ಮರಿಯಮ್ ನವಾಜ್ 
ವಿದೇಶ

ಪಾಕ್ ಪ್ರಧಾನಿ ಇಮ್ರಾನ್ ಖಾನ್ ಯೂಸ್ ಲೆಸ್: ಮರಿಯಮ್ ನವಾಜ್

ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ಅವರು ಒಬ್ಬ "ನಿಷ್ಪ್ರಯೋಜಕ" ವ್ಯಕ್ತಿ ಮತ್ತು ದೇಶದಲ್ಲಿ ಏನು ನಡೆಯುತ್ತಿದೆ ಎಂಬುದರ ಅರಿವು ಇಲ್ಲ. "ಅನಗತ್ಯವಾಗಿ ಗಮನ ಸೆಳೆಯಲು ಪ್ರಯತ್ನಿಸುತ್ತಿದ್ದಾರೆ" ಎಂದು ಪಾಕಿಸ್ತಾನ ಮುಸ್ಲಿಂ ಲೀಗ್-ನವಾಜ್(ಪಿಎಂಎಲ್-ಎನ್)ನ ಉಪಾಧ್ಯಕ್ಷೆ ಮರಿಯಮ್ ನವಾಜ್ ಅವರು ವಾಗ್ದಾಳಿ ನಡೆಸಿದ್ದಾರೆ.

ಕರಾಚಿ: ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ಅವರು ಒಬ್ಬ "ನಿಷ್ಪ್ರಯೋಜಕ" ವ್ಯಕ್ತಿ ಮತ್ತು ದೇಶದಲ್ಲಿ ಏನು ನಡೆಯುತ್ತಿದೆ ಎಂಬುದರ ಅರಿವು ಇಲ್ಲ. "ಅನಗತ್ಯವಾಗಿ ಗಮನ ಸೆಳೆಯಲು ಪ್ರಯತ್ನಿಸುತ್ತಿದ್ದಾರೆ" ಎಂದು ಪಾಕಿಸ್ತಾನ ಮುಸ್ಲಿಂ ಲೀಗ್-ನವಾಜ್(ಪಿಎಂಎಲ್-ಎನ್)ನ ಉಪಾಧ್ಯಕ್ಷೆ ಮರಿಯಮ್ ನವಾಜ್ ಅವರು ವಾಗ್ದಾಳಿ ನಡೆಸಿದ್ದಾರೆ.

ಪಾಕ್ ಆಡಳಿತದಲ್ಲಿ ಇಮ್ರಾನ್ ಖಾನ್ ಪಾತ್ರ ನಿಷ್ಪ್ರಯೋಜಕವಾಗಿದೆ. ಅವರನ್ನು ಯಾರೊಬ್ಬರೂ ಗಂಭೀರವಾಗಿ ಪರಿಗಣಿಸುತ್ತಿಲ್ಲ ಎಂದು ಮರಿಯಮ್ ಆರೋಪಿಸಿರುವುದಾಗಿ ಜಿಯೋ ನ್ಯೂಸ್ ವರದಿ ಮಾಡಿದೆ.

ಕರಾಚಿಯ ಘಟನೆಯ ಬಗ್ಗೆ ಮಾತನಾಡಿದ ಮರಿಯಮ್ ಅವರು, ನಾವಿದ್ದ ಕೋಣೆಯ ಬಾಗಿಲನ್ನು ಮುರಿದು ಹಾಕಿ ಪತಿಯನ್ನು ಬಂಧಿಸಿದ್ದರು. ಸಿಂಧ್ ಪ್ರಾಂತ್ಯದ ಐಜಿಪಿಯನ್ನು ಅಪಹರಿಸಿದ್ದರು. ಇಷ್ಟಾದರೂ ಪ್ರಧಾನಿ ಇಮ್ರಾನ್ ಖಾನ್ ಅವರಿಗೆ ದೇಶದಲ್ಲಿ ಏನು ನಡೆಯುತ್ತಿದ್ದ ಎಂಬುದು ಗೊತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇಮ್ರಾನ್ ಖಾನ್ ಅವರು ಯೋಗ್ಯರು ಎಂದು ಯಾರೂ ಭಾವಿಸಿವುದಿಲ್ಲ. ಪಾಕಿಸ್ತಾನದ ಎಲ್ಲಾ ಸಮಸ್ಯೆಗಳು ಮತ್ತು ಕಾಯಿಲೆಗಳಿಗೆ ಒಂದೇ ಒಂದು ಪರಿಹಾರವಿದೆ. ಅದು ಇಮ್ರಾನ್ ಖಾನ್ ಮತ್ತು ಅವರ ನಕಲಿ ಸರ್ಕಾರವನ್ನು ಮನೆಗೆ ಕಳುಹಿಸುವುದು ಎಂದು ಪಿಎಂಎಲ್-ಎನ್ ನಾಯಕಿ ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

Ragigudda Metro ಮೆಟ್ರೋ ನಿಲ್ದಾಣದಲ್ಲಿ ತಪ್ಪಿದ ದುರಂತ, ಆಯತಪ್ಪಿ ಹಳಿ ಮೇಲೆ ಬಿದ್ದ ಸಿಬ್ಬಂದಿ!... ಮುಂದೇನಾಯ್ತು? Video

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

SCROLL FOR NEXT