ವಿಶ್ವ ಆರೋಗ್ಯ ಸಂಸ್ಥೆ 
ವಿದೇಶ

ಕೋವಿಡ್-19 ಸೋಂಕು ತಡೆಗೆ ಎಲ್ಲಾ ಕ್ರಮಗಳ ತುರ್ತು ಅಳವಡಿಕೆ ಅತ್ಯಗತ್ಯ: ಡಬ್ಲ್ಯುಎಚ್ ಒ

ಆಗ್ನೇಯ ಏಷ್ಯಾ ಪ್ರದೇಶದ ದೇಶಗಳಲ್ಲಿಕೋವಿಡ್ -19 ಪ್ರಕರಣಗಳು ತೀವ್ರವಾಗಿ ಏರುತ್ತಿರುವುದರಿಂದ,  ಮತ್ತಷ್ಟು ಸೋಂಕುಗಳನ್ನು ತಡೆಗಟ್ಟಲು ಮತ್ತು ಜೀವಗಳನ್ನು ಉಳಿಸಲು ಎಲ್ಲಾ ಸಾಧನಗಳನ್ನು ಬಳಸಿಕೊಳ್ಳುವಂತೆ ವಿಶ್ವ ಆರೋಗ್ಯ ಸಂಸ್ಥೆ ಮನವಿ ಮಾಡಿದೆ.

ನವದೆಹಲಿ: ಆಗ್ನೇಯ ಏಷ್ಯಾ ಪ್ರದೇಶದ ದೇಶಗಳಲ್ಲಿ ಕೋವಿಡ್-19 ಪ್ರಕರಣಗಳು ತೀವ್ರವಾಗಿ ಏರುತ್ತಿರುವುದರಿಂದ, ಮತ್ತಷ್ಟು ಸೋಂಕುಗಳನ್ನು ತಡೆಗಟ್ಟಲು ಮತ್ತು ಜೀವಗಳನ್ನು ಉಳಿಸಲು ಎಲ್ಲಾ ಸಾಧನಗಳನ್ನು ಬಳಸಿಕೊಳ್ಳುವಂತೆ ವಿಶ್ವ ಆರೋಗ್ಯ ಸಂಸ್ಥೆ ಮನವಿ ಮಾಡಿದೆ.

ಡಬ್ಲ್ಯುಎಚ್ ಒ ಆಗ್ನೇಯ ಏಷ್ಯಾ ಪ್ರದೇಶದ ಪ್ರಾದೇಶಿಕ ನಿರ್ದೇಶಕ ಡಾ.ಪೂನಂ ಖೇತ್ರಪಾಲ್ ಸಿಂಗ್, ಕಳೆದ ಹಲವಾರು ವಾರಗಳಿಂದ ಪ್ರಕರಣಗಳು ಹೆಚ್ಚುತ್ತಿವೆ. ಹೊಸ ಪರಿವರ್ತನೆಯ ಸಾಂಕ್ರಾಮಿಕ ಆತಂಕಕಾರಿಯಾಗಿದೆ. ಇದನ್ನು ತಡೆಯಲು ಮೂಲಭೂತ ಸಾರ್ವಜನಿಕ ಆರೋಗ್ಯ ಕ್ರಮಗಳನ್ನು ಬಲಪಡಿಸುವ ಅಗತ್ಯವಿದೆ. ನಮ್ಮಲ್ಲಿರುವ ಎಲ್ಲಾ ಪರಿಕರಗಳನ್ನು ನಾವು ಅನ್ವಯಿಸಬೇಕಾಗಿದೆ ಎಂದಿದ್ದಾರೆ. 

ಕಣ್ಗಾವಲು, ಪರೀಕ್ಷೆ, ಸಂಪರ್ಕ ಪತ್ತೆಹಚ್ಚುವಿಕೆ, ಪ್ರತ್ಯೇಕತೆ, ಕ್ಯಾರೆಂಟೈನ್ ಮತ್ತು ಆರೈಕೆ - ಇವೆಲ್ಲವೂ ಸೋಂಕು ಹರಡುವಿಕೆ ತಡೆಯಲು ಹಾಗೂ ಜೀವಗಳನ್ನು ಉಳಿಸಲು ಕೆಲಸ ಮಾಡುತ್ತವೆ ಮತ್ತು ಲಸಿಕೆ ವಿತರಣೆಗೆ ಪ್ರತ್ಯೇಕ ವಿಧಾನ ಹುಡುಕಲು ಕೂಡ ಸಹಾಯ ಮಾಡುತ್ತದೆ ಎಂದು ಅಭಿಪ್ರಾಯಪಟ್ಟಿದ್ದಾರೆ. ಮಾಸ್ಕ್  ಧರಿಸುವಿಕೆ, ಕೈಯಲ್ಲಿ ನೈರ್ಮಲ್ಯ, ಸಾಮಾಜಿಕ ದೂರವನ್ನು ಜನರು ನಿರಂತರವಾಗಿ ಪಾಲಿಸಬೇಕು ಮತ್ತು ಲಸಿಕೆ ಪಡೆದವರು ಕೂಡ ಇವುಗಳನ್ನು ಮರೆಯಬಾರದು ಎಂದಿದ್ದಾರೆ.

ಪ್ರಸ್ತುತ ಪ್ರಕರಣಗಳ ಉಲ್ಬಣದಲ್ಲಿ ವೈರಸ್ ರೂಪಾಂತರಗಳ ಪಾತ್ರದ ಬಗ್ಗೆ ಮಾತನಾಡಿದ ಡಾ. ಖೇತ್ರಪಾಲ್ ಸಿಂಗ್, ಕೋವಿಡ್-19 ಏಕಾಏಕಿ ಪ್ರಾರಂಭದಿಂದಲೂ ಡಬ್ಲ್ಯುಎಚ್ ಒ ಜಾಗತಿಕವಾಗಿ ರೂಪಾಂತರಗಳನ್ನು ಪತ್ತೆಹಚ್ಚುತ್ತಿದೆ. ಕಾಳಜಿಯ ಹೊಸ ರೂಪಾಂತರಗಳ ಹೊರಹೊಮ್ಮುವಿಕೆಯೊಂದಿಗೆ, ಉದಯೋನ್ಮುಖ ರೂಪಾಂತರಗಳನ್ನು ತ್ವರಿತವಾಗಿ ಗುರುತಿಸಲು ಮತ್ತು ಅಧ್ಯಯನ ಮಾಡಲು ವ್ಯವಸ್ಥೆಗಳನ್ನು ಸ್ಥಾಪಿಸಲು ಈ ಪ್ರಯತ್ನಗಳನ್ನು ಹೆಚ್ಚಿಸಲಾಗಿದೆ. ರೂಪಾಂತರಗಳ ಸಂಭವಿಸುವಿಕೆಯ ಮಾಹಿತಿಯು ಇನ್ನೂ ವ್ಯವಸ್ಥಿತ ಮತ್ತು ಸಾರ್ವತ್ರಿಕವಾಗಿಲ್ಲ. ಈ ನಿಟ್ಟಿನಲ್ಲಿ ಡಬ್ಲ್ಯುಎಚ್ ಒ ಇತರ ದೇಶಗಳೊಂದಿಗೆ ಕೆಲಸ ಮಾಡುತ್ತಿದೆ ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

GBA ಆಯ್ತು.. ಈಗ ಗ್ರೇಟರ್ ಮೈಸೂರು ಸಿಟಿ ಕಾರ್ಪೋರೇಷನ್ ಗೆ ಸಂಪುಟ ಅನುಮೋದನೆ!

'ಮಾತು' ಜಗತ್ತಿಗೆ ಉತ್ತಮವಾಗದ ಹೊರತು ಅದು ಶಕ್ತಿಯಲ್ಲ; ಡಿಕೆಶಿ ಪೋಸ್ಟ್​​ಗೆ CM ಸಿದ್ದರಾಮಯ್ಯ ಕೌಂಟರ್

ಮಹಿಳೆಗೆ ಕಚ್ಚಿದ ನಾಯಿ, ಪ್ರಶ್ನೆ ಮಾಡಿದ ಸಂತ್ರಸ್ಥೆಗೆ ಮಾಲಕಿ ಕಪಾಳಮೋಕ್ಷ, Video Viral

ಸಂಸತ್ತಿನಲ್ಲಿ 'ವಂದೇ ಮಾತರಂ', 'ಜೈ ಹಿಂದ್' ಘೋಷಣೆಗಳಿಗೆ ಆಕ್ಷೇಪಣೆ ಯಾಕೆ?: ಬಿಜೆಪಿ ಪ್ರಶ್ನಿಸಿದ ಕಾಂಗ್ರೆಸ್

ಯುದ್ಧ ಸಾರಿದ ನ್ಯೂಜಿಲೆಂಡ್, 25 ಲಕ್ಷ Stone Cold Killers ನಿರ್ಮೂಲನೆ ಮಾಡುವ ಶಪಥ!

SCROLL FOR NEXT