ಶ್ರೀನಗರ-ಲಡಾಕ್ ಹೆದ್ದಾರಿಯಲ್ಲಿ ಭಾರತೀಯ ಯೋಧರು ವಾಹನಗಳಲ್ಲಿ ಸಾಗುತ್ತಿರುವುದು 
ವಿದೇಶ

ಲಡಾಕ್ ಸಂಘರ್ಷ ಮಧ್ಯೆ ಅಂಧ್ರ ಪ್ರದೇಶದಲ್ಲಿ ಭಾರತದ ಗಡಿಗೆ ಹತ್ತಿರವಾಗಿ ರೈಲ್ವೆ ಸಂಪರ್ಕ ಜಾಲ ನಿರ್ಮಾಣ ಆರಂಭಿಸಿದ ಚೀನಾ!

ಪೂರ್ವ ಲಡಾಕ್ ನಲ್ಲಿ ಗಡಿ ವಿವಾದ ಮಧ್ಯೆ ಅರುಣಾಚಲ ಪ್ರದೇಶದ ಭಾರತದ ಗಡಿಯಲ್ಲಿರುವ ಟಿಬೆಟ್ ನ ಲಿಂಜ್ಹಿಯ ನೈರುತ್ಯ ಸಿಚಿಯಾನ್ ಪ್ರಾಂತ್ಯದ ಯಾನ್ ಮಧ್ಯೆ ಸಿಚುವಾನ್-ಟಿಬೆಟ್ ರೈಲ್ವೆ ಸಂಪರ್ಕಜಾಲವನ್ನು ನಿರ್ಮಿಸಲು ಚೀನಾ ಮುಂದಾಗಿದೆ.

ಬೀಜಿಂಗ್: ಪೂರ್ವ ಲಡಾಕ್ ನಲ್ಲಿ ಗಡಿ ವಿವಾದ ಮಧ್ಯೆ ಅರುಣಾಚಲ ಪ್ರದೇಶದ ಭಾರತದ ಗಡಿಯಲ್ಲಿರುವ ಟಿಬೆಟ್ ನ ಲಿಂಜ್ಹಿಯ ನೈರುತ್ಯ ಸಿಚಿಯಾನ್ ಪ್ರಾಂತ್ಯದ ಯಾನ್ ಮಧ್ಯೆ ಸಿಚುವಾನ್-ಟಿಬೆಟ್ ರೈಲ್ವೆ ಸಂಪರ್ಕಜಾಲವನ್ನು ನಿರ್ಮಿಸಲು ಚೀನಾ ಮುಂದಾಗಿದೆ.

ಸಿಚುವಾನ್-ಟಿಬೆಟ್ ರೈಲ್ವೆಯ ಯಾನ್-ಲಿನ್ಜಿ ಭಾಗದಲ್ಲಿ ವಿದ್ಯುತ್ ಪೂರೈಕೆ ಯೋಜನೆಗೆ ಎರಡು ಸುರಂಗಗಳು ಮತ್ತು ಒಂದು ಸೇತುವೆ ನಿರ್ಮಾಣಕ್ಕೆ ಚೀನಾ ರೈಲ್ವೆ ಬಿಡ್ಡಿಂಗ್ ಕರೆದಿದೆ. ಕಿಂಗ್‌ಹೈ-ಟಿಬೆಟ್ ರೈಲ್ವೆಯ ನಂತರ ಸಿಚುವಾನ್-ಟಿಬೆಟ್ ರೈಲ್ವೆ ಟಿಬೆಟ್‌ನಲ್ಲಿ ಎರಡನೆಯ ಇಂತಹ ಯೋಜನೆಯಾಗಿದೆ.

ಈ ರೈಲ್ವೆ ಸಂಪರ್ಕ ಜಾಲ ನೈರುತ್ಯ ಕ್ವಿಂಗೈ-ಟಿಬೆಟ್ ಪ್ರಸ್ಥಭೂಮಿ ಮೂಲಕ ಹಾದುಹೋಗುತ್ತಿದ್ದು ಭೌಗೋಳಿಕವಾಗಿ ವಿಶ್ವದಲ್ಲಿಯೇ ಅತಿಹೆಚ್ಚು ಚಟುವಟಿಕೆ ಹೊಂದಿರುವ ಪ್ರದೇಶವಾಗಿದೆ ಎಂದು ಚೀನಾದ ಸುದ್ದಿಸಂಸ್ಥೆಯೊಂದು ಹೇಳಿದೆ.

ಸಿಚುವಾನ್-ಟಿಬೆಟ್ ರೈಲ್ವೆ ಸಿಚುವಾನ್ ಪ್ರಾಂತ್ಯದ ರಾಜಧಾನಿಯಾದ ಚೆಂಗ್ಡೂನಿಂದ ಪ್ರಾರಂಭವಾಗಿ, ಯಾನ್ ಮೂಲಕ ಪ್ರಯಾಣಿಸಿ ಕಾಮ್ಡೋ ಮೂಲಕ ಟಿಬೆಟ್‌ ಪ್ರವೇಶಿಸುತ್ತದೆ, ಚೆಂಗ್ಡೂನಿಂದ ಲಾಸಾಗೆ ಪ್ರಯಾಣವನ್ನು 48 ಗಂಟೆಗಳಿಂದ 13 ಗಂಟೆಗಳವರೆಗೆ ಈ ಸಂಪರ್ಕ ಜಾಲ ಕಡಿಮೆ ಮಾಡುತ್ತದೆ.

ಲಿಂಜ್ಹಿಯನ್ನು ನಿಯಿಂಗ್ಚಿ ಎಂದು ಸಹ ಕರೆಯಲಾಗುತ್ತಿದ್ದು, ಅರುಣಾಚಲ ಪ್ರದೇಶ ಗಡಿಗೆ ಹತ್ತಿರದಲ್ಲಿದೆ. ದಕ್ಷಿಣ ಟಿಬೆಟ್ ನ ಭಾಗ ಅರುಣಾಚಲ ಪ್ರದೇಶ ಎಂದು ಚೀನಾ ವಾದಿಸುತ್ತಿದ್ದರೆ ಭಾರತ ಅದನ್ನು ವಿರೋಧಿಸುತ್ತಾ ಬಂದಿದ್ದು, ಸಂಪೂರ್ಣವಾಗಿ ಭಾರತಕ್ಕೆ ಸೇರಿದ್ದು ಎಂದು ಹೇಳುತ್ತಿದೆ. ಸಿಂಜ್ಹಿಯಲ್ಲಿ ವಿಮಾನ ನಿಲ್ದಾಣವಿದ್ದು ಹಿಮಾಲಯದಲ್ಲಿ ಚೀನಾ ನಿರ್ಮಿಸಿರುವ ವಿಮಾನ ನಿಲ್ದಾಣಗಳಲ್ಲಿ ಒಂದಾಗಿದೆ.

ಹೊಸದಾಗಿ ನಿರ್ಮಾಣಗೊಳ್ಳುವ ಯಾನ್-ಲಿಂಜ್ಹಿ ರೈಲ್ವೆ ಸಂಪರ್ಕ ಜಾಲ 1,011 ಕಿಲೋ ಮೀಟರ್ ದೂರ ಹೊಂದಿದ್ದು 26 ನಿಲ್ದಾಣಗಳನ್ನು ಒಳಗೊಳ್ಳುತ್ತದೆ. ರೈಲುಗಳು ಪ್ರತಿ ಗಂಟೆಗೆ 120ರಿಂದ 200 ಕಿಲೋ ಮೀಟರ್ ವೇಗದಲ್ಲಿ ಚಲಿಸುವ ಸಾಧ್ಯತೆಯಿದೆ ಎಂದು ಯೋಜನೆಯ ಸಿಬ್ಬಂದಿಯೊಬ್ಬರು ಹೇಳುತ್ತಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

CM ಆಗುವ ಕಾಲ ಹತ್ತಿರ ಬಂದಿದೆ ಎಂದು ನಾನು ಹೇಳಿಲ್ಲ: ಸುದ್ದಿ ತಿರುಚಿ ಪ್ರಸಾರ ಮಾಡಿದರೆ ಮಾನನಷ್ಟ ಮೊಕದ್ದಮೆ ಅನಿವಾರ್ಯ; ಡಿ ಕೆ ಶಿವಕುಮಾರ್

2nd test, Day 2: 2ನೇ ದಿನದಾಟದ ಆರಂಭದಲ್ಲೇ ಭಾರತಕ್ಕೆ ಆಘಾತ, ಭೋಜನ ವಿರಾಮದ ವೇಳೆಗೆ 427/4

ಸಮಸ್ತ ಜನರಿಗೆ ಸುಗಮ ಆಡಳಿತ, ಶುದ್ಧ ನೀರಿನ ಪೂರೈಕೆ: ಸ್ವಚ್ಚತೆ- ಸಂಚಾರ ವ್ಯವಸ್ಥೆಗೆ ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

SCROLL FOR NEXT