ಕುಲಭೂಷಣ್ ಜಾಧವ್ 
ವಿದೇಶ

ಜಾಧವ್ ಪರ ವಕೀಲರನ್ನು ನೇಮಕ ಮಾಡುವಲ್ಲಿ ಭಾರತ ವಿಫಲ: ಪಾಕಿಸ್ತಾನ

ಕುಲಭೂಷಣ್ ಜಾಧವ್ ಅವರಿಗೆ ಮಿಲಿಟರಿ ನ್ಯಾಯಾಲಯ ವಿಧಿಸಿರುವ ಮರಣದಂಡನೆ ಮರು ಪರಿಶೀಲನೆಗಾಗಿ ವಕೀಲರನ್ನು ನೇಮಕ ಮಾಡುವಲ್ಲಿ ಭಾರತ ವಿಫಲವಾಗಿದೆ  ಎಂದು ಪಾಕಿಸ್ತಾನ ಸರ್ಕಾರ ಅಲ್ಲಿನ ನ್ಯಾಯಾಲಯಕ್ಕೆ ತಿಳಿಸಿದೆ.

ಇಸ್ಲಾಮಾಬಾದ್: ಕುಲಭೂಷಣ್ ಜಾಧವ್ ಅವರಿಗೆ ಮಿಲಿಟರಿ ನ್ಯಾಯಾಲಯ ವಿಧಿಸಿರುವ ಮರಣದಂಡನೆ ಮರು ಪರಿಶೀಲನೆಗಾಗಿ ವಕೀಲರನ್ನು ನೇಮಕ ಮಾಡುವಲ್ಲಿ ಭಾರತ ವಿಫಲವಾಗಿದೆ  ಎಂದು ಪಾಕಿಸ್ತಾನ ಸರ್ಕಾರ ಅಲ್ಲಿನ ನ್ಯಾಯಾಲಯಕ್ಕೆ ತಿಳಿಸಿದೆ.

ಈ ಪ್ರಕರಣದಲ್ಲಿ ಮುಕ್ತ ಮತ್ತು ನ್ಯಾಯಯುತ ವಿಚಾರಣೆಯನ್ನು ಖಚಿತಪಡಿಸಿಕೊಳ್ಳಲು ಜಾಧವ್‌ಗೆ ಭಾರತೀಯ ವಕೀಲರನ್ನು ಎಂಬ ಭಾರತದ ಬೇಡಿಕೆಯನ್ನು ಪಾಕಿಸ್ತಾನ ಗುರುವಾರ ಮತ್ತೊಮ್ಮೆ ತಿರಸ್ಕರಿಸಿದ ನಂತರ ಇದು ನಡೆದಿದೆ.

50 ವರ್ಷದ ನಿವೃತ್ತ ಭಾರತೀಯ ನೌಕಾಪಡೆಯ ಅಧಿಕಾರಿ ಜಾಧವ್‌ಗೆ 2017 ರ ಏಪ್ರಿಲ್‌ನಲ್ಲಿ ಗೂಢ  ಚರ್ಯೆ ಮತ್ತು ಭಯೋತ್ಪಾದನೆ ಆರೋಪದ ಮೇಲೆ ಪಾಕಿಸ್ತಾನದ ಮಿಲಿಟರಿ ನ್ಯಾಯಾಲಯ ಮರಣದಂಡನೆ ವಿಧಿಸಿತ್ತು.

ಅಂತಾರಾಷ್ಟ್ರೀಯ ನ್ಯಾಯಾಲಯದ ತೀರ್ಪಿನ ಬಳಿಕ ಜಾಧವ್‌ ಅವರಿಗೆ ಪಾಕ್‌ ಮಿಲಿಟರಿ ಕೋರ್ಟ್‌ ವಿಧಿಸಿರುವ ಮರಣ ದಂಡನೆ ಶಿಕ್ಷೆ ಜಾರಿಗೊಳಿಸುವುದು ಕಷ್ಟಕರವಾಗಿ ಪರಿಣಮಿಸಿದೆ. ಅವರಿಗೆ ವಿಧಿಸಿರುವ ಶಿಕ್ಷೆ ಮರು ಪರಿಶೀಲಿಸುತ್ತಿರುವ ಇಸ್ಲಾಮಾಬಾದ್‌ ಹೈಕೋರ್ಟ್‌, ಸೂಕ್ತ ವಕೀಲರ ನೇಮಕಕ್ಕೆ ಅವಕಾಶ ನೀಡುವಂತೆ ಸೂಚಿಸಿದೆ.ಮುಂದಿನ ವಿಚಾರಣೆಯನ್ನು ನವೆಂಬರ್ 9ಕ್ಕೆ ನ್ಯಾಯಾಲಯ ಮುಂದೂಡಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: MI vs RCB; ಫಿಲ್ ಸಾಲ್ಟ್, ಕೊಹ್ಲಿ, ಪಾಟಿದಾರ್ ಭರ್ಜರಿ ಬ್ಯಾಟಿಂಗ್, ಮುಂಬೈಗೆ ಗೆಲ್ಲಲು 241 ರನ್ ಬೃಹತ್ ಗುರಿ!

ಅತ್ಯಂತ ಸುಂದರ 'ಮದುವೆ ಹೆಣ್ಣು', 1 ಬಿಲಿಯನ್ ಡಾಲರ್ ಹಣ ಕೊಡಿ: Uganda ಸೇನಾ ಮುಖ್ಯಸ್ಥನ ವಿಚಿತ್ರ ಬೇಡಿಕೆ; Turkey ಬೇಸ್ತು!

ನೀವೇನ್ ಮುಚ್ಚೋದು.. ನಾವೇ ಬಂದ್ ಮಾಡ್ತೀವಿ: Hormuz ಜಲಸಂಧಿ ದಾಟುವ ಹಡಗುಗಳಿಗೆ US ನೌಕಾಪಡೆ ತಡೆ; ಇರಾನ್ ಗೆ ಟ್ರಂಪ್ ಶಾಕ್!

ಪಕ್ಷ ವಿರೋಧಿ ಚಟುವಟಿಕೆ: ಜಬ್ಬಾರ್ ರಾಜೀನಾಮೆ ಬೆನ್ನಲ್ಲೇ ಮತ್ತೊಂದು ಶಾಕ್; KPCC ಅಲ್ಪಸಂಖ್ಯಾತ ಘಟಕವನ್ನೇ ವಿಸರ್ಜಿಸಿದ DK Shivakumar

SCROLL FOR NEXT