ಸಂಗ್ರಹ ಚಿತ್ರ 
ವಿದೇಶ

ಗಡಿ ಜಟಾಪಟಿ ನಡುವೆ ಟಿಬೆಟ್'ನಲ್ಲಿ ಬ್ರಹ್ಮಪುತ್ರ ನದಿಗೆ ಬೃಹತ್ ಅಣೆಕಟ್ಟು ನಿರ್ಮಾಣಕ್ಕೆ ಚೀನಾ ಮುಂದು!

ಸಿಕ್ಕಿಂ ಗಡಿಯಲ್ಲಿ ಬರುವ ಡೋಕ್ಲಾಮ್ ಗಡಿ ವಿವಾದ ಆರಂಭವಾದಾಗಿನಿಂದಲೂ ಭಾರತದ ವಿರುದ್ಧ ಒಂದಲ್ಲ ಒಂದು ರೀತಿ ಕತ್ತಿ ಮಸೆಯುತ್ತಿರುವ ಚೀನಾ, ಟಿಬೆಟ್'ನಲ್ಲಿ ಬ್ರಹ್ಮಪುತ್ರ ನದಿಗೆ ಬೃಹತ್ ಜಲವಿದ್ಯುತ್ ಯೋಜನೆ ನಿರ್ಮಿಸಲು ಮುಂದಾಗಿದೆ ಎಂದು ತಿಳಿದುಬಂದಿದೆ. 

ಬೀಜಿಂಗ್: ಸಿಕ್ಕಿಂ ಗಡಿಯಲ್ಲಿ ಬರುವ ಡೋಕ್ಲಾಮ್ ಗಡಿ ವಿವಾದ ಆರಂಭವಾದಾಗಿನಿಂದಲೂ ಭಾರತದ ವಿರುದ್ಧ ಒಂದಲ್ಲ ಒಂದು ರೀತಿ ಕತ್ತಿ ಮಸೆಯುತ್ತಿರುವ ಚೀನಾ, ಟಿಬೆಟ್'ನಲ್ಲಿ ಬ್ರಹ್ಮಪುತ್ರ ನದಿಗೆ ಬೃಹತ್ ಜಲವಿದ್ಯುತ್ ಯೋಜನೆ ನಿರ್ಮಿಸಲು ಮುಂದಾಗಿದೆ ಎಂದು ತಿಳಿದುಬಂದಿದೆ. 

ಚೀನಾದ 14ನೇ ಪಂಚವಾರ್ಷಿಕ ಯೋಜನೆಯ ಭಾಗವಾಗಿ ಈ ಪ್ರಸ್ತಾವನ್ನು ಮುಂದುರಿಸಲಾಗಿದ್ದು, ಮುಂದಿನ ವರ್ಷ ಅನುಷ್ಠಾನಕ್ಕೆ ಬರಲಿದೆ ಎಂದು ಹೇಳಲಾಗುತ್ತಿದೆ. 

ಬ್ರಹ್ಮಪುತ್ರ ನದಿಗೆ ಅಡ್ಡಲಾಗಿ ಟಿಬೆಟ್'ನಲ್ಲಿ ಚೀನಾ ಬೃಹತ್ ಅಣೆಕಟ್ಟು ನಿರ್ಮಿಸಲಿದೆ ಎಂದು ವರದಿಗಳು ತಿಳಿಸಿವೆ. ಯರ್ಲುಂಗ್ ಝಾಂಗ್ಬೊ ನದಿಯ (ಬ್ರಹ್ಮಪುತ್ರ ನದಿಗೆ ಟಿಬೆಟಿಯನ್ ಹೆಸರು) ಕೆಳಹರಿವಿನ ಪ್ರದೇಶವನ್ನು ಜಲವಿದ್ಯುತ್ ಉತ್ಪಾದನೆಗೆ ಬಳಸಿಕೊಳ್ಳಲು ಚೀನಾ ನಿರ್ಧರಿಸಿದೆ ಎಂದು ಚೀನಾದ ವಿದ್ಯುತ್ ಯೋಜನೆ ನಿರ್ಮಾಣ ಸಂಸ್ಧೆಯ ಅಧ್ಯಕ್ಷ ಯಾನ್ ಝೀಯಾಂಗ್ ಹೇಳಿದ್ದಾರೆ. 

ಈ ಯೋಜನೆಯು ಜಲ ಸಂಪನ್ಮೂಲ ನಿರ್ವಹಣೆ ಮತ್ತು ಆಂತರಿಕ ಭದ್ರತೆಗೆ ನೆರವಾಗಲಿದೆ ಎಂದು ಚೀನಾದ ಸರ್ಕಾರಿ ಸ್ವಾಮ್ಯದ ಪತ್ರಿಕೆ ಗ್ಲೋಬಲ್ ಟೈಮ್ಸ್ ವರದಿ ಮಾಡಿದೆ. 

ದೇಶದ 14ನೇ ಪಂಚವಾರ್ಷಿಕ ಯೋಜನೆಯ (2021-2025) ಭಾಗವಾಗಿ ಮತ್ತು ಆಡಳಿತಾರೂಢ ಚೀನಾ ಕಮ್ಯುನಿಸ್ಟ್ ಪಕ್ಷದ ಕೇಂದ್ರ ಸಮಿತಿಯು 2031ರವರೆಗೆ ರೂಪಿಸಿರುವ ದೀರ್ಘಾವಧಿ ಗುರಿಗಳ ಅಡಿಯಲ್ಲಿ ಈ ಪ್ರಸ್ತಾಪವನ್ನು ಸ್ಪಷ್ಟವಾಗಿ ಅನುಷ್ಠಾನಕ್ಕೆ ತರಲಾಗುತ್ತಿದೆ ಎಂದು ಯಾನ್ ಝೀಯಾಂಗ್ ತಿಳಿಸಿದ್ದಾರೆ. 

ಇತಿಹಾಸದಲ್ಲಿ ಇದಕ್ಕೆ ಸಮಾನಾಂತರವಾದದ್ದು ಯಾವುದೂ ಇಲ್ಲ. ಜಲವಿದ್ಯುತ್ ಕೈಗಾರಿಕೆಯಲ್ಲಿ ಚೀನಾಕ್ಕೆ ಇದು ಐತಿಹಾಸಿಕ ಅವಕಾಶವಾಗಿದೆ ಎಂದು ಹೇಳಿದ್ದಾರೆಂದು ವರದಿಗಳು ತಿಳಿಸಿವೆ. 

ಚೀನಾದ ಈ ನಿರ್ಧಾರ ಇದೀಗ ಭಾರತ ಮತ್ತು ಬಾಂಗ್ಲಾದೇಶಕ್ಕೆ ಕಳವಳ ಉಂಟಾಗುವಂತೆ ಮಾಡಿದೆ. ಬ್ರಹ್ಮಪುತ್ರ ನದಿಗೆ ಅಡ್ಡಲಾಗಿ ಟಿಬೆಟ್'ನಲ್ಲಿ ಚೀನಾ ಬೃಹತ್ ಅಣೆಕಟ್ಟು ನಿರ್ಮಿಸಿದ್ದೇ ಆದರೆ, ಬಾಂಗ್ಲಾದೇಶದ ಅನೇಕ ನದಿ ತೀರದ ರಾಜ್ಯಗಳಿಗೆ ಇದು ಅಪಾಯವುಂಟು ಮಾಡುವ ಸಾಧ್ಯತೆಗಳಿವೆ ಎನ್ನಲಾಗುತ್ತಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT