ಫವಾದ್ ಚೌಧರಿ 
ವಿದೇಶ

ಪುಲ್ವಾಮ ದಾಳಿ ನಾವು ಮಾಡಿದ್ದು ಎಂದು ಹೇಳಿಯೇ ಇಲ್ಲ, ನನ್ನ ಹೇಳಿಕೆಯನ್ನು ತಿರುಚಲಾಗಿದೆ: ಪಾಕ್ ಸಚಿವ ಚೌಧರಿ ಯು ಟರ್ನ್!

ಪಾಕಿಸ್ತಾನ ಭಯೋತ್ಪಾದನೆಯನ್ನು ಪ್ರೋತ್ಸಾಹಿಸುವುದಿಲ್ಲ, ಪುಲ್ವಾಮಾ ದಾಳಿ ಕುರಿತು ತಾವು ನೀಡಿರುವ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಲಾಗಿದೆ ಎಂದು ಪಾಕಿಸ್ತಾನ ಸಚಿವ ಫವಾದ್ ಚೌಧರಿ ಯು ಟರ್ನ್ ಹೊಡೆದಿದ್ದಾರೆ.

ನವದೆಹಲಿ: ಪಾಕಿಸ್ತಾನ ಭಯೋತ್ಪಾದನೆಯನ್ನು ಪ್ರೋತ್ಸಾಹಿಸುವುದಿಲ್ಲ, ಪುಲ್ವಾಮಾ ದಾಳಿ ಕುರಿತು ತಾವು ನೀಡಿರುವ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಲಾಗಿದೆ ಎಂದು ಪಾಕಿಸ್ತಾನ ಸಚಿವ ಫವಾದ್ ಚೌಧರಿ ಯು ಟರ್ನ್ ಹೊಡೆದಿದ್ದಾರೆ.

ಪುಲ್ವಾಮಾ ದಾಳಿ, ಬಾಲಾಕೋಟ್ ವಾಯುದಾಳಿ, ವಿಂಗ್ ಕಮಾಂಡರ್ ಅಭಿನಂದನ್ ವರ್ತಮಾನ್ ಬಿಡುಗಡೆ ಮಾಧ್ಯಮಗಳಲ್ಲಿ ಭಾರೀ ಸುದ್ದಿಯಾಗಿತ್ತು. ಪುಲ್ವಾಮಾ ದಾಳಿಯನ್ನು ನಾವೇ ಮಾಡಿಸಿದ್ದು ಎಂದು ಪಾಕಿಸ್ತಾನ ಒಪ್ಪಿಕೊಂಡಿತ್ತು ಕೂಡ.

ಆದರೆ ನಿನ್ನೆ ಸುದ್ದಿವಾಹಿನಿಯೊಂದಕ್ಕೆ ಪ್ರತಿಕ್ರಿಯಿಸಿದ ಫವಾದ್ ಚೌಧರಿ, ನನ್ನ ಹೇಳಿಕೆ ಸ್ಪಷ್ಟವಾಗಿದೆ, ನಾನು ಮಾತನಾಡಿದ್ದು ಆಪರೇಷನ್ ಸ್ವಿಫ್ಟ್ ರೆಸಾರ್ಟ್ ಬಗ್ಗೆ ಪುಲ್ವಾಮಾ ದಾಳಿಯ ನಂತರ ಪಾಕಿಸ್ತಾನ ನಡೆಸಿದ ಕಾರ್ಯಾಚರಣೆ ಬಗ್ಗೆ. ಬಾಲಾಕೋಟ್ ನಲ್ಲಿ ಪಾಕಿಸ್ತಾನ ಪ್ರಾಂತ್ಯದೊಳಗೆ ಭಾರತ ನುಗ್ಗಲು ಪ್ರವೇಶಿಸಿದಾಗ ನಾವು ಆಪರೇಷನ್ ಸ್ವಿಫ್ಟ್ ರೆಸಾರ್ಟ್ ಗೆ ಪ್ರಯತ್ನಿಸಿದೆವು. ಮೇಲ್ನೋಟದಿಂದ ಆ ಬಗ್ಗೆ ಮಾತನಾಡುವಾಗ ಪುಲ್ವಾಮಾ ಹೆಸರು ಬಳಸಿಕೊಂಡೆ ಅಷ್ಟೆ ಎಂದಿದ್ದಾರೆ.

ಚೌಧರಿಯವರ ಹೇಳಿಕೆ ನಿನ್ನೆ ಪಾಕಿಸ್ತಾನ ನ್ಯಾಶನಲ್ ಅಸೆಂಬ್ಲಿಯಲ್ಲಿ ತೀವ್ರ ಕೋಲಾಹಲವೆಬ್ಬಿಸಿತ್ತು. ಇದಾದ ಬಳಿಕ ಟ್ವೀಟ್ ಮೂಲಕ ಸ್ಪಷ್ಟನೆ ನೀಡಿರುವ ಚೌಧರಿ, ನಮ್ಮ ಯುದ್ಧ ವಿಮಾನ ಭಾರತದ ಯುದ್ಧ ವಿಮಾನದ ಗುರಿಯನ್ನು ಕೆಡವಿ ಹಾಕಲು ಯತ್ನಿಸಿತಷ್ಟೆ, ನಾವು ಮುಗ್ಧ ನಾಗರಿಕರನ್ನು ಕೊಲ್ಲುವ ಮನಸ್ಥಿತಿ ಹೊಂದಿಲ್ಲ, ಭಯೋತ್ಪಾದನೆಗೆ ನಮ್ಮ ಬೆಂಬಲವಿಲ್ಲ ಎಂದಿದ್ದಾರೆ.

ಪಾಕಿಸ್ತಾನದ ವಿರೋಧ ಪಕ್ಷದ ನಾಯಕ ಅಯಾಜ್ ಸಾದಿಕ್ ಅವರು ಶಾ ಮೊಹಮ್ಮದ್ ಖುರೇಷಿ ಮತ್ತು ಸೇನಾ ಮುಖ್ಯಸ್ಥ ಜನರಲ್ ಖಮರ್ ಜಾವೇದ್ ಬಜ್ವಾ ಅವರ ನಡುವೆ ಕ್ಯಾಪ್ಟನ್ ಅಭಿನಂದನ್ ವರ್ತಮಾನ್ ಬಿಡುಗಡೆ ಕುರಿತು ನಡೆದ ಮಾತುಕತೆಯನ್ನು ಬಹಿರಂಗಗೊಳಿಸಿದ ನಂತರ ಫವಾದ್ ಚೌಧರಿ ಈ ಹೇಳಿಕೆ ನೀಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

SCROLL FOR NEXT