇಶಗಳನ್ನು ಸೇರಿಸುವಂತೆ ಅವರು ಕೋರಿದ್ದಾರೆ.

ವಾಷಿಂಗ್ಟನ್: ಶ್ವೇತಭವನದಲ್ಲಿ ಮುಂದಿನ ತಿಂಗಳು ನಡೆಸಲು ಉದ್ದೇಶಿಸಿದ್ದ ಜಿ7 ಶೃಂಗಸಭೆಯನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮುಂದೂಡಿದ್ದಾರೆ. ಜಿ7 ಶೃಂಗ ರಾಷ್ಟ್ರಗಳೊಂದಿಗೆ ಇಂದು ವಿಶ್ವದ ಆರ್ಥಿಕತೆಯಲ್ಲಿ ಗುರುತಿಸಿಕೊಂಡಿರುವ ಭಾರತ ಮತ್ತು ಇತರ ಕೆಲವು ದೇಶಗಳನ್ನು ಸೇರಿಸುವಂತೆ ಅವರು ಕೋರಿದ್ದಾರೆ.

ಈ ಬಗ್ಗೆ ನಿನ್ನೆ ಸುದ್ದಿಗಾರರಿಗೆ ಮಾಹಿತಿ ನೀಡಿದ ಟ್ರಂಪ್, ಜಿ7 ಶೃಂಗಸಭೆಯನ್ನು ಸೆಪ್ಟೆಂಬರ್ ವರೆಗೆ ಮುಂದೂಡಲಾಗುವುದು, ನಂತರ ನಡೆಸುವ ಶೃಂಗಸಭೆಗೆ ಭಾರತ ಸೇರಿದಂತೆ ರಷ್ಯಾ, ದಕ್ಷಿಣ ಕೊರಿಯಾ, ಆಸ್ಟ್ರೇಲಿಯಾಗಳನ್ನು ಸಹ ಆಹ್ವಾನಿಸಲು ಯೋಚಿಸುತ್ತಿರುವುದಾಗಿ ಹೇಳಿದ್ದಾರೆ.

ಜಗತ್ತಿನಲ್ಲಿ ನಡೆಯುತ್ತಿರುವ ವಿದ್ಯಮಾನಗಳಿಗೆ ತಕ್ಕುದಾಗಿ ಜಿ7 ಪ್ರತಿನಿಧಿಸುತ್ತದೆ ಎಂದು ನನಗೆ ಅನ್ನಿಸುವುದಿಲ್ಲ, ಅದು ಹಳೆಯದಾಗಿದೆ ಎಂದು ಭಾಸವಾಗುತ್ತಿದೆ. ಇದು ಬಹಳ ಹಳೆಯದಾದ ದೇಶಗಳ ಗುಂಪಾಗಿದೆ ಎಂದು ಅಭಿಪ್ರಾಯಪಟ್ಟರು.
ವಿಶ್ವದ ಅತ್ಯಂತ ಸುಧಾರಿತ ಮತ್ತು ಆರ್ಥಿಕವಾಗಿ ಪ್ರಬಲವಾಗಿರುವ ದೇಶಗಳಾದ ಅಮೆರಿಕ, ಫ್ರಾನ್ಸ್, ಜರ್ಮನಿ, ಇಟಲಿ, ಜಪಾನ್, ಇಂಗ್ಲೆಂಡ್ ಮತ್ತು ಕೆನಡಾ ದೇಶಗಳನ್ನು ಒಟ್ಟು ಸೇರಿಸಿ ಜಿ7 ಶೃಂಗರಾಷ್ಟ್ರಗಳನ್ನಾಗಿ ರಚಿಸಲಾಗಿತ್ತು. ಈ ದೇಶಗಳ ಮುಖ್ಯಸ್ಥರು ವರ್ಷಕ್ಕೊಂದು ಬಾರಿ ಸಭೆ ಸೇರಿ ಅಂತರಾಷ್ಟ್ರೀಯ ಆರ್ಥಿಕತೆ ಮತ್ತು ವಿತ್ತೀಯ ವಿಷಯಗಳ ಬಗ್ಗೆ ಚರ್ಚೆ ನಡೆಸಿ ಹಲವು ನಿರ್ಧಾರಗಳನ್ನು ತೆಗೆದುಕೊಳ್ಳುತ್ತವೆ.

ಈ ವರ್ಷದ ಜಿ7 ಶೃಂಗಸಭೆಯ ಆತಿಥ್ಯ ಅಮೆರಿಕ ವಹಿಸಲಿದೆ. ಸಾಮಾನ್ಯವಾಗಿ ಈ ಶೃಂಗಸಭೆಗೆ ಅಧ್ಯಕ್ಷರು ಪ್ರತಿವರ್ಷ ಒಂದು ಅಥವಾ ಎರಡು ರಾಷ್ಟ್ರಗಳ ಮುಖ್ಯಸ್ಥರನ್ನು ವಿಶೇಷ ಆಹ್ವಾನಿತರಾಗಿ ಆಹ್ವಾನಿಸುತ್ತಾರೆ. ಕಳೆದ ವರ್ಷ ಫ್ರಾನ್ಸ್ ನಲ್ಲಿ ನಡೆದ ಶೃಂಗಸಭೆಗೆ ಪ್ರಧಾನಿ ಮೋದಿಯವರಿಗೆ ವಿಶೇಷ ಆಹ್ವಾನ ನೀಡಲಾಗಿತ್ತು.

ಇದೀಗ ಅಮೆರಿಕ ಅಧ್ಯಕ್ಷ ಟ್ರಂಪ್ ಅವರು ಕೂಡ ಈ ವರ್ಷದ ಶೃಂಗಸಭೆಗೆ ಪ್ರಧಾನಿ ಮೋದಿಯವರನ್ನು ಆಹ್ವಾನಿಸುತ್ತಿರುವುದು ಅಂತಾರಾಷ್ಟ್ರೀಯ ಮಟ್ಟದಲ್ಲಿ ಭಾರತದ ಸ್ಥಾನಮಾನ ಹೆಚ್ಚಾಗುತ್ತಿರುವುದನ್ನು ತೋರಿಸುತ್ತದೆ ಎನ್ನಬಹುದು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಪ್ಯಾಕ್ಸ್ ಸಿಲಿಕಾ ಅಲೈಯನ್ಸ್‌ನ ಸದಸ್ಯ ದೇಶವಾಗಲಿದೆ; ಅಮೆರಿಕಕ್ಕೆ ಭಾರತಕ್ಕಿಂತ ಮುಖ್ಯ ದೇಶ ಮತ್ತೊಂದಿಲ್ಲ: ಸೆರ್ಗಿಯೊ ಗೋರ್

ಬಿಗ್ ಬಾಸ್ 12 ಫಿನಾಲೆ ಹೊತ್ತಲ್ಲಿ ಕಿಚ್ಚ ಸುದೀಪ್‌ಗೆ ಸಂಕಷ್ಟ ತಂದ 'ರಣಹದ್ದು'!

CM ಕುರ್ಚಿ ಗುದ್ದಾಟ: ಅಗತ್ಯವಿದ್ದಾಗ ಸಿದ್ದರಾಮಯ್ಯ, ಶಿವಕುಮಾರ್‌ರನ್ನು ಮಾತುಕತೆಗೆ ಕರೆಯಲಾಗುವುದು; ಮಲ್ಲಿಕಾರ್ಜುನ ಖರ್ಗೆ

ಮಹಾತ್ಮ ಗಾಂಧಿ ಸಂದೇಶಗಳು ಹಿಂದೆಂದಿಗಿಂತಲೂ ಈಗ ಹೆಚ್ಚು ಪ್ರಸ್ತುತ: ಸಬರಮತಿ ಆಶ್ರಮದಲ್ಲಿ ಜರ್ಮನ್ ಚಾನ್ಸೆಲರ್!

'sir' ವಿವಾದ ಕೊನೆಗೂ ಅಂತ್ಯ: 'ಸರ್.. ನೀವು ನನ್ನ ಹಿರಿಯರು': ಕಿಚ್ಚಾ ಸುದೀಪ್ ಗೆ ಧನ್ಯವಾದ ಹೇಳಿದ ನಟ ಯಶ್!

SCROLL FOR NEXT