ಕ್ಯಾರೋಲಿನ್ ಬ್ರೋಸಾರ್ಡ್-ಹರೀಶ್ ಸಾಳ್ವೆ 
ವಿದೇಶ

65ರ ವಯಸ್ಸಿನಲ್ಲಿ ಮತ್ತೆ ಸಪ್ತಪದಿ ತುಳಿಯಲಿರುವ  ಹಿರಿಯ ವಕೀಲ ಹರೀಶ್ ಸಾಳ್ವೆ

ಪಾಕಿಸ್ತಾನದಲ್ಲಿ ಮರಣದಂಡನೆಗೆ ಗುರಿಯಾಗಿರುವ ಭಾರತದ ಕುಲಭೂಷಣ್ ಜಾಧವ್ ಪ್ರಕರಣದಲ್ಲಿ ಅಂತಾರಾಷ್ಟ್ರೀಯ ನ್ಯಾಯಾಲಯದಲ್ಲಿ ವಾದಿಸಲು ಕೇವಲ 1 ರೂ. ಶುಲ್ಕ ಪಡೆಯುವ ಮೂಲಕ ಸುದ್ದಿಯಾಗಿದ್ದ ಹಿರಿಯ ವಕೀಲ ಹರೀಶ್ ಸಾಳ್ವೆ, ಲಂಡನ್ ಮೂಲದ ಕಲಾವಿದೆಯೊಂದಿಗೆ ಮತ್ತೆ ಸಪ್ತಪದಿ ತುಳಿಯಲು ಸಿದ್ಧತೆ ನಡೆಸಿದ್ದಾರೆ.

ಲಂಡನ್: ಪಾಕಿಸ್ತಾನದಲ್ಲಿ ಮರಣದಂಡನೆಗೆ ಗುರಿಯಾಗಿರುವ ಭಾರತದ ಕುಲಭೂಷಣ್ ಜಾಧವ್ ಪ್ರಕರಣದಲ್ಲಿ ಅಂತಾರಾಷ್ಟ್ರೀಯ ನ್ಯಾಯಾಲಯದಲ್ಲಿ ವಾದಿಸಲು ಕೇವಲ 1 ರೂ. ಶುಲ್ಕ ಪಡೆಯುವ ಮೂಲಕ ಸುದ್ದಿಯಾಗಿದ್ದ ಹಿರಿಯ ವಕೀಲ ಹರೀಶ್ ಸಾಳ್ವೆ, ಲಂಡನ್ ಮೂಲದ ಕಲಾವಿದೆಯೊಂದಿಗೆ ಮತ್ತೆ ಸಪ್ತಪದಿ ತುಳಿಯಲು ಸಿದ್ಧತೆ ನಡೆಸಿದ್ದಾರೆ.

ಮುಂದಿನ ಬುಧವಾರ ನಡೆಯಲಿರುವ ವಿವಾಹದಲ್ಲಿ ಲಂಡನ್ ಮೂಲದ ಕಲಾವಿದೆ ಕ್ಯಾರೋಲಿನ್ ಬ್ರೋಸಾರ್ಡ್ ಅವರನ್ನು ಚರ್ಚ್ನಲ್ಲಿ ಸಾಳ್ವೆ ವರಿಸಲಿದ್ದಾರೆ ಎಂದು ವರದಿಯಾಗಿದೆ.  

ಭಾರತದ ಮಾಜಿ ಸಾಲಿಸಿಟರ್ ಜನರಲ್ ಆಗಿರುವ 65 ವರ್ಷದ ಹರೀಶ್ ಸಾಳ್ವೆ, ಜನವರಿಯಲ್ಲಿ ಇಂಗ್ಲೆಂಡ್ ಮತ್ತು ವೇಲ್ಸ್ನ ಕ್ವೀನ್ಸ್ ಕೌನ್ಸೆಲ್ ಆಗಿ ನೇಮಕವಾಗಿದ್ದರು. ಸಾಳ್ವೆ ಅವರು ಉತ್ತರ ಲಂಡನ್ ನಲ್ಲಿ ನೆಲೆಸಿದ್ದು, ಚಿತ್ರಕಲಾ ಕಾರ್ಯಕ್ರಮವೊಂದರಲ್ಲಿ ಕ್ಯಾರೋಲಿನ್ ಅವರನ್ನು ಭೇಟಿಯಾಗಿದ್ದರು. ಸುಮಾರು ಒಂದು ವರ್ಷಗಳಿಂದ ಇಬ್ಬರೂ ಪರಿಚಿತರಾಗಿದ್ದಾರೆ.

ಬ್ರಿಟನ್ನಲ್ಲಿ ಜನಿಸಿದ ಕ್ಯಾರೋಲಿನ್ ಅವರಿಗೆ 18 ವರ್ಷದ ಮಗಳಿದ್ದಾಳೆ. ಕಲೆಯ ಜತೆಗೆ ತಮ್ಮಿಬ್ಬರಿಗೂ ರಂಗಭೂಮಿ ಹಾಗೂ ಶಾಸ್ತ್ರೀಯ ಸಂಗೀತದ ಬಗ್ಗೆ ಒಂದೇ ರೀತಿಯ ಅಭಿರುಚಿ ಇದೆ ಎಂದೂ ಸಾಳ್ವೆ ತಿಳಿಸಿದ್ದಾರೆ. ಲಂಡನ್ ನಲ್ಲಿ 15 ಜನರು ಮಾತ್ರವೇ ಸೇರಲು ಅವಕಾಶ ಇರುವುದರಿಂದ ಈ ಮದುವೆ ಅತ್ಯಂತ ಸರಳವಾಗಿ ನಡೆಯಲಿದೆ.

ಸಾಳ್ವೆ ಅವರು ಕಳೆದ ಜೂನ್ ತಿಂಗಳಲ್ಲೇ ಮೊದಲ ಪತ್ನಿ ಮೀನಾಕ್ಷಿ ಸಾಳ್ವೆ ಅವರಿಗೆ ವಿಚ್ಛೇದನ ನೀಡಿದ್ದರು. ಈ ದಂಪತಿಗೆ ಇಬ್ಬರು ಹೆಣ್ಣುಮಕ್ಕಳಿದ್ದಾರೆ. ಮೊದಲ ಮಗಳು 37 ವರ್ಷದ ಸಾಕ್ಷಿ, ಎರಡನೇ ಮಗಳು 33 ವರ್ಷದ ಸಾನಿಯಾ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT