ಪೋಸ್ಟರ್ 
ವಿದೇಶ

ಇದು ನವ ಪಾಕಿಸ್ತಾನವಾ? ಪಾಕ್ ಬೀದಿಗಳಲ್ಲಿ ಮೋದಿ, ಅಭಿನಂದನ್ ಪೋಸ್ಟರ್‌!

ಪಾಕಿಸ್ತಾನ ರಾಷ್ಟ್ರೀಯ ಅಸೆಂಬ್ಲಿ(ದೇಶದ ಸಂಸತ್) ನಲ್ಲಿ ಬಲೂಚಿಸ್ತಾನ್ ಸಂಸದರು ಮೋದಿ... ಮೋದಿ... ಮೋದಿ... ಎಂದು ಘೋಷಣೆ ಕೂಗಿದ್ದರು. ಇದರಿಂದ ವ್ಯಗ್ರಗೊಂಡ ಪಾಕಿಸ್ತಾನ ವಿದೇಶಾಂಗ ಸಚಿವ ಖುರೇಷಿಗೆ... ಸದನದಿಂದ ಸಭಾತ್ಯಾಗ ನಡೆಸಿ ಹೊರ ನಡೆದಿದ್ದರು ಎಂದೆಲ್ಲಾ ವರದಿಯಾಗಿತ್ತು. ಆದರೆ ಇದು ನಕಲಿ ಎಂದು ವರದಿಯಾಗಿತ್ತು.

ಇಸ್ಲಾಮಾಬಾದ್: ಪಾಕಿಸ್ತಾನ ರಾಷ್ಟ್ರೀಯ ಅಸೆಂಬ್ಲಿ(ದೇಶದ ಸಂಸತ್) ನಲ್ಲಿ ಬಲೂಚಿಸ್ತಾನ್ ಸಂಸದರು ಮೋದಿ... ಮೋದಿ... ಮೋದಿ... ಎಂದು ಘೋಷಣೆ ಕೂಗಿದ್ದರು. ಇದರಿಂದ ವ್ಯಗ್ರಗೊಂಡ ಪಾಕಿಸ್ತಾನ ವಿದೇಶಾಂಗ ಸಚಿವ ಖುರೇಷಿಗೆ... ಸದನದಿಂದ ಸಭಾತ್ಯಾಗ ನಡೆಸಿ ಹೊರ ನಡೆದಿದ್ದರು ಎಂದೆಲ್ಲಾ ವರದಿಯಾಗಿತ್ತು. ಆದರೆ ಇದು ನಕಲಿ ಎಂದು ವರದಿಯಾಗಿತ್ತು. 

ಈ ಘಟನೆ ನಡೆದು...  ಎರಡು ದಿನಗಳೂ ಆಗಿಲ್ಲ. ಪಾಕಿಸ್ತಾನದಲ್ಲಿ ಈಗ ಮೋದಿ ಪೋಸ್ಟರ್ ಕಾಣಿಸಿಕೊಂಡಿವೆ...! ಪ್ರಧಾನಿ ಮೋದಿ, ವಿಂಗ್ ಕಮಾಂಡರ್ ಅಭಿನಂದನ್ ವರ್ಧಮಾನ್ ಜೊತೆಗೆ ಸಂಸದ ಅಯಾಜ್ ಸಾಧಿಕ್ ಇರುವ ಪೋಸ್ಟರ್ ಗಳು ಕಾಣಿಸಿಕೊಂಡಿವೆ. ಅದರಲ್ಲಿ ಪಾಕ್ ಸಂಸದ ಅಯಾಜ್ ಸಾಧಿಕ್ ಮೋದಿ ಸ್ನೇಹಿತ ಎಂದು ಟ್ರೋಲ್ ಮಾಡಿರುವುದು ಗಮನಾರ್ಹವಾಗಿದೆ.

ಪಾಕಿಸ್ತಾನ ಸಂಸತ್ತಿನಲ್ಲಿ ಮುಸ್ಲಿಂ ಲೀಗ್-ಎನ್ ನಾಯಕ ಸಾಧಿಕ್ ಮಾತನಾಡಿ.. ವಿಂಗ್ ಕಮಾಂಡರ್ ಅಭಿನಂದನ್ ವರ್ಧಮಾನ್ ಅವರನ್ನು ಬಿಡುಗಡೆ ಮಾಡದಿದ್ದರೆ ರಾತ್ರಿ 9 ಗಂಟೆಗೆ ಭಾರತ ನಮ್ಮ ಮೇಲೆ ದಾಳಿ ಮಾಡುತ್ತದೆ ಎಂದು ವಿದೇಶಾಂಗ ಸಚಿವ ಮೊಹಮ್ಮದ್ ಖುರೇಷಿ ಹೇಳಿದ್ದು ತಮಗೆ ಈಗಲೂ ನೆನಪಿದೆ.

ಆ ಸಭೆಯಲ್ಲಿ ಭಾಗವಹಿಸಲು ಪ್ರಧಾನಿ ಇಮ್ರಾನ್ ಖಾನ್ ನಿರಾಕರಿಸಿದ್ದರು. ಆದರೆ, ವಿದೇಶಾಂಗ ಸಚಿವ ಮೊಹಮ್ಮದ್ ಖುರೇಷಿ  ಮಾತ್ರ  ಹಾಜರಾಗಿದ್ದರು. ಸಭೆಯಲ್ಲಿ ಸೇನಾ ಮುಖ್ಯಸ್ಥ ಬಾಜ್ವಾ ಕೂಡ ಉಪಸ್ಥಿತರಿದ್ದರು. ದಯವಿಟ್ಟು ಅಭಿನಂದನ್ ವರ್ಧಮಾನ್ ಅವರನ್ನು ಬಿಟ್ಟು ಬಿಡಿ. ಇಲ್ಲದಿದ್ದರೆ ರಾತ್ರಿ 9 ಗಂಟೆಗೆ ಭಾರತ ನಮ್ಮ ಮೇಲೆ ದಾಳಿ ಮಾಡುತ್ತದೆ ಎಂದು ಸಚಿವ ಖುರೇಷಿ ಎಚ್ಚರಿಸಿದ್ದರು. ಆ ಕ್ಷಣದಲ್ಲಿ  ಸೇನಾ ಮುಖ್ಯಸ್ಥ ಬಾಜ್ವಾ ಕಾಲುಗಳು ನಡುಗುತ್ತಿದ್ದವು ಸಾಧಿಕ್  ಹೇಳಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

ವಿಧಾನಪರಿಷತ್'ಗೆ ನಾಮನಿರ್ದೇಶನ: ನಾಲ್ವರು MLC ಅಭ್ಯರ್ಥಿಗಳು ಹೆಸರು ಬದಲು, ಪಟ್ಟಿಯಲ್ಲಿ TNIE ಮೈಸೂರು ವಿಭಾಗದ ಮುಖ್ಯಸ್ಥನಿಗೆ ಸ್ಥಾನ

ಬಾನು ಮುಷ್ತಾಕ್‌ ದಸರಾ ಉದ್ಘಾಟನೆಗೆ ಆಕ್ಷೇಪ; ಮುಸ್ಲಿಂ ದ್ವೇಷ ಮನಸ್ಥಿತಿಯನ್ನು ಬದಿಗಿಟ್ಟು, ಸಂವಿಧಾನದ ಆಶಯ ಅರ್ಥ ಮಾಡಿಕೊಳ್ಳಿ: ಸಚಿವ ಹೆಚ್.ಸಿ.ಮಹದೇವಪ್ಪ

ಚಾಮುಂಡೇಶ್ವರಿ ದೇವಿ ಬಗ್ಗೆ ಗೌರವವಿದ್ದು, ಧಾರ್ಮಿಕ ಭಾವನೆಗಳ ಗೌರವಿಸುತ್ತೇನೆ; ಬಾನು ಮುಷ್ತಾಕ್

JC ರಸ್ತೆಯಲ್ಲಿ White-topping ಕಾಮಗಾರಿ: ಆ.30ರವರೆಗೆ ಭಾರಿ ಗಾತ್ರದ ವಾಹನಗಳ ಸಂಚಾರಕ್ಕೆ ನಿರ್ಬಂಧ

SCROLL FOR NEXT