ಸಾಂದರ್ಭಿಕ ಚಿತ್ರ 
ವಿದೇಶ

ಸ್ಪುಟ್ನಿಕ್ ವಿ ಲಸಿಕೆ ಕೋವಿಡ್ ವಿರುದ್ಧ ಶೇ.92 ರಷ್ಟು ಪರಿಣಾಮಕಾರಿ: ರಷ್ಯಾ

ಮೊದಲ ಮಧ್ಯಂತರ ವಿಶ್ಲೇಷಣೆಯ ಪ್ರಕಾರವಾಗಿ ತಾನು ಅಭಿವೃದ್ಧಿಪಡಿಸಿದ ಲಸಿಕೆ ಸ್ಪುಟ್ನಿಕ್ ವಿ ಕೋವಿಡ್ ನಿಂದ ಜನರನ್ನು ರಕ್ಷಿಸುವಲ್ಲಿ ಶೇಕಡಾ 92 ರಷ್ಟು ಪರಿಣಾಮಕಾರಿ ಎಂದು ರಷ್ಯಾ ಬುಧವಾರ ಹೇಳಿದೆ.

ಮಾಸ್ಕೋ: ಮೊದಲ ಮಧ್ಯಂತರ ವಿಶ್ಲೇಷಣೆಯ ಪ್ರಕಾರವಾಗಿ ತಾನು ಅಭಿವೃದ್ಧಿಪಡಿಸಿದ ಲಸಿಕೆ ಸ್ಪುಟ್ನಿಕ್ ವಿ ಕೋವಿಡ್ ನಿಂದ ಜನರನ್ನು ರಕ್ಷಿಸುವಲ್ಲಿ ಶೇಕಡಾ 92 ರಷ್ಟು ಪರಿಣಾಮಕಾರಿ ಎಂದು ರಷ್ಯಾ ಬುಧವಾರ ಹೇಳಿದೆ.

ಸ್ಪುಟ್ನಿಕ್ ವಿ ಲಸಿಕೆ ಪರಿಣಾಮಕಾರಿತ್ವವು ಶೇಕಡಾ 92 ರಷ್ಟಿದೆ (ಲಸಿಕೆ ಹಾಕಿಸಿಕೊಂಡ ವ್ಯಕ್ತಿಗಳು ಮತ್ತು ಪ್ಲಾಸ್ಮಾ ಚಿಕಿತ್ಸೆ ಪಡೆದವರ ನಡುವೆ ನಡೆಸಲಾದ 20 ದೃಢೀಕರಿಸಿದ ಕೋವಿಡ್   ಪ್ರಕರಣಗಳ ಆಧಾರದ ಮೇಲೆ ಲೆಕ್ಕಾಚಾರ)"ಎಂದು ರಷ್ಯಾ ಡೈರೆಕ್ಟ್ ಇವೆಸ್ಟ್ ಮೆಂಟ್ ಫಂಡ್ (ಆರ್‌ಡಿಐಎಫ್) ಹೇಳಿಕೆಯಲ್ಲಿ ತಿಳಿಸಿದೆ. 

ಪ್ರಸ್ತುತ ಸ್ಪುಟ್ನಿಕ್ ವಿ ಲಸಿಕೆಗಾಗಿನ ಮೂರನೇ ಹಂತದ ಕ್ಲಿನಿಕಲ್ ಪ್ರಯೋಗಗಳನ್ನು ಅನುಮೋದಿಸಲಾಗಿದೆ ಮತ್ತು ಬೆಲಾರಸ್, ಯುಎಇ, ವೆನೆಜುವೆಲಾ ಮತ್ತು ಇತರ ದೇಶಗಳಲ್ಲಿ ಇದು ನಡೆಯುತ್ತಿದೆ.. ಭಾರತದಲ್ಲಿ, ಲಸಿಕೆಯ ಎರಡು, ಮೂರನೇ ಹಂತದ ಪ್ರಯೋಗ ನಡೆಯುತ್ತಿದೆ. ಪ್ರಸ್ತುತ, 40,000 ಸ್ವಯಂಸೇವಕರು  ಸ್ಪುಟ್ನಿಕ್ ವಿ ವಿವಿಧ ಹಂತದ ಪ್ರಯೋಗದಲ್ಲಿ ನಿರತವಾಗಿದ್ದು 20 ಸಾವಿರ ಮಂದಿಯನ್ನು ಮೊದಲ ಡೋಸ್​ಗೆ ಹಾಗೂ 16 ಸಾವಿರಕ್ಕೂ ಹೆಚ್ಚು ಮಂದಿಯನ್ನು ಮೊದಲ ಮತ್ತು ಎರಡನೇ ಡೋಸ್​ ಪ್ರಯೋಗಗಳಿಗೆ ಒಳಪಡಿಸಲಾಗಿದೆ.

"ಲಸಿಕೆಯ ಬಳಕೆ ಮತ್ತು ಕ್ಲಿನಿಕಲ್ ಪ್ರಯೋಗಗಳ ಫಲಿತಾಂಶಗಳು ಕೊರೋನಾ ಸೋಂಕು ಹರಡುವಿಕೆಯನ್ನು ತಡೆಯಲು ಪರಿಣಾಮಕಾರಿ ಪರಿಹಾರವಾಗಿದೆ ಎಂಬುದನ್ನು ತೋರಿಸುತ್ತದೆ ಮತ್ತು ಸಾಂಕ್ರಾಮಿಕ ರೋಗವನ್ನು ಹಿಮ್ಮೆಟ್ಟಿಸುವ ಅತ್ಯಂತ ಯಶಸ್ವಿ ಮಾರ್ಗವಾಗಿದೆ . " ಎಂದು ರಷ್ಯಾದ ಆರೋಗ್ಯ ಸಚಿವ ಮಿಖಾಯಿಲ್ ಮುರಾಶ್ಕೊ ಹೇಳಿದ್ದಾರೆ. 

ಮೊದಲ ಲಸಿಕೆ ನೀಡಿದ 21 ದಿನಗಳ ನಂತರ ಮಧ್ಯಂತರ ವರದಿ ಬಂದಿದೆ. ಇದರ ವಿಶ್ಲೇಷಣೆ ಆಧಾರದ ಮೇಲೆ ಲಸಿಕೆಯ ಪರಿಣಾಮಕಾರಿತ್ವವನ್ನು ಪ್ರದರ್ಶಿಸಲಾಯಿತು. ಪ್ರಯೋಗಗಳ ಸಮಯದಲ್ಲಿ ಯಾವುದೇ ಅನಿರೀಕ್ಷಿತ ಪ್ರತಿಕೂಲ ಘಟನೆಗಳು ನಡೆದಿಲ್ಲ ಎಂದು ರಷ್ಯಾ ಹೇಳಿಕೆ ತಿಳಿಸಿದೆ.

ಆಗಸ್ಟ್ 11 ರಂದು ವಿಶ್ವದ ಮೊದಲ ಕೋವಿಡ್ -19 ಲಸಿಕೆಯನ್ನು ನೋಂದಾಯಿಸಿದ ಮೊದಲ ದೇಶ ಎಂಬ ಹೆಗ್ಗಳಿಕೆಗೆ ರಷ್ಯಾ ಪಾತ್ರವಾಯಿತು. ರಷ್ಯಾದ ಆರೋಗ್ಯ ಸಚಿವಾಲಯ ವ್ಯಾಪ್ತಿಯ ಗಮಾಲಿಯಾ ನ್ಯಾಷನಲ್ ರಿಸರ್ಚ್​ ಸೆಂಟರ್​ ಫಾರ್ ಎಪಿಡೆಮಿಯೋಲಜಿ ಆ್ಯಂಡ್ ಮೈಕ್ರೋ ಬಯಾಲಜಿ  ಸಂಸ್ಥೆ ಈ ಸ್ಪುಟ್ನಿಕ್ ವಿಲಸಿಕೆ ತಯಾರಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

ಕೃಷ್ಣಾ ಮೇಲ್ದಂಡೆ ಯೋಜನೆ-3: ಸರ್ವಪಕ್ಷ ನಾಯಕರೊಂದಿಗೆ ಶೀಘ್ರದಲ್ಲೇ ಸಭೆ; ಡಿಕೆ.ಶಿವಕುಮಾರ್

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

SCROLL FOR NEXT