ಅಗ್ನಿ ಅವಘಡದಲ್ಲಿ ಗಾಯಗೊಂಡ ವ್ಯಕ್ತಿಯನ್ನು ರಕ್ಷಣೆ ಮಾಡುತ್ತಿರುವ ಸಿಬ್ಬಂದಿಗಳು 
ವಿದೇಶ

ಇಂಡಿಯನ್ ಆಯಿಲ್'ಗೆ ಸೇರಿದ ಹಡಗಿನಲ್ಲಿ ಭಾರೀ ಅಗ್ನಿ ಅವಘಡ: ಬೆಂಕಿ ನಂದಿಸುವ ವೇಳೆ ಬಾಯ್ಲರ್ ಸ್ಫೋಟ, ಓರ್ವ ಸಿಬ್ಬಂದಿ ಸಾವು

ಭಾರತದ ಪ್ರಮುಖ ಪೆಟ್ರೋಲ್ ಸಂಸ್ಕರಣಾ ಕಂಪನಿಯಾದ ಇಂಡಿಯನ್ ಆಯಿಲ್ ಕಾರ್ಪೊರೇಷನ್'ಗೆ ಸೇರಿದ ಹಗಡಿನಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿದ್ದು, ಬೆಂಕಿ ನಂದಿಸುವ ವೇಳೆ ಬಾಯ್ಲರ್ ಸ್ಫೋಟಗೊಂಡ ಪರಿಣಾಮ ಫಿಲಿಪ್ಪೀನ್ಸ್ ಮೂಲದ ಸಿಬ್ಬಂದಿಯೊಬ್ಬರು ಸಾವನ್ನಪ್ಪಿರುವ ಘಟನೆ ಶ್ರೀಲಂಕಾದ ಸಮುದ್ರದ ದಂಡೆಯಲ್ಲಿ ನಡೆದಿದೆ. 

ಕೊಲಂಬೋ: ಭಾರತದ ಪ್ರಮುಖ ಪೆಟ್ರೋಲ್ ಸಂಸ್ಕರಣಾ ಕಂಪನಿಯಾದ ಇಂಡಿಯನ್ ಆಯಿಲ್ ಕಾರ್ಪೊರೇಷನ್'ಗೆ ಸೇರಿದ ಹಗಡಿನಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿದ್ದು, ಬೆಂಕಿ ನಂದಿಸುವ ವೇಳೆ ಬಾಯ್ಲರ್ ಸ್ಫೋಟಗೊಂಡ ಪರಿಣಾಮ ಫಿಲಿಪ್ಪೀನ್ಸ್ ಮೂಲದ ಸಿಬ್ಬಂದಿಯೊಬ್ಬರು ಸಾವನ್ನಪ್ಪಿರುವ ಘಟನೆ ಶ್ರೀಲಂಕಾದ ಸಮುದ್ರದ ದಂಡೆಯಲ್ಲಿ ನಡೆದಿದೆ. 

20ಲಕ್ಷ ಬ್ಯಾರಲ್‌ ಆಯಿಲ್‌ ಹೊತ್ತು ತರುತ್ತಿದ್ದ ನ್ಯೂ ಡೈಮಂಡ್‌ ಹೆಸರಿನ ಟ್ಯಾಂಕರ್'ನಲ್ಲಿ ಬೆಂಕಿ ಹೊತ್ತುಕೊಂಡಿದ್ದು, ಬೆಂಕಿ ನಂದಿಸಲು ಭಾರತ ಹಾಗೂ ಶ್ರೀಲಂಕಾದ ನೌಕಾಪಡೆಗಳು ಹರಸಾಹಸ ಪಡುತ್ತಿದೆ ಎಂದು ತಿಳಿದುಬಂದಿದೆ. 

ಇಂಡಿಯನ್ ಆಯಿಲ್ ಕಾರ್ಪೊರೇಷನ್'ಗೆ ಸೇರಿದ ಈ ಹಡಗಿನಲ್ಲಿ ಗುರುವಾರ ಬೆಳಗಿನ ಜಾವ ಬೆಂಕಿ ಕಾಣಿಸಿಕೊಂಡಿತ್ತು. ಅಗ್ನಿ ಅವಘಡ ಸಂಭವಿಸುವ ವೇಳೆ ಹಡಗಿನಲ್ಲಿ 23 ಸಿಬ್ಬಂದಿಗಳಿದ್ದರು ಎಂದು ಹೇಳಲಾಗುತ್ತಿದೆ. ಈಗಡೂ ಹಡಗಿನಲ್ಲಿ ಬೆಂಕಿ ಹೊತ್ತಿ ಉರಿಯುತ್ತಲೇ ಇದ್ದು. ಬೆಂಕಿ ಕೆನ್ನಾಲಿಗೆ ಇಡೀ ಹಡಗಿಗೆ ವ್ಯಾಪಿಸಿಕೊಂಡಿದೆ ಎಂದು ಹೇಳಲಾಗುತ್ತಿದೆ. 

ಬೆಂಕಿ ನಂದಿಸುವ ವೇಳೆ ಹಡಗಿನಲ್ಲಿದ್ದ ಫಿಲಿಪ್ಪೀನ್ಸ್ ಮೂಲಕ ಸಿಬ್ಬಂದಿಯೊಬ್ಬರು ಗಾಯಗೊಂಡಿದ್ದರು. ಈ ವೇಳೆ ಬಾಯ್ಲರ್ ಸ್ಫೋಟಗೊಂಡ ಪರಿಣಾಮ ವ್ಯಕ್ತಿ ಸಾವನ್ನಪ್ಪಿದ್ದಾರೆಂದು ಮೂಲಗಳಿಂದ ತಿಳಿದುಬಂದಿದೆ. 

ಹಡಗಿನಲ್ಲಿ 18 ಫಿಲಿಪ್ಪೀನ್ಸ್‌ ಹಾಗೂ 5 ಗ್ರೀಕ್‌ ಮೂಲದ ಸಿಬ್ಬಂದಿಗಳಿದ್ದರು. ಇವರಲ್ಲಿ ಓರ್ವನನ್ನು ಏರ್‌ಲಿಫ್ಟ್ ಮಾಡಲಾಗಿದ್ದು, ಉಳಿದವರನ್ನೂ ಪತ್ತೆ ಹಚ್ಚಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಈ ಹಡಗು ಕುವೈತ್‌ನ ಮಿನಾ ಅಲ್‌ ಅಹ್ಮದಿ ಬಂದರ್‌ನಿಂದ ಕಚ್ಚಾತೈಲ ಹೊತ್ತು ಭಾರತದ ಪರಾದೀಪ್‌ ಬಂದರಿನತ್ತ ಹೊರಟಿತ್ತು. ಇಲ್ಲಿ ಇಂಡಿಯನ್‌ ಆಯಿಲ್‌ಗೆ ಸೇರಿದ ತೈಲ ಸಂಸ್ಕರಣ ಘಟಕವಿದೆ ಎಂದು ಹೇಳಲಾಗುತ್ತಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಯುಕ್ರೇನ್-ರಷ್ಯಾ ಶಾಂತಿ ಒಪ್ಪಂದ ಸನಿಹ: ಸುಳಿವು ನೀಡಿದ ಯುಕ್ರೇನ್

2026 T20 ವಿಶ್ವಕಪ್: ಕೊಲಂಬೋದಲ್ಲಿ ಫೆ.15 ರಂದು ಭಾರತ- ಪಾಕ್ ಪಂದ್ಯ

ಕಾರು ಅಪಘಾತದಲ್ಲಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸೇರಿ ಮೂವರು ಸಾವು: ಸಿಎಂ, ಡಿಸಿಎಂ ಸಂತಾಪ

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ರಾಸಾಯನಿಕಗಳು, ಎಲೆಕ್ಟ್ರಾನಿಕ್ ಘಟಕಗಳ ಸುಲಭ ಲಭ್ಯತೆಯಿಂದ ಐಇಡಿ ಅಪಾಯ ಹೆಚ್ಚು: NSG

SCROLL FOR NEXT