ಸಾಂದರ್ಭಿಕ ಚಿತ್ರ 
ವಿದೇಶ

ಪಾಕಿಸ್ತಾನದ ಪೇಶಾವರದಲ್ಲಿ ಮಸೀದಿ ಪಕ್ಕ ಬಾಂಬ್ ಸ್ಫೋಟ: ಕನಿಷ್ಠ 7 ಸಾವು, 70 ಮಂದಿಗೆ ಗಾಯ

ವಾಯುವ್ಯ ಪಾಕಿಸ್ತಾನ ನಗರ ಪೇಶಾವರದ ಹೊರವಲಯದಲ್ಲಿ ಮಂಗಳವಾರ ಬೆಳಗಿನ ಜಾವ ಪ್ರಬಲ ಬಾಂಬ್ ಸ್ಫೋಟವಾಗಿದ್ದು ಕನಿಷ್ಠ ಏಳು ಮಕ್ಕಳು ಮೃತಪಟ್ಟು 70 ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ಹಾಗೂ ಆಸ್ಪತ್ರೆಯ ವಕ್ತಾರರು ತಿಳಿಸಿದ್ದಾರೆ.

ಪೇಶಾವರ್: ವಾಯುವ್ಯ ಪಾಕಿಸ್ತಾನ ನಗರ ಪೇಶಾವರದ ಹೊರವಲಯದಲ್ಲಿ ಮಂಗಳವಾರ ಬೆಳಗಿನ ಜಾವ ಪ್ರಬಲ ಬಾಂಬ್ ಸ್ಫೋಟವಾಗಿದ್ದು ಕನಿಷ್ಠ ಏಳು ಮಕ್ಕಳು ಮೃತಪಟ್ಟು 70 ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ಹಾಗೂ ಆಸ್ಪತ್ರೆಯ ವಕ್ತಾರರು ತಿಳಿಸಿದ್ದಾರೆ.

ಜಮಿಯಾ ಝುಬೈರಿಯಾ ಮದ್ರಸಾದಲ್ಲಿ ಇಸ್ಲಾಂ ಬಗ್ಗೆ ಪಾದ್ರಿಯೊಬ್ಬರು ಮಕ್ಕಳಿಗೆ ಉಪನ್ಯಾಸ ನೀಡುತ್ತಿದ್ದ ವೇಳೆ ಬಾಂಬ್ ಸ್ಫೋಟಗೊಂಡಿದೆ ಎಂದು ಪೊಲೀಸ್ ಅಧಿಕಾರಿ ವಖರ್ ಅಜಿಮ್ ಹೇಳಿದ್ದು, ಯಾರೋ ಮದ್ರಸಾದಲ್ಲಿ ಬ್ಯಾಗ್ ನ್ನು ಬಿಟ್ಟು ಹೋದ ಸ್ವಲ್ಪ ಹೊತ್ತಿನಲ್ಲಿ ಬಾಂಬ್ ಸ್ಫೋಟಗೊಂಡಿದೆ ಎಂದು ಆರಂಭಿಕ ತನಿಖೆಯಿಂದ ತಿಳಿದುಬಂದಿದೆ ಎಂದರು.

ಗಾಯಗೊಂಡವರಲ್ಲಿ ಹಲವರ ಸ್ಥಿತಿ ಗಂಭೀರವಾಗಿದ್ದು ಸಾವಿನ ಸಂಖ್ಯೆ ಮತ್ತಷ್ಟು ಏರಿಕೆಯಾಗುವ ಸಾಧ್ಯತೆಯಿದೆ ಎಂದು ಆಸ್ಪತ್ರೆಗಳ ಅಧಿಕಾರಿಗಳು ತಿಳಿಸಿದ್ದಾರೆ.

ಪಾಕಿಸ್ತಾನದ ಖೈಬರ್ ಪಕ್ತುಂಖ್ವಾ ಪ್ರಾಂತ್ಯದ ರಾಜಧಾನಿ ಪೇಶಾವರ ಆಗಿದ್ದು, ಇಲ್ಲಿ ಇತ್ತೀಚಿನ ವರ್ಷಗಳಲ್ಲಿ ಹಲವು ಉಗ್ರರ ದಾಳಿಗಳು ನಡೆಯುತ್ತಿವೆ, ಆದರೆ ಪಂಥೀಯ ಹಿಂಸಾಚಾರವು ಪಾಕಿಸ್ತಾನದಾದ್ಯಂತ ಮಸೀದಿಗಳು ಅಥವಾ ಸೆಮಿನರಿಗಳಲ್ಲಿ ಜನರನ್ನು ಕೊಂದು, ಗಾಯಗೊಳಿಸಿವೆ.

ಖ್ವೆಟ್ಟಾದ ನೈರುತ್ಯ ಸಿಟಿಯಲ್ಲಿ ಬಾಂಬ್ ದಾಳಿ ನಡೆದು ಮೂವರು ಮೃತಪಟ್ಟ ನಂತರ ಈ ದಾಳಿ ನಡೆದಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

Watch| Traffic Fine ಗೆ ಶೇ.50 ರಷ್ಟು ರಿಯಾಯಿತಿ; ವಂಚಕರಿಂದ ಮೋಸಹೋದ ಟೆಕ್ಕಿ!; Dharmasthala Case: ಮಹೇಶ್ ಶೆಟ್ಟಿ ತಿಮರೋಡಿ ಮನೆಯಲ್ಲಿ SIT ದಾಳಿ; ಮೊಬೈಲ್ ವಶಕ್ಕೆ!

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

SCROLL FOR NEXT