ಸಂಗ್ರಹ ಚಿತ್ರ 
ವಿದೇಶ

ನೈಜೀರಿಯಾದಲ್ಲಿ ನರಮೇಧ: ಉಗ್ರಗಾಮಿಗಳಿಂದ ಸುಮಾರು 110 ರೈತರ ಹತ್ಯೆ

ಈಶಾನ್ಯ ನೈಜೀರಿಯಾದಲ್ಲಿ ನಡೆದ ಘೋರ ಹತ್ಯಾಕಾಂಡದಲ್ಲಿ ಬಹುತೇಕ ರೈತರು ಸೇರಿದಂತೆ 110 ಜನರು ಬಲಿಯಾಗಿದ್ದಾರೆ ಎಂದು ಅಧಿಕಾರಿಗಳು ಭಾನುವಾರ ವರದಿ ಮಾಡಿದ್ದಾರೆ.

ಅಬುಜಾ: ಈಶಾನ್ಯ ನೈಜೀರಿಯಾದಲ್ಲಿ ನಡೆದ ಘೋರ ಹತ್ಯಾಕಾಂಡದಲ್ಲಿ ಬಹುತೇಕ ರೈತರು ಸೇರಿದಂತೆ 110 ಜನರು ಬಲಿಯಾಗಿದ್ದಾರೆ ಎಂದು ಅಧಿಕಾರಿಗಳು ಭಾನುವಾರ ವರದಿ ಮಾಡಿದ್ದಾರೆ.

ವರದಿಗಳಂತೆ, ಸಂಘರ್ಷ ಪೀಡಿತ ಬೊರ್ನೊ ರಾಜ್ಯದ ರಾಜಧಾನಿಯಾದ ಮೈಡುಗುರಿ ಬಳಿಯ ಜೆರೆ ಸ್ಥಳೀಯ ಸರ್ಕಾರಿ ಪ್ರದೇಶದ ಕೊಶೋಬೆ ಗ್ರಾಮ ಮತ್ತು ಇತರ ಗ್ರಾಮೀಣ ಸಮುದಾಯಗಳಲ್ಲಿ ಶನಿವಾರ ಮಧ್ಯಾಹ್ನ ಈ ಹತ್ಯೆಗಳು ನಡೆದಿವೆ ಎಂದು ಅಲ್ ಜಜೀರಾ ಮಾಧ್ಯಮ ವರದಿ ಮಾಡಿದೆ.

‘ಮೋಟಾರ್ ಸೈಕಲ್‌ಗಳಲ್ಲಿ ಶಸ್ತ್ರಸಜ್ಜಿತ ವ್ಯಕ್ತಿಗಳು ಹೊಲಗಳನ್ನು ಕೊಯ್ಲು ಮಾಡುತ್ತಿದ್ದ ನಾಗರಿಕ ಪುರುಷರು ಮತ್ತು ಮಹಿಳೆಯರ ಮೇಲೆ ಕ್ರೂರ ದಾಳಿ ನಡೆಸಿದ್ದಾರೆ.’ ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ. ಅಲ್ಲದೆ, ಅನೇಕ ಮಹಿಳೆಯರನ್ನು ಅಪಹರಿಸಿದ್ದಾರೆ ಎನ್ನಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

SCROLL FOR NEXT