ಸುಂದರ್ ಪಿಚೈ 
ವಿದೇಶ

ಲೈಂಗಿಕ ಕಿರುಕುಳ ಸಹಿಸಲು ಸಾಧ್ಯವಿಲ್ಲ; ಸಿಇಓ ಸುಂದರ್‌ ಪಿಚ್ಚೈಗೆ ಸಾವಿರಾರು ಉದ್ಯೋಗಿಗಳಿಂದ ಬಹಿರಂಗ ಪತ್ರ!

ಕೆಲಸದ ಸ್ಥಳದಲ್ಲಿ ಲೈಂಗಿಕ ಕಿರುಕುಳ ಸಹಿಸಲು ಸಾಧ್ಯವಾಗುತ್ತಿಲ್ಲ ಎಂದು ಸಾವಿರಾರು ಮಂದಿ ಆಲ್ಫಾಬೆಟ್ ಉದ್ಯೋಗಿಗಳು ಸಿಇಓ ಸುಂದರ್ ಪಿಚ್ಚೈ ಅವರಿಗೆ ಬಹಿರಂಗ ಪತ್ರ ಬರೆದಿದ್ದಾರೆ.

ನವದೆಹಲಿ: ಕೆಲಸದ ಸ್ಥಳದಲ್ಲಿ ಲೈಂಗಿಕ ಕಿರುಕುಳ ಸಹಿಸಲು ಸಾಧ್ಯವಾಗುತ್ತಿಲ್ಲ ಎಂದು ಸಾವಿರಾರು ಮಂದಿ ಆಲ್ಫಾಬೆಟ್ ಉದ್ಯೋಗಿಗಳು ಸಿಇಓ ಸುಂದರ್ ಪಿಚ್ಚೈ ಅವರಿಗೆ ಬಹಿರಂಗ ಪತ್ರ ಬರೆದಿದ್ದಾರೆ. 

ಕೆಲಸ ಮಾಡಲು ಪೂರಕವಾದ ಸುರಕ್ಷಿತ ವಾತಾವರಣ ಸೃಷ್ಟಿಸುವಂತೆ ಅವರು ಕೋರಿದ್ದಾರೆ. ಮಾಜಿ ಮಹಿಳಾ ಉದ್ಯೋಗಿಯೊಬ್ಬರು ಅನುಭವಿಸಿದ ಕಿರುಕುಳ  ಕುರಿತು ಪತ್ರಿಕೆಯೊಂದರಲ್ಲಿ ಪ್ರಕಟಣೆಗೊಂಡ ಸುದ್ದಿಯನ್ನು ಪತ್ರದಲ್ಲಿ ಪ್ರಸ್ತಾಪಿಸಿದ್ದಾರೆ.

ಸುಮಾರು 1,300 ಉದ್ಯೋಗಿಗಳು ಈ ಬಹಿರಂಗ ಪತ್ರವನ್ನು 'ಮೀಡಿಯಾ' ಎಂಬ ಆನ್‌ಲೈನ್ ಬ್ಲಾಗ್‌ನಲ್ಲಿ ಪೋಸ್ಟ್ ಮಾಡಿದ್ದಾರೆ. ಉದ್ಯೋಗಿಗಳ ಹೆಸರನ್ನು ಸಹ ಅದರಲ್ಲಿ ಉಲ್ಲೇಖಿಸಲಾಗಿದೆ. ಲೈಂಗಿಕ ಕಿರುಕುಳದಲ್ಲಿ ಪಾಲ್ಗೊಳ್ಳುವ ವ್ಯಕ್ತಿಗಳನ್ನು ಟೀಮ್ ಲೀಡರ್‌ ಸ್ಥಾನಮಾನದಿಂದ ತೆಗೆದುಹಾಕಬೇಕು, ಅಪರಾಧಿಗಳಿಗೆ ರಕ್ಷಣೆ ನೀಡಬಾರದು ಎಂದು ಒತ್ತಾಯಿಸಿದ್ದಾರೆ. ತಮಗೆ ಲೈಂಗಿಕ ಕಿರುಕುಳ ನೀಡಿದವರೊಂದಿಗೆ ಕೆಲಸ ಮಾಡುವ ಪರಿಸ್ಥಿತಿ ನಿರ್ಮಾಣವಾಗದಂತೆ ತಂಡಗಳನ್ನು ಬದಲಾಯಿಸುವಂತೆ ಕೋರಿದ್ದಾರೆ.

ಕಿರುಕುಳಗಳಿಗೆ ಒಳಗಾದವರನ್ನು ರಕ್ಷಿಸುವ ಬದಲು ಕಿರುಕುಳ ನೀಡಿದವರ ರಕ್ಷಣೆಗೆ ಆಲ್ಫಾಬೆಟ್‌ ಮುಂದಾಗುತ್ತಿರುವುದು ಹೊಸತೇನು ಅಲ್ಲ. ಇದು ಬಹಳ ಹಿಂದಿನಿಂದಲೂ ಮುಂದುವರೆದುಕೊಂಡು ಬಂದಿದೆ ಎಂದು ಆರೋಪಿಸಲಾಗಿದೆ. ತನಗೆ ಕಿರುಕುಳ ನೀಡಿದವರ ವಿರುದ್ದ ದೂರು ನೀಡಿದ ವ್ಯಕ್ತಿ ಆಲ್ಫಾಬೆಟ್‌ ಸಂಸ್ಥೆ ತೊರೆಯುವಂತೆ ಮಾಡಲಾಗುತ್ತಿದೆ. ಹಿಂಸೆ ನೀಡಿದವರು ಆಲ್ಫಾಬೆಟ್‌ ನಲ್ಲಿಯೇ ಮುಂದುವರಿಯುತ್ತಾರೆ. ಅವರಿಗೆ ರಿವಾರ್ಡ್‌ ಸಹ ನೀಡಲಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT