ಡೊನಾಲ್ಡ್ ಟ್ರಂಪ್ 
ವಿದೇಶ

ಜಿ7 ಶೃಂಗಸಭೆ ಸೆಪ್ಟೆಂಬರ್ ಗೆ ಮುಂದೂಡಿದ ಅಮೆರಿಕ; ಇದು ಹಳೆಯ ಗುಂಪು, ಭಾರತವನ್ನೂ ಸೇರಿಸಬೇಕು ಎಂದ ಟ್ರಂಪ್!

ಶ್ವೇತಭವನದಲ್ಲಿ ಮುಂದಿನ ತಿಂಗಳು ನಡೆಸಲು ಉದ್ದೇಶಿಸಿದ್ದ ಜಿ7 ಶೃಂಗಸಭೆಯನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮುಂದೂಡಿದ್ದಾರೆ. ಜಿ7 ಶೃಂಗ ರಾಷ್ಟ್ರಗಳೊಂದಿಗೆ ಇಂದು ವಿಶ್ವದ ಆರ್ಥಿಕತೆಯಲ್ಲಿ ಗುರುತಿಸಿಕೊಂಡಿರುವ ಭಾರತ ಮತ್ತು ಇತರ ಕೆಲವು ದೇಶಗಳನ್ನು ಸೇರಿಸುವಂತೆ ಅವರು ಕೋರಿದ್ದಾರೆ.

ವಾಷಿಂಗ್ಟನ್: ಶ್ವೇತಭವನದಲ್ಲಿ ಮುಂದಿನ ತಿಂಗಳು ನಡೆಸಲು ಉದ್ದೇಶಿಸಿದ್ದ ಜಿ7 ಶೃಂಗಸಭೆಯನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮುಂದೂಡಿದ್ದಾರೆ. ಜಿ7 ಶೃಂಗ ರಾಷ್ಟ್ರಗಳೊಂದಿಗೆ ಇಂದು ವಿಶ್ವದ ಆರ್ಥಿಕತೆಯಲ್ಲಿ ಗುರುತಿಸಿಕೊಂಡಿರುವ ಭಾರತ ಮತ್ತು ಇತರ ಕೆಲವು ದೇಶಗಳನ್ನು ಸೇರಿಸುವಂತೆ ಅವರು ಕೋರಿದ್ದಾರೆ.

ಈ ಬಗ್ಗೆ ನಿನ್ನೆ ಸುದ್ದಿಗಾರರಿಗೆ ಮಾಹಿತಿ ನೀಡಿದ ಟ್ರಂಪ್, ಜಿ7 ಶೃಂಗಸಭೆಯನ್ನು ಸೆಪ್ಟೆಂಬರ್ ವರೆಗೆ ಮುಂದೂಡಲಾಗುವುದು, ನಂತರ ನಡೆಸುವ ಶೃಂಗಸಭೆಗೆ ಭಾರತ ಸೇರಿದಂತೆ ರಷ್ಯಾ, ದಕ್ಷಿಣ ಕೊರಿಯಾ, ಆಸ್ಟ್ರೇಲಿಯಾಗಳನ್ನು ಸಹ ಆಹ್ವಾನಿಸಲು ಯೋಚಿಸುತ್ತಿರುವುದಾಗಿ ಹೇಳಿದ್ದಾರೆ.

ಜಗತ್ತಿನಲ್ಲಿ ನಡೆಯುತ್ತಿರುವ ವಿದ್ಯಮಾನಗಳಿಗೆ ತಕ್ಕುದಾಗಿ ಜಿ7 ಪ್ರತಿನಿಧಿಸುತ್ತದೆ ಎಂದು ನನಗೆ ಅನ್ನಿಸುವುದಿಲ್ಲ, ಅದು ಹಳೆಯದಾಗಿದೆ ಎಂದು ಭಾಸವಾಗುತ್ತಿದೆ. ಇದು ಬಹಳ ಹಳೆಯದಾದ ದೇಶಗಳ ಗುಂಪಾಗಿದೆ ಎಂದು ಅಭಿಪ್ರಾಯಪಟ್ಟರು.
ವಿಶ್ವದ ಅತ್ಯಂತ ಸುಧಾರಿತ ಮತ್ತು ಆರ್ಥಿಕವಾಗಿ ಪ್ರಬಲವಾಗಿರುವ ದೇಶಗಳಾದ ಅಮೆರಿಕ, ಫ್ರಾನ್ಸ್, ಜರ್ಮನಿ, ಇಟಲಿ, ಜಪಾನ್, ಇಂಗ್ಲೆಂಡ್ ಮತ್ತು ಕೆನಡಾ ದೇಶಗಳನ್ನು ಒಟ್ಟು ಸೇರಿಸಿ ಜಿ7 ಶೃಂಗರಾಷ್ಟ್ರಗಳನ್ನಾಗಿ ರಚಿಸಲಾಗಿತ್ತು. ಈ ದೇಶಗಳ ಮುಖ್ಯಸ್ಥರು ವರ್ಷಕ್ಕೊಂದು ಬಾರಿ ಸಭೆ ಸೇರಿ ಅಂತರಾಷ್ಟ್ರೀಯ ಆರ್ಥಿಕತೆ ಮತ್ತು ವಿತ್ತೀಯ ವಿಷಯಗಳ ಬಗ್ಗೆ ಚರ್ಚೆ ನಡೆಸಿ ಹಲವು ನಿರ್ಧಾರಗಳನ್ನು ತೆಗೆದುಕೊಳ್ಳುತ್ತವೆ.

ಈ ವರ್ಷದ ಜಿ7 ಶೃಂಗಸಭೆಯ ಆತಿಥ್ಯ ಅಮೆರಿಕ ವಹಿಸಲಿದೆ. ಸಾಮಾನ್ಯವಾಗಿ ಈ ಶೃಂಗಸಭೆಗೆ ಅಧ್ಯಕ್ಷರು ಪ್ರತಿವರ್ಷ ಒಂದು ಅಥವಾ ಎರಡು ರಾಷ್ಟ್ರಗಳ ಮುಖ್ಯಸ್ಥರನ್ನು ವಿಶೇಷ ಆಹ್ವಾನಿತರಾಗಿ ಆಹ್ವಾನಿಸುತ್ತಾರೆ. ಕಳೆದ ವರ್ಷ ಫ್ರಾನ್ಸ್ ನಲ್ಲಿ ನಡೆದ ಶೃಂಗಸಭೆಗೆ ಪ್ರಧಾನಿ ಮೋದಿಯವರಿಗೆ ವಿಶೇಷ ಆಹ್ವಾನ ನೀಡಲಾಗಿತ್ತು.

ಇದೀಗ ಅಮೆರಿಕ ಅಧ್ಯಕ್ಷ ಟ್ರಂಪ್ ಅವರು ಕೂಡ ಈ ವರ್ಷದ ಶೃಂಗಸಭೆಗೆ ಪ್ರಧಾನಿ ಮೋದಿಯವರನ್ನು ಆಹ್ವಾನಿಸುತ್ತಿರುವುದು ಅಂತಾರಾಷ್ಟ್ರೀಯ ಮಟ್ಟದಲ್ಲಿ ಭಾರತದ ಸ್ಥಾನಮಾನ ಹೆಚ್ಚಾಗುತ್ತಿರುವುದನ್ನು ತೋರಿಸುತ್ತದೆ ಎನ್ನಬಹುದು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT