ಮೃತದೇಹ ಸಾಗಿಸುತ್ತಿರುವ ಸಂಬಂಧಿಕರು 
ವಿದೇಶ

ಅಫಘಾನಿಸ್ತಾನ: ದೇಶ ತೊರೆಯಲು ವೀಸಾಗಾಗಿ ಮುಗಿಬಿದ್ದ ವೇಳೆ ಕಾಲ್ತುಳಿತ, 11 ಮಂದಿ ಸಾವು

ಅಫಘಾನಿಸ್ತಾನದ ಪೂರ್ವ ನಂಗರ್ಹಾರ್ ಪ್ರಾಂತ್ಯದ ರಾಜಧಾನಿಯಾದ ಜಲಾಲಾಬಾದ್ ನಗರದಲ್ಲಿ ಬುಧವಾರ ಕಾಲ್ತುಳಿತ ಸಂಭವಿಸಿದ್ದು, ಕನಿಷ್ಠ 11 ಮಹಿಳೆಯರು ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕಾಬೂಲ್: ಅಫಘಾನಿಸ್ತಾನದ ಪೂರ್ವ ನಂಗರ್ಹಾರ್ ಪ್ರಾಂತ್ಯದ ರಾಜಧಾನಿಯಾದ ಜಲಾಲಾಬಾದ್ ನಗರದಲ್ಲಿ ಬುಧವಾರ ಕಾಲ್ತುಳಿತ ಸಂಭವಿಸಿದ್ದು, ಕನಿಷ್ಠ 11 ಮಹಿಳೆಯರು ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ದೇಶ ತೊರೆಯಲು ವೀಸಾಗಾಗಿ ಪಾಕಿಸ್ತಾನ ರಾಯಭಾರ ಕಚೇರಿ ಬಳಿ ಸಾವಿರಾರು ಜನ ಸೇರಿದ್ದರು. ಈ ವೇಳೆ ಕಾಲ್ತುಳಿತ ಸಂಭವಿಸಿದ್ದು, ಘಟನೆಯಲ್ಲಿ ಹನ್ನೊಂದು ಜನರು ಸಾವನ್ನಪ್ಪಿದ್ದು, 13 ಮಂದಿ ಗಾಯಗೊಂಡಿದ್ದಾರೆ ಎಂದು ಪ್ರಾಂತೀಯ ಸರ್ಕಾರದ ವಕ್ತಾರ ಅಟೌಲಾ ಖೋಗಿಯಾನಿ ತಿಳಿಸಿದ್ದಾರೆ.

ಸಾವನ್ನಪ್ಪಿದವರಲ್ಲಿ ಹೆಚ್ಚಿನವರು ವೃದ್ಧರಾಗಿದ್ದಾರೆ. ಇವರು ಪಾಕಿಸ್ತಾನಕ್ಕೆ ತೆರಳಲು ವೀಸಾ ಪಡೆಯಲು ಬಂದಿದ್ದರು ಎಂದು ಅವರು ಹೇಳಿದ್ದಾರೆ.

ಪ್ರತ್ಯೇಕ ಘಟನೆಯಲ್ಲಿ, ಉತ್ತರ ಅಫ್ಘಾನಿಸ್ತಾನದಲ್ಲಿ ತಾಲಿಬಾನ್ ಉಗ್ರರು ನಡೆಸಿದ ದಾಳಿಯಲ್ಲಿ ಕನಿಷ್ಠ 34 ಅಫಘಾನ್ ಪೊಲೀಸರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕ ನಾಳೆ ಜಾರಿ: ಕರಡು ಸೂಚನೆ ಹೊರಡಿಸಿದ ಅಮೆರಿಕ

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

ವಿಧಾನಪರಿಷತ್'ಗೆ ನಾಮನಿರ್ದೇಶನ: ನಾಲ್ವರು MLC ಅಭ್ಯರ್ಥಿಗಳು ಹೆಸರು ಬದಲು, ಪಟ್ಟಿಯಲ್ಲಿ TNIE ಮೈಸೂರು ವಿಭಾಗದ ಮುಖ್ಯಸ್ಥನಿಗೆ ಸ್ಥಾನ

ಬಾನು ಮುಷ್ತಾಕ್‌ ದಸರಾ ಉದ್ಘಾಟನೆಗೆ ಆಕ್ಷೇಪ; ಮುಸ್ಲಿಂ ದ್ವೇಷ ಮನಸ್ಥಿತಿಯನ್ನು ಬದಿಗಿಟ್ಟು, ಸಂವಿಧಾನದ ಆಶಯ ಅರ್ಥ ಮಾಡಿಕೊಳ್ಳಿ: ಸಚಿವ ಹೆಚ್.ಸಿ.ಮಹದೇವಪ್ಪ

SCROLL FOR NEXT