ಪೊಲೀಸರು 
ವಿದೇಶ

ಫ್ರಾನ್ಸ್: ಚರ್ಚ್ ಬಳಿ ಆಗಂತುಕನಿಂದ ಚೂರಿ ಇರಿತ; ಮಹಿಳೆಯ ಶಿರಚ್ಛೇದ, 3 ಸಾವು, ಭಯೋತ್ಪಾದನೆ ಶಂಕೆ!

ಪ್ರವಾದಿ ಮೊಹಮ್ಮದ್ ಪೈಗಂಬರ್ ರನ್ನು ನಿಂದಿಸಿದ್ದರು ಎಂಬ ಕಾರಣಕ್ಕೆ ಶಿಕ್ಷಕನೋರ್ವನ ಕತ್ತು ಕತ್ತರಿಸಿ ಹತ್ಯೆ ಮಾಡಲಾಗಿತ್ತು. ಇದಾದ ಬಳಿಕ ಫ್ರಾನ್ಸ್ ನಲ್ಲಿ ಪರಿಸ್ಥಿತಿ ಉದ್ವಿಗ್ನಕ್ಕೆ ತಿರುಗಿತ್ತು. 

ಪ್ಯಾರಿಸ್: ಪ್ರವಾದಿ ಮೊಹಮ್ಮದ್ ಪೈಗಂಬರ್ ರನ್ನು ನಿಂದಿಸಿದ್ದರು ಎಂಬ ಕಾರಣಕ್ಕೆ ಶಿಕ್ಷಕನೋರ್ವನ ಕತ್ತು ಕತ್ತರಿಸಿ ಹತ್ಯೆ ಮಾಡಲಾಗಿತ್ತು. ಇದಾದ ಬಳಿಕ ಫ್ರಾನ್ಸ್ ನಲ್ಲಿ ಪರಿಸ್ಥಿತಿ ಉದ್ವಿಗ್ನಕ್ಕೆ ತಿರುಗಿತ್ತು. 

ಅಲ್ಲದೆ ಫ್ರಾನ್ಸ್ ಅಧ್ಯಕ್ಷ ಇಮ್ಮಾನ್ಯುವೆಲ್ ಮಾಕ್ರೋನ್ ಅವರು ಪ್ರವಾದಿ ಮೊಹಮ್ಮದ್ ರ ವ್ಯಂಗ್ಯಚಿತ್ರ ಪ್ರದರ್ಶನ ನಿಲ್ಲಿಸುವುದಿಲ್ಲ(will not give up cartoons) ಎಂದು ದೇಶದ ಮುಂದೆ ಪ್ರತಿಜ್ಞೆ ಮಾಡಿದ್ದರು. 

ಇದರ ಬೆನ್ನಲ್ಲೇ ಇದೀಗ ಮೆಡಿಟರೇನಿಯನ್ ಸಿಟಿ ಬಳಿಯ ಚರ್ಚ್ ಬಳಿ ಆಗಂತುಕನೊಬ್ಬ ಚೂರಿಯಿಂದ ಹಲವರ ಮೇಲೆ ದಾಳಿ ನಡೆಸಿದ್ದಾನೆ. ಮಹಿಳೆಯ ಶಿರಚ್ಛೇಧ ಮಾಡಿದ್ದಾನೆ. ಇನ್ನಿಬ್ಬರು ಚೂರಿ ಇರಿತದಿಂದ ಮೃತಪಟ್ಟಿದ್ದಾರೆ. ದಾಳಿಯ ಕುರಿತಂತೆ ಫ್ರೆಂಚ್ ಭಯೋತ್ಪಾದನೆ ವಿರೋಧಿ ಅಭಿಯೋಜಕರರು ತನಿಖೆ ಕೈಗೊಂಡಿದ್ದಾರೆ. 

ನೊಟ್ರೆ ಡೇಮ್ ಚರ್ಚ್‌ ಬಳಿ ಗುರುವಾರ ಬೆಳಿಗ್ಗೆ ನಡೆದ ದಾಳಿಯ ನಂತರ ಹಲ್ಲೆಕೋರನನ್ನು ಬಂಧಿಸಲಾಗಿದೆ. ಬಂಧನದ ವೇಳೆ ಹಲ್ಲೆಕೋರ ಗಾಯಗೊಂಡಿದ್ದರಿಂದ ಆತನನ್ನು ಹತ್ತಿರದ ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಘಟನೆ ಸಂಬಂಧ ಭಯೋತ್ಪಾದನೆಯ ನಂಟಿನ ಕುರಿತಂತೆ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ. 

ಶಿಕ್ಷಕ ಸ್ಯಾಮ್ಯುಯೆಲ್ ಪ್ಯಾಟಿ ವಾಕ್ ಸ್ವಾತಂತ್ರ್ಯದ ಬಗ್ಗೆ ವಿದ್ಯಾರ್ಥಿಗಳಿಗೆ ಭೋದನೆ ಮಾಡುತ್ತಿದ್ದರು. ಇಸ್ಲಾಂ ಧರ್ಮದ ಪ್ರವಾದಿ ಮೊಹಮ್ಮದ್ ಪೈಗಂಬರ್ ಅವರ ಚಿತ್ರದ ಬಗ್ಗೆ ಚರ್ಚೆ ನಡೆಸಿದ್ದರು. ಇದರಿಂದ ಆಕ್ರೋಶಗೊಂಡ ಯುವಕನೋರ್ವ ಶಿಕ್ಷಕನ ಕತ್ತು ಕತ್ತರಿಸಿ ಕೊಂದು ಹಾಕಿದ್ದ. ನಂತರ ಪೊಲೀಸರು ಹಂತಕನಿಗೆ ಗುಂಡು ಹಾರಿಸಿ ಹತ್ಯೆ ಮಾಡಿದ್ದರು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

Indian Stock Market: ಸತತ ಕುಸಿತ, ಬರೊಬ್ಬರಿ ಶೇ.1ರಷ್ಟು ಕುಸಿದ Sensex, Nifty 50, ರೂಪಾಯಿ ಮೌಲ್ಯ ಇಳಿಕೆ!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

SCROLL FOR NEXT