ಹಳಿತಪ್ಪಿದ ರೈಲು 
ವಿದೇಶ

ಈಜಿಪ್ಟ್‌ನಲ್ಲಿ ರೈಲು ಅಪಘಾತ: ಕನಿಷ್ಠ 11 ಜನರ ಸಾವು, 98 ಮಂದಿಗೆ ಗಾಯ

ಉತ್ತರ ಈಜಿಪ್ಟ್‌ನಲ್ಲಿ ರೈಲು ಹಳಿ ತಪ್ಪಿದ್ದು ಘಟನೆಯಲ್ಲಿ ಕನಿಷ್ಠ 11 ಮಂದಿ ಸಾವಿಗೀಡಾಗಿ 98 ಮಂದಿ ಗಾಯಗೊಂಡಿದ್ದಾರೆ.

ಕೈರೋ: ಉತ್ತರ ಈಜಿಪ್ಟ್‌ನಲ್ಲಿ ರೈಲು ಹಳಿ ತಪ್ಪಿದ್ದು ಘಟನೆಯಲ್ಲಿ ಕನಿಷ್ಠ 11 ಮಂದಿ ಸಾವಿಗೀಡಾಗಿ 98 ಮಂದಿ ಗಾಯಗೊಂಡಿದ್ದಾರೆ.

ಈ ಬಗ್ಗೆ ಉತ್ತರ ಈಜಿಪ್ಟ್‌ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದ್ದು, ಘಟನೆಯಲ್ಲಿ 11 ಮಂದಿ ಸಾವಿಗೀಡಾಗಿ, 98 ಮಂದಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲಾಗಿದೆ. ರಕ್ಷಣಾ ಕಾರ್ಯಾಚರಣೆ ಭರದಿಂದ ಸಾಗಿದ್ದು, ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಭೀತಿ ಎದುರಾಗಿದೆ.

ಕೈರೋ ಉತ್ತರಕ್ಕೆ ಕಲ್ಯುಬಿಯಾದಲ್ಲಿ ಸಂಭವಿಸಿದ ಘಟನೆಯಲ್ಲಿ 11 ಜನರು ಮೃತಪಟ್ಟಿದ್ದಾರೆ ಎಂದು ಅಲ್ ಅರೇಬಿಯಾ ಪ್ರಸಾರ ವರದಿ ಮಾಡಿದೆ, ಮನ್ಸೌರಾ ನಗರದಿಂದ ದೇಶದ ರಾಜಧಾನಿ ಕೈರೋಗೆ ಹೋಗುವಾಗ ರೈಲು ಹಳಿ ತಪ್ಪಿದೆ.

ರಾಜಧಾನಿಯಿಂದ 40 ಕಿಲೋಮೀಟರ್ ದೂರದಲ್ಲಿರುವ ನೈಲ್ ಡೆಲ್ಟಾದ ಸಣ್ಣ ಪಟ್ಟಣವಾದ ಟೌಕ್ ನಲ್ಲಿ ರೈಲು ಅಪಘಾತ ಸಂಭವಿಸಿದೆ. ಕೈರೋದಿಂದ ಮನ್ಸೌರಾಕ್ಕೆ ಸಂಚರಿಸುತ್ತಿದ್ದ ರೈಲಿನ 4 ಬೋಗಿಗಳು ಹಳಿತಪ್ಪಿದ ಪರಿಣಾಮ ದುರಂತ ಸಂಭವಿಸಿದೆ. ಸ್ಥಳಕ್ಕೆ 50 ಕ್ಕೂ ಅಧಿಕ ಅಂಬುಲೆನ್ಸ್ ಗಳನ್ನು ತಕ್ಷಣಕ್ಕೆ  ರವಾನಿಸಲಾಗಿದ್ದು, ಗಾಯಾಳುಗಳನ್ನು ರಕ್ಷಿಸಲಾಗಿದೆ ಸೇನೆಯ ನೆರವಿನೊಂದಿಗೆ ರಕ್ಷಣಾ ಕಾರ್ಯಾಚರಣೆ ಕೈಗೊಳ್ಳಲಾಗಿದೆ. ದುರಂತದ ಕುರಿತಾಗಿ ತನಿಖೆ ಕೈಗೊಳ್ಳಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಒಂದು ತಿಂಗಳ ಅಂತರದಲ್ಲಿ ಈಜಿಪ್ಟ್‌ನಲ್ಲಿ ಸಂಭವಿಸಿದ ಮೂರನೇ ರೈಲು ದುರಂತ ಇದಾಗಿದ್ದು, ಈ ಹಿಂದೆ ಸೋಹಾಗ್‌ನ ಈಜಿಪ್ಟ್ ಆಡಳಿತದ ತಹ್ತಾ ಜಿಲ್ಲೆಯಲ್ಲಿ ಎರಡು ರೈಲುಗಳು ಡಿಕ್ಕಿ ಹೊಡೆದ ಪರಿಣಾಮ ಕಳೆದ ತಿಂಗಳು 32 ಜನರು ಸಾವನ್ನಪ್ಪಿದ್ದರು ಮತ್ತು 165 ಮಂದಿ ಗಾಯಗೊಂಡಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

SCROLL FOR NEXT