ಸಂಗ್ರಹ ಚಿತ್ರ 
ವಿದೇಶ

ಗಡಿ ಸಮಸ್ಯೆಯನ್ನು 'ಸೂಕ್ತ ಸ್ಥಾನ'ದಲ್ಲಿ ಇರಿಸಿ, ದೀರ್ಘಾವಧಿಯ ಸಂಬಂಧಗಳತ್ತ ಗಮನ ಹರಿಸಿ: ಭಾರತಕ್ಕೆ ಚೀನಾ

ವಾಸ್ತವ ನಿಯಂತ್ರಣ ರೇಖೆಯ(ಎಲ್‌ಎಸಿ) ಉದ್ದಕ್ಕೂ ಶಾಂತಿ ಮತ್ತು ಸ್ಥಿರತೆಯನ್ನು ಕಾಪಾಡಿಕೊಳ್ಳಲು ಚೀನಾ ಬದ್ಧವಾಗಿದ್ದು ಗಡಿ ಸಮಸ್ಯೆಯನ್ನು 'ಸೂಕ್ತ ಸ್ಥಾನದಲ್ಲಿ' ಇರಿಸಿ ಮತ್ತು ದೀರ್ಘಾವಧಿಯ ಅಭಿವೃದ್ಧಿಗೆ ಭಾರತ ಮುಂದಾಗಬೇಕು ಎಂದು ಹೇಳಿದೆ.

ಬೀಜಿಂಗ್: ವಾಸ್ತವ ನಿಯಂತ್ರಣ ರೇಖೆಯ(ಎಲ್‌ಎಸಿ) ಉದ್ದಕ್ಕೂ ಶಾಂತಿ ಮತ್ತು ಸ್ಥಿರತೆಯನ್ನು ಕಾಪಾಡಿಕೊಳ್ಳಲು ಚೀನಾ ಬದ್ಧವಾಗಿದ್ದು ಗಡಿ ಸಮಸ್ಯೆಯನ್ನು 'ಸೂಕ್ತ ಸ್ಥಾನದಲ್ಲಿ' ಇರಿಸಿ ಮತ್ತು ದೀರ್ಘಾವಧಿಯ ಅಭಿವೃದ್ಧಿಗೆ ಭಾರತ ಮುಂದಾಗಬೇಕು ಎಂದು ಹೇಳಿದೆ.

ಎಲ್‌ಎಸಿ ಉದ್ದಕ್ಕೂ ಶಾಂತಿ ಕಾಪಾಡಲು ಉಭಯ ದೇಶಗಳ ನಾಯಕರ ನಡುವೆ ಒಮ್ಮತದ ಮಾತುಕತೆ ನಡೆದಿದ್ದರೂ ಚೀನಾ ಮಾತ್ರ ಕಾರ್ಪೆಟ್ ಕೆಳಗೆ ನುಗ್ಗುವ ಪ್ರಯತ್ನ ಮಾಡುತ್ತಿದೆ ಎಂದು ಚೀನಾ ಭಾರತೀಯ ರಾಯಭಾರಿ ವಿಕ್ರಮ್ ಮಿಸ್ರಿ ಪ್ರಶ್ನಿಸಿದ್ದರು. 

ಈ ಸಂಬಂಧ ಉತ್ತರಿಸಿದ ಚೀನಾದ ವಿದೇಶಾಂಗ ಸಚಿವಾಲಯದ ವಕ್ತಾರ ವಾಂಗ್ ವೆನ್ಬಿನ್, ಭಾರತ ದ್ವಿಪಕ್ಷೀಯ ಮಾತುಕತೆ ಸಂಬಂಧ ದೀರ್ಘಾವಧಿಯ ಅಭಿವೃದ್ಧಿಗೆ ಶ್ರಮಿಸಬೇಕು ಎಂದರು. 

'ಚೀನಾ-ಭಾರತದ ಗಡಿ ಪರಿಸ್ಥಿತಿಯ ವಿಷಯದಲ್ಲಿ, ಚೀನಾದ ನಿಲುವು ಸ್ಥಿರ ಮತ್ತು ಸ್ಪಷ್ಟವಾಗಿದೆ. ಗಡಿ ಪ್ರದೇಶಗಳಲ್ಲಿ ಶಾಂತಿ ಮತ್ತು ಸ್ಥಿರತೆಯನ್ನು ಕಾಪಾಡಿಕೊಳ್ಳಲು ನಾವು ಬದ್ಧರಾಗಿದ್ದೇವೆ ಮತ್ತು ನಮ್ಮ ಪ್ರಾದೇಶಿಕ ಸಾರ್ವಭೌಮತ್ವ ಮತ್ತು ಸುರಕ್ಷತೆಯನ್ನು ಕಾಪಾಡಲು ನಾವು ದೃಢವಾಗಿ ನಿರ್ಧರಿಸಿದ್ದೇವೆ' ಎಂದು ವಾಂಗ್ ಹೇಳಿದರು.

ಜಾಗತಿಕ ವ್ಯವಹಾರಗಳ ಭಾರತೀಯ ಮಂಡಳಿಯ ವರ್ಚುವಲ್ ಶೃಂಗದಲ್ಲಿ ಮಾತನಾಡಿದ್ದ ವಿಕ್ರಮ್ ಮಿಸ್ರಿ, ಉಭಯ ರಾಷ್ಟ್ರಗಳ ಅಧಿಕಾರಿಗಳು ನಿರ್ಲಕ್ಷಿಸುತ್ತಿದ್ದಾರೆ. ಬಹು ಧ್ರುವೀಯ ಜಗತ್ತಿನಲ್ಲಿ ಒಪ್ಪಂದ ಮತ್ತು ಸಮಾಲೋಚನೆಗೊ ಮುನ್ನ ಯಾವ ರಾಷ್ಟ್ರವೂ ತನ್ನದೇ ಅಜೆಂಡಾ ಆಧಾರಿತ ನಿರ್ಣಯಕ್ಕೆ ಬರಬಾರದು. ಇತರರ ಅಭಿಪ್ರಾಯ ಅಲಕ್ಷಿಸಿ, ಸ್ವಹಿತಾಸಕ್ತಿ ಸ್ಥಾಪಿಸಲು ಯತ್ನಿಸಬಾರುದ ಎಂದು ಹೇಳಿದ್ದರು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇರಾನ್ ಆರ್ಥಿಕ ಬಿಕ್ಕಟ್ಟು: ಇಂಟರ್ನೆಟ್‌ ಸ್ಥಗಿತಗೊಳಿಸಿದರೂ ನಿಲ್ಲದ ಉದ್ವಿಗ್ನತೆ; 13ನೇ ದಿನಕ್ಕೆ ಕಾಲಿಟ್ಟ ಪ್ರತಿಭಟನೆ, ಈವರೆಗೂ 200ಕ್ಕೂ ಹೆಚ್ಚು ಮಂದಿ ಬಲಿ

ಭಾರತ-ಪಾಕ್ ಯುದ್ಧ ನಿಲ್ಲಿಸಿದ್ದು ನಾನೇ, ನೊಬೆಲ್​ ಶಾಂತಿ ಪ್ರಶಸ್ತಿಗೆ ನನ್ನಷ್ಟು ಅರ್ಹರು ಯಾರೂ ಇಲ್ಲ; ಡೊನಾಲ್ಡ್ ಟ್ರಂಪ್

WPL 2026: 4 ಓವರ್, 1 ಮೇಡನ್.. ಸೌಂದರ್ಯ ಅಷ್ಟೇ ಅಲ್ಲ.. ಪ್ರದರ್ಶನದಲ್ಲೂ ಟಾಪ್.. RCBಯ ಲೇಡಿ ಹೇಜಲ್ವುಡ್ Lauren Bell!

ಡಿ-ಕೋಡ್: ದ್ವೇಷ ಭಾಷಣ ಮಸೂದೆ ಎಂಬ ‘ಗರಗಸ’; DDT ಆಗುವತ್ತ ಕರ್ನಾಟಕ ಸರ್ಕಾರ

ಕೇರಳದ ಕನ್ನಡ ಮಾಧ್ಯಮ ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಮಸೂದೆ ವಿರುದ್ಧ ರಾಷ್ಟ್ರಪತಿಗೆ ನಿಯೋಗ; ರಾಜ್ಯ ಸರ್ಕಾರ

SCROLL FOR NEXT